Homeಅಂತರಾಷ್ಟ್ರೀಯಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಮಧ್ಯಸ್ಥಿಕೆ: ತಮ್ಮ ಹೇಳಿಕೆ ಪುನರಾವರ್ತಿಸಿದ ಟ್ರಂಪ್

ಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಮಧ್ಯಸ್ಥಿಕೆ: ತಮ್ಮ ಹೇಳಿಕೆ ಪುನರಾವರ್ತಿಸಿದ ಟ್ರಂಪ್

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಮೇ ತಿಂಗಳಲ್ಲಿ ಕೊನೆಗೊಳಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದರು. ಈ ಸಾಧನೆಗೆ ಅವರ ಆಡಳಿತದ ವ್ಯಾಪಾರ ಮಾತುಕತೆಗಳು ಮತ್ತು ಸುಂಕದ ಬೆದರಿಕೆಗಳು ಕಾರಣ. ಇವು ಜಾಗತಿಕ ವಿವಾದಗಳನ್ನು ಪರಿಹರಿಸುವಲ್ಲಿ ಪರಿಣಾಮಕಾರಿ ಎಂದು ಅವರು ಹೇಳಿಕೊಂಡರು.

ಆದರೆ, ಅವರ ಇತ್ತೀಚಿನ ಹೇಳಿಕೆಯೊಂದಿಗೆ ಸಂಘರ್ಷದ ಆವೃತ್ತಿಯೂ ಬದಲಾಗುತ್ತಲೇ ಇದೆ. ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ‘ಎಂಟು ವಿಮಾನಗಳನ್ನು’ ಹೊಡೆದುರುಳಿಸಲಾಗಿದೆ ಎಂಬ ಹೊಸ ಹೇಳಿಕೆಯೂ ಸೇರಿಕೊಂಡಿದೆ.

ಮಿಯಾಮಿಯಲ್ಲಿ ನಡೆದ ಅಮೇರಿಕಾ ವ್ಯಾಪಾರ ವೇದಿಕೆಯಲ್ಲಿ ಮಾತನಾಡಿದ ಟ್ರಂಪ್, ಅಮೆರಿಕವು ಬಲದ ಮೂಲಕ ಜಾಗತಿಕ ಶಾಂತಿಯನ್ನು ಉತ್ತೇಜಿಸುತ್ತಿದೆ ಎಂದು ಹೇಳಿದರು. ಇತರ ರಾಷ್ಟ್ರಗಳು ಇನ್ನು ಮುಂದೆ ಅದನ್ನು ಸವಾಲು ಮಾಡಲು ಧೈರ್ಯ ಮಾಡುತ್ತಿಲ್ಲ ಎಂದು ಪ್ರತಿಪಾದಿಸಿದರು. ಇತ್ತೀಚೆಗೆ ಚೀನಾ, ಜಪಾನ್ ಮತ್ತು ಮಲೇಷ್ಯಾದೊಂದಿಗೆ ಸಹಿ ಹಾಕಲಾದ ವ್ಯಾಪಾರ ಒಪ್ಪಂದಗಳ ಸರಣಿಯನ್ನು ಎತ್ತಿ ತೋರಿಸುತ್ತಾ, ತಮ್ಮ ಆಡಳಿತದ ಎರಡನೇ ಅವಧಿಯಲ್ಲಿ ‘ಎಂಟು ತಿಂಗಳಲ್ಲಿ ಎಂಟು ಯುದ್ಧಗಳನ್ನು’ ಕೊನೆಗೊಳಿಸಿದೆ ಎಂಬ ಹೇಳಿಕೆಯನ್ನು ಅವರು ಪುನರಾವರ್ತಿಸಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಯನ್ನು ಉಲ್ಲೇಖಿಸುತ್ತಾ, ಟ್ರಂಪ್ ತಮ್ಮ ಆಡಳಿತವು ನವದೆಹಲಿ ಮತ್ತು ಇಸ್ಲಾಮಾಬಾದ್‌ನೊಂದಿಗೆ ವ್ಯಾಪಾರ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸುತ್ತಿರುವಾಗ, ಎರಡೂ ದೇಶಗಳು ಯುದ್ಧದ ಅಂಚಿನಲ್ಲಿವೆ ಎಂದು ಅವರು ತಿಳಿದುಕೊಂಡರು ಎಂದು ಹೇಳಿದರು. “ಅವರು ಯುದ್ಧ ಮುಂದುವರಿಸಿದರೆ ತಮ್ಮ ಆಡಳಿತವು ಎರಡೂ ದೇಶಗಳೊಂದಿಗೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವ್ಯಾಪಾರ ವೇದಿಕೆ ಮಾಡಿದ ತಮ್ಮ ಭಾಷಣದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಯುದ್ಧದ ಅಂಚಿನಲ್ಲಿವೆ ಎಂದು ಪತ್ರಿಕೆಯಲ್ಲಿ ಓದಿದಾಗ ಎರಡೂ ದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದೆ ಎಂದು ನೆನಪಿಸಿಕೊಂಡರು. “ಏಳು ಅಥವಾ ಎಂಟು ವಿಮಾನಗಳನ್ನು ಹೊಡೆದುರುಳಿಸಲಾಗಿದೆ, ಮೂಲಭೂತವಾಗಿ ಎಂಟು ವಿಮಾನಗಳು” ಎಂದು ಅವರು ಹೇಳಿದರು. ಇದು ಅವರು ಹಿಂದೆ ಒದಗಿಸಿದ ಅಂಕಿಅಂಶಗಳಲ್ಲಿ ಮತ್ತೊಂದು ಬದಲಾವಣೆಯನ್ನು ಸೂಚಿಸುತ್ತದೆ.

ಟ್ರಂಪ್ ಅವರ ಹಿಂದಿನ ಹೇಳಿಕೆಗಳು ವಿಭಿನ್ನ ಸಂಖ್ಯೆಗಳನ್ನು ಉಲ್ಲೇಖಿಸಿವೆ. ಅವರು ಆರಂಭದಲ್ಲಿ ಮೂರು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದರು. ನಂತರ ಜುಲೈನಲ್ಲಿ ಅದನ್ನು ಐದಕ್ಕೆ ಪರಿಷ್ಕರಿಸಿದರು, ಆಗಸ್ಟ್‌ನಲ್ಲಿ ಅದನ್ನು ಏಳಕ್ಕೆ ಹೆಚ್ಚಿಸಿದರು. ಈಗ ಆ ಸಂಖ್ಯೆಯನ್ನು ಎಂಟಕ್ಕೆ ಹೆಚ್ಚಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪ: 24 ವರ್ಷಗಳ ಬಳಿಕ ವ್ಯಕ್ತಿಯನ್ನು ಬಂಧಿಸಿದ ಕೇರಳ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...