Homeಕರ್ನಾಟಕವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ, ತಮ್ಮನ್ನು ಸುರಕ್ಷಿತ ನೆರೆಯ ದೇಶಗಳಾದ ರೊಮೇನಿಯಾ ಮತ್ತು ಹಂಗೇರಿಯಂತಹ ಇತರ ದೇಶಗಳಿಗೆ ಸ್ಥಳಾಂತರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರಲ್ಲಿ ಹೆಚ್ಚಿನವರು ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಇವಾನೊ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮುಂತಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ತರಬೇತಿ ಪಡೆಯುತ್ತಿದ್ದಾರೆ.

ಉಕ್ರೇನ್ ದೇಶವು ಗುಣಮಟ್ಟದ ಶಿಕ್ಷಣವನ್ನು ನೀಡುವ ಅನೇಕ ಜಾಗತಿಕ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ಹೊಂದಿದೆ. ಅಲ್ಲಿನ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗಳು ಪಾಕೆಟ್ (ಶಿಕ್ಷಣ ವೆಚ್ಚ) ಸ್ನೇಹಿಯಾಗಿರುವುದರಿಂದ ಭಾರತದ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳುತ್ತಾರೆ.

ಕರ್ನಾಟಕ ಮೂಲದ ಹಲವಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಅವರಲ್ಲಿ ಉಡುಪಿ ಮೂಲದ ಗ್ಲೆನ್ವಿಲ್ ಫೆರ್ನಾಂಡಿಸ್ ಕೂಡ ಒಬ್ಬರು. ಅವರು ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ, ಉಕ್ರೇನ್‌ನಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಉಡುಪಿಯಲ್ಲಿರುವ ಅವರ ತಂದೆ ಮೆಲ್ವಿನ್ ಫೆರ್ನಾಂಡಿಸ್ ಅವರು ಭಯಭೀತರಾಗಿದ್ದಾರೆ.

“ಕರ್ನಾಟಕ ಸರ್ಕಾರವು ದೀರ್ಘಾವಧಿಯಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಸುಧಾರಿಸಬೇಕು. ಕರ್ನಾಟಕದಲ್ಲಿ ಶ್ರೀಮಂತರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿದೆ. ಆದರೆ, ಮಧ್ಯಮ ವರ್ಗದ ಕುಟುಂಬಗಳು ಇಲ್ಲಿನ ಭಾರೀ ವೆಚ್ಚವನ್ನು ಭರಿಸಲಾಗದೇ, ತಮ್ಮ ಮಕ್ಕಳನ್ನು ಕಡಿಮೆ ವೆಚ್ಚವಿರುವ ವಿದೇಶಿ ವಿವಿಗಳಿಗೆ ಕಳುಹಿಸಿ ಶಿಕ್ಷಣ ಕೊಡಿಸುವಂತಾಗಿದೆ. ಇದೇ ಕಾರಣದಿಂದಾಗಿ, ನಾವು ನಮ್ಮ ಮಗನನ್ನು ಉಕ್ರೇನ್‌ಗೆ ಕಳಿಸಬೇಕಾಯಿತು” ಎಂದು ಮೆಲ್ಟಿನ್ ಫೆರ್ನಾಂಡಿಸ್ ಹೇಳಿದ್ದಾರೆ.

“ಕರ್ನಾಟಕದಲ್ಲಿ ನೀಟ್ ಮೂಲಕ ಸೀಟು ಸಿಗದಿದ್ದರೆ ವೈದ್ಯಕೀಯ ಶಿಕ್ಷಣದ ವೆಚ್ಚ ಐದೂವರೆ ವರ್ಷಗಳ ಕೋರ್ಸ್‌ಗೆ 60 ಲಕ್ಷ ರೂ. ಆಗುತ್ತದೆ. ಆದರೆ ಉಕ್ರೇನ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗೆ 35 ಲಕ್ಷದಿಂದ 40 ಲಕ್ಷ ರೂ. ಖರ್ಚಾಗುತ್ತದೆ. ನಾನು ದುಬೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ, ನನ್ನ ಮಗನಿಗೆ ಉಕ್ರೇನ್ ಉತ್ತಮ ಆಯ್ಕೆಯಾಗುತ್ತದೆ ಎಂದು ನಾನು ನಿರ್ಧರಿಸಿ, ಅಲ್ಲಿಗೆ ಕಳುಹಿಸಿದೆ” ಎಂದು ಅವರು ಹೇಳುತ್ತಾರೆ.

ವಿದೇಶಗಳಲ್ಲಿ ಸಾಕಷ್ಟು ಸುತ್ತಾಡಿರುವ ಉಡುಪಿಯ ಶಿಕ್ಷಣ ತಜ್ಞ ವಿಜಯ್ ಪಿ.ರಾವ್ ಅವರು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ಭಾರತದ ಶಿಕ್ಷಣ ವ್ಯವಸ್ಥೆಯು ಸಾಕಷ್ಟು ಅಸ್ತವ್ಯಸ್ತವಾಗಿದೆ. ಭಾರತದಲ್ಲಿ ಸಮಂಜಸವಾದ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಸಿಗದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು USSR ಮತ್ತು ಸುತ್ತಲಿನ ದೇಶಗಳಿಗೆ ಹೋಗುವುದು ಸ್ವಲ್ಪ ಬೇಸರವನ್ನುಂಟು ಮಾಡುತ್ತದೆ. ಭಾರತದಂತಹ ಬೃಹತ್ ದೇಶವು ವೈದ್ಯಕೀಯ ಶಿಕ್ಷಣವನ್ನು ಸಮಂಜಸವಾದ ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗದೇ ಇರುವುದು ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ದಾಳಿಗೊಳಗಾಗುತ್ತಿರುವ ಪ್ರದೇಶದಲ್ಲಿರುವ ಜನರನ್ನು ಮಿಲಿಟರಿ ಬಂಕರ್‌ಗಳಿಗೆ ಸ್ಥಳಾಂತರಿಸಿ, ರಕ್ಷಿಸಲಾಗುತ್ತಿದೆ. ಇದುವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯರು, ಮತ್ತೆ ತವರಿಗೆ ಮರಳಲು ಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.


ಇದನ್ನೂ ಓದಿರಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...