Homeಕರ್ನಾಟಕವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ, ತಮ್ಮನ್ನು ಸುರಕ್ಷಿತ ನೆರೆಯ ದೇಶಗಳಾದ ರೊಮೇನಿಯಾ ಮತ್ತು ಹಂಗೇರಿಯಂತಹ ಇತರ ದೇಶಗಳಿಗೆ ಸ್ಥಳಾಂತರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರಲ್ಲಿ ಹೆಚ್ಚಿನವರು ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಇವಾನೊ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮುಂತಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ತರಬೇತಿ ಪಡೆಯುತ್ತಿದ್ದಾರೆ.

ಉಕ್ರೇನ್ ದೇಶವು ಗುಣಮಟ್ಟದ ಶಿಕ್ಷಣವನ್ನು ನೀಡುವ ಅನೇಕ ಜಾಗತಿಕ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ಹೊಂದಿದೆ. ಅಲ್ಲಿನ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗಳು ಪಾಕೆಟ್ (ಶಿಕ್ಷಣ ವೆಚ್ಚ) ಸ್ನೇಹಿಯಾಗಿರುವುದರಿಂದ ಭಾರತದ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳುತ್ತಾರೆ.

ಕರ್ನಾಟಕ ಮೂಲದ ಹಲವಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಅವರಲ್ಲಿ ಉಡುಪಿ ಮೂಲದ ಗ್ಲೆನ್ವಿಲ್ ಫೆರ್ನಾಂಡಿಸ್ ಕೂಡ ಒಬ್ಬರು. ಅವರು ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ, ಉಕ್ರೇನ್‌ನಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಉಡುಪಿಯಲ್ಲಿರುವ ಅವರ ತಂದೆ ಮೆಲ್ವಿನ್ ಫೆರ್ನಾಂಡಿಸ್ ಅವರು ಭಯಭೀತರಾಗಿದ್ದಾರೆ.

“ಕರ್ನಾಟಕ ಸರ್ಕಾರವು ದೀರ್ಘಾವಧಿಯಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಸುಧಾರಿಸಬೇಕು. ಕರ್ನಾಟಕದಲ್ಲಿ ಶ್ರೀಮಂತರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿದೆ. ಆದರೆ, ಮಧ್ಯಮ ವರ್ಗದ ಕುಟುಂಬಗಳು ಇಲ್ಲಿನ ಭಾರೀ ವೆಚ್ಚವನ್ನು ಭರಿಸಲಾಗದೇ, ತಮ್ಮ ಮಕ್ಕಳನ್ನು ಕಡಿಮೆ ವೆಚ್ಚವಿರುವ ವಿದೇಶಿ ವಿವಿಗಳಿಗೆ ಕಳುಹಿಸಿ ಶಿಕ್ಷಣ ಕೊಡಿಸುವಂತಾಗಿದೆ. ಇದೇ ಕಾರಣದಿಂದಾಗಿ, ನಾವು ನಮ್ಮ ಮಗನನ್ನು ಉಕ್ರೇನ್‌ಗೆ ಕಳಿಸಬೇಕಾಯಿತು” ಎಂದು ಮೆಲ್ಟಿನ್ ಫೆರ್ನಾಂಡಿಸ್ ಹೇಳಿದ್ದಾರೆ.

“ಕರ್ನಾಟಕದಲ್ಲಿ ನೀಟ್ ಮೂಲಕ ಸೀಟು ಸಿಗದಿದ್ದರೆ ವೈದ್ಯಕೀಯ ಶಿಕ್ಷಣದ ವೆಚ್ಚ ಐದೂವರೆ ವರ್ಷಗಳ ಕೋರ್ಸ್‌ಗೆ 60 ಲಕ್ಷ ರೂ. ಆಗುತ್ತದೆ. ಆದರೆ ಉಕ್ರೇನ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗೆ 35 ಲಕ್ಷದಿಂದ 40 ಲಕ್ಷ ರೂ. ಖರ್ಚಾಗುತ್ತದೆ. ನಾನು ದುಬೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ, ನನ್ನ ಮಗನಿಗೆ ಉಕ್ರೇನ್ ಉತ್ತಮ ಆಯ್ಕೆಯಾಗುತ್ತದೆ ಎಂದು ನಾನು ನಿರ್ಧರಿಸಿ, ಅಲ್ಲಿಗೆ ಕಳುಹಿಸಿದೆ” ಎಂದು ಅವರು ಹೇಳುತ್ತಾರೆ.

ವಿದೇಶಗಳಲ್ಲಿ ಸಾಕಷ್ಟು ಸುತ್ತಾಡಿರುವ ಉಡುಪಿಯ ಶಿಕ್ಷಣ ತಜ್ಞ ವಿಜಯ್ ಪಿ.ರಾವ್ ಅವರು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ಭಾರತದ ಶಿಕ್ಷಣ ವ್ಯವಸ್ಥೆಯು ಸಾಕಷ್ಟು ಅಸ್ತವ್ಯಸ್ತವಾಗಿದೆ. ಭಾರತದಲ್ಲಿ ಸಮಂಜಸವಾದ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಸಿಗದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು USSR ಮತ್ತು ಸುತ್ತಲಿನ ದೇಶಗಳಿಗೆ ಹೋಗುವುದು ಸ್ವಲ್ಪ ಬೇಸರವನ್ನುಂಟು ಮಾಡುತ್ತದೆ. ಭಾರತದಂತಹ ಬೃಹತ್ ದೇಶವು ವೈದ್ಯಕೀಯ ಶಿಕ್ಷಣವನ್ನು ಸಮಂಜಸವಾದ ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗದೇ ಇರುವುದು ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ದಾಳಿಗೊಳಗಾಗುತ್ತಿರುವ ಪ್ರದೇಶದಲ್ಲಿರುವ ಜನರನ್ನು ಮಿಲಿಟರಿ ಬಂಕರ್‌ಗಳಿಗೆ ಸ್ಥಳಾಂತರಿಸಿ, ರಕ್ಷಿಸಲಾಗುತ್ತಿದೆ. ಇದುವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯರು, ಮತ್ತೆ ತವರಿಗೆ ಮರಳಲು ಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.


ಇದನ್ನೂ ಓದಿರಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....