Homeಸಾಮಾಜಿಕಬೀದರ್ ಡಿಸಿ ವರ್ಗಾವಣೆ ಹಿಂದಿದೆಯಾ `ಮೆಡಿಕಲ್ ಮಾಫಿಯಾ’?

ಬೀದರ್ ಡಿಸಿ ವರ್ಗಾವಣೆ ಹಿಂದಿದೆಯಾ `ಮೆಡಿಕಲ್ ಮಾಫಿಯಾ’?

- Advertisement -
- Advertisement -

ಬಂದ ಎರಡೂವರೆ ತಿಂಗಳಲ್ಲೇ ಬೀದರ್ ಡೀಸಿ ಎತ್ತಂಗಡಿಯಾಗಿದೆ. ಒನ್ಸ್ ಎಗೇನ್ ದಕ್ಷ, ಜನಸ್ನೇಹಿ ಅನ್ನಿಸಿಕೊಂಡ ಅಧಿಕಾರಿಗಳ ಇಂತಹ ದಿಢೀರ್ ವರ್ಗಾವಣೆಯ ಬೆನ್ನಿಗೆ ಏನೇನು ಚರ್ಚೆಗಳು ನಡೆಯಬೇಕೊ ಅವೆಲ್ಲವೂ ಶುರುವಾಗಿವೆ. ನಿಜಕ್ಕೂ ಈಗ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅಲ್ಪಾವಧಿಯಲ್ಲೇ ಜನರ ಮೆಚ್ಚುಗೆ ಗಳಿಸಿದ್ದಂತವರು. ಅದರಲ್ಲೂ ಬೀದರ್ ಜಿಲ್ಲಾ ಆಸ್ಪತ್ರೆಯ ವೈದ್ಯರುಗಳಿಗೆ ಬಿಸಿ ಮುಟ್ಟಿಸಿ, ಇಡೀ ಆಸ್ಪತ್ರೆಯನ್ನು ಸುಧಾರಿಸಿದ ಪರಿಯಿದೆಯಲ್ಲ ಅದು ಜನರ ಮೆಚ್ಚುಗೆ ಗಳಿಸಿತ್ತು. ಆದರೆ ಇದೀಗ ಅಂತವರನ್ನು ವರ್ಗ ಮಾಡಿ ಆ ಜಾಗಕ್ಕೆ “ಭೂಮಿಗೆ ಭಾರವಾಗಿರುವ ವೇಸ್ಟ್ ಬಾಡಿ” ಎಂಬ ಕುಖ್ಯಾತಿಗೆ ಈಡಾಗಿರುವ ಹಳೆಯ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಅವರನ್ನೇ ತಂದು ಕೂರಿಸಲಾಗಿದೆ. ಅಷ್ಟು ಮಾತ್ರವಲ್ಲ, ಶ್ರವಣ್ ಅವರಿಗೆ ಯಾವುದೇ ಹುದ್ದೆ ನೀಡದೆ, ಅವಮಾನಿಸಲಾಗಿದೆ.
ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಿ ನೀತಿಸಂಹಿತೆ ಜಾರಿಯಾದ ಮೇಲೆ ಭಾರತದ ಚುನಾವಣಾ ಆಯೋಗವು ನಿಷ್ಪಕ್ಷಪಾತಿಯಾಗಿ ಮತ್ತು ದಕ್ಷವಾಗಿ ಕಾರ್ಯನಿರ್ವಹಿಸದೆ, ಯಾವುದೊ ಒಂದು ಪಕ್ಷದ ಪರವಾಗಿ ಅಥವಾ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಾರೆಂಬ ಅನುಮಾನವಿದ್ದ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಓದುಗರಿಗೆ ನೆನಪಿರಬಹುದು. ಹಾಗೆ ವರ್ಗಾವಣೆಗೊಂಡವರಲ್ಲಿ ಆಗಿನ ಬೀದರ್ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಕೂಡ ಒಬ್ಬರು. ಅವರ ಜಾಗಕ್ಕೆ ಅನಿರುದ್ಧ್ ಶ್ರವಣ್ ಅವರನ್ನು ನೇಮಕ ಮಾಡಲಾಗಿತ್ತು.
ಪ್ರಸ್ತುತ ನಿಯಮಗಳ ಪ್ರಕಾರ ಐಎಎಸ್ ಅಧಿಕಾರಿಯನ್ನು, ಒಂದು ಸ್ಥಳದಲ್ಲಿ ಎರಡು ವರ್ಷ ಪೂರ್ಣಗೊಳಿಸುವ ಮುನ್ನವೇ ವರ್ಗಾವಣೆ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಆರ್. ಮಹಾದೇವ್ ಅವರು ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಕರಣವು ಮಹಾದೇವ್ ಅವರ ಪರವಾಗಿಯೇ ತೀರ್ಪಿತ್ತು ಮಹಾದೇವ್ ಅವರನ್ನು ಮರಳಿ ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಬೇಕೆಂದು ಆದೇಶ ನೀಡಿತ್ತು. ನ್ಯಾಯಾಧೀಕರಣದ ಈ ತೀರ್ಪನ್ನು ಪ್ರಶ್ನಿಸಿ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟಿನ ಮೊರೆ ಹೋಯಿತು. ಚುನಾವಣೆಗಳು ನಡೆಯುತ್ತಿರುವುದನ್ನು ಪರಿಗಣಿಸಿದ ಹೈಕೋರ್ಟು ನ್ಯಾಯಾಧೀಕರಣದ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು. ಈಗ ಚುನಾವಣೆಗಳು ಮುಗಿದಿರೋದ್ರಿಂದ ಹೈಕೋರ್ಟು ತಡೆಯಾಜ್ಞೆ ತೆರವುಗೊಳಿಸಿ, ನ್ಯಾಯಾಧೀಕರಣದ ತೀರ್ಪು ಎತ್ತಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ದೆಸೆಯಿಂದ ತೊಲಗಿದ್ದ ಮಹಾದೇವ್ ಮತ್ತೆ ಬೀದರ್‍ಗೆ ವಕ್ಕರಿಸಿಕೊಂಡಿದ್ದಾರೆ.
2011 ಬ್ಯಾಚಿನ ಐಎಎಸ್ ಅಧಿಕಾರಿಯಾದ ಅನಿರುದ್ಧ್ ಶ್ರವಣ್ ಯಾವುದೇ ಅಡೆತಡೆಯಿಲ್ಲದಂತೆ, ಗೊಂದಲಗಳಿಲ್ಲದಂತೆ ಮತ್ತು ಎಲ್ಲೂ ಅಹಿತಕರ ಘಟನೆಗಳು ನಡೆಯದಂತೆ ಅಚ್ಚುಕಟ್ಟಾಗಿ ಚುನಾವಣೆಗಳನ್ನು ನಡೆಸಿದ್ದಲ್ಲದೇ, ನಂತರವೂ ಅನೇಕ ಜನಮೆಚ್ಚುವ ಕೆಲಸಗಳನ್ನು ಮಾಡಿದ್ದರು. ಅದರಲ್ಲಿ ಬೀದರ್ ಜಿಲ್ಲಾಸ್ಪತ್ರೆಗೆ ಕಾಯಕಲ್ಪ ನೀಡಿದ್ದು ವಿಶೇಷವಾದದ್ದು. ಅಸಲಿಗೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ಬೋಧಕ ಆಸ್ಪತ್ರೆಯಾಗಿರುವ ಇದು ಈ ಭಾಗದ ಬಡಬಗ್ಗರ ಆಶಾಕಿರಣ. ಖಾಸಗಿ ಆಸ್ಪತ್ರೆಗಳಿಗೆ ದುಡ್ಡು ಖರ್ಚು ಮಾಡಲಾಗದ ಬಡವರು ಈ ಆಸ್ಪತ್ರೆಗೆ ದೌಡಾಯಿಸುತ್ತಾರೆ.
ಆದರೆ, ಇಲ್ಲಿನ ವೈದ್ಯರಿಗೆ ರೊಕ್ಕ ಮಾಡುವ ಕಾಯಿಲೆ ಅಂಟಿಕೊಂಡು, ಪ್ರತಿಯೊಬ್ಬ ವೈದ್ಯರೂ ತಮ್ಮದೇ ಆದ ಸ್ವಂತ ಖಾಸಗಿ ಕ್ಲಿನಿಕ್ ತೆರೆದುಕೊಂಡು ದಿನವಿಡೀ ಅಲ್ಲೇ ಠಿಕಾಣಿ ಹೂಡಿರುತ್ತಿದ್ದರು. ಆಸ್ಪತ್ರೆಯತ್ತ ಮುಖ ಹಾಕುತ್ತಿರಲಿಲ್ಲ. ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ಕುಗಳಲ್ಲಿ ಸೇವೆ ಸಲ್ಲಿಸುವುದು ನಿಯಮಗಳ ಪ್ರಕಾರ ಅಪರಾಧವೇನಲ್ಲ. ಆದರೆ, ಸರ್ಕಾರಿ ಕೆಲಸದ ಅವಧಿ ಮುಗಿದ ಮೇಲೆ ಅಥವಾ ಅದಕ್ಕಿಂತ ಮೊದಲು ಆ ಕೆಲಸ ಮಾಡಬಹುದು. ಆದರೆ, ಬೀದರಿನ ವೈದ್ಯರು ತಮ್ಮ ಸರ್ಕಾರಿ ಕರ್ತವ್ಯವನ್ನೇ ಮರೆತು ಸ್ವಂತ ಕ್ಲಿನಿಕ್ಕುಗಳಲ್ಲಿ ಹಣ ಪೀಕುವ ದಂಧೆಗೆ ಫಿಕ್ಸ್ ಆಗಿದ್ದರು.
ಅತ್ತ ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್‍ರೆ, ಪ್ರಯೋಗಾಲಯ, ಔಷಧಿ ಅಂಗಡಿ ಸೌಕರ್ಯಗಳಿದ್ದರೂ ಜನರಿಗೆ ಅವುಗಳ ಉಪಯೋಗ ದೊರಕುತ್ತಿರಲಿಲ್ಲ. ಯಾಕೆಂದರೆ, ಆಸ್ಪತ್ರೆಯ ಸಿಬ್ಬಂದಿ ಖಾಸಗೀ ಔಷಧಿ ಅಂಗಡಿಗಳು, ಖಾಸಗಿ ಲ್ಯಾಬ್‍ಗಳನ್ನು ಶಿಫಾರಸ್ಸು ಮಾಡಿ ತಾಕೀತು ಮಾಡುತ್ತಿದ್ದರು.
ಅನಿರುದ್ಧ್ ಶ್ರವಣ್ ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ಇದೆಲ್ಲಕ್ಕೂ ಬ್ರೇಕ್ ಬಿತ್ತು. ಮೊದಲ ಸಲ ಆಸ್ಪತ್ರೆಗೆ ಭೇಟಿ ನೀಡಿದಾಗಲೇ ಬಹುತೇಕ ವೈದ್ಯರು ಇಲ್ಲದಿರುವುದನ್ನು ಗಮನಿಸಿದ ಶ್ರವಣ್ ಆವತ್ತಿನಿಂದಲೇ ಚಾಟಿ ಬೀಸುವುದಕ್ಕೆ ಶುರು ಮಾಡಿದರು. ನೋಟಿಸ್ ಜಾರಿ ಮಾಡಿದ್ದಲ್ಲದೆ ಕರ್ತವ್ಯದ ಸಮಯದಲ್ಲಿ ಆಸ್ಪತ್ರೆಯಲ್ಲೇ ಸೇವೆ ಸಲ್ಲಿಸುವುದಾಗಿ ಎಲ್ಲಾ ವೈದ್ಯರಿಂದ ತಲಾ ಒಂದೊಂದು ಲಕ್ಷ ರೂಪಾಯಿ ಬಾಂಡ್ ಬರೆಸಿಕೊಂಡಿದ್ದರು. ಅಷ್ಟಕ್ಕೇ ಸುಮ್ಮನಾಗದೆ, ವಾರಕ್ಕೆ ಎರಡು ಮೂರು ಬಾರಿ ಭೇಟಿ ನೀಡಿ ಚೆಕ್ ಮಾಡುತ್ತಿದ್ದರು. ಹದಗೆಟ್ಟುಹೋಗಿದ್ದ ಆಸ್ಪತ್ರೆ ಒಂದೇ ತಿಂಗಳಲ್ಲಿ ಮತ್ತೆ ಸರಿಹಾದಿಗೆ ಬಂದಿತು. ಚಿಕಿತ್ಸೆ ಬಯಸಿ ಬರುತ್ತಿದ್ದ ಬಡಬಗ್ಗರಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ಸಿಗಲಾರಂಭಿಸಿತು.
ಅನಿರುದ್ಧ್ ಈ ಕ್ರಮದಿಂದ ಬಡರೋಗಿಗಳಿಗೆ ಅನುಕೂಲವಾದರು ವೈದ್ಯರ ಅಕ್ರಮ ಹಣಗಳಿಕೆಗೆ ಬ್ರೇಕ್ ಬಿದ್ದಿತು. ಇದರಿಂದ ಹತಾಶಗೊಂಡ ಅವರು ಶತಗತಾಯ ಶ್ರವಣ್ ಅವರನ್ನು ಎತ್ತಂಗಡಿ ಮಾಡಲೇಬೇಕೆಂಬ ಪ್ರಯತ್ನ ಶುರು ಮಾಡಿಕೊಂಡರು. ಒಬ್ಬ ವೈದ್ಯರೇ ಹೇಳುವಂತೆ ಪ್ರತಿಯೊಬ್ಬ ಡಾಕ್ಟರ್ ತಲಾ ಐದೈದು ಲಕ್ಷ ರೂಪಾಯಿ ಕಲೆಹಾಕಿಕೊಂಡು ಬೆಂಗಳೂರಿಗೆ ಹೋಗಿ ಡೀಸಿ ವರ್ಗಾವಣೆಗೆ ಪ್ರಯತ್ನಿಸಿದ್ದರಂತೆ. ಇದೇ ವೇಳೆಗೆ ಹೈಕೋರ್ಟ್ ಕೂಡಾ ತನ್ನ ತಡೆಯಾಜ್ಞೆ ತೆರವುಗೊಳಿಸಿ ಮತ್ತೆ ಮಹಾದೇವ್ ಅವರನ್ನೇ ಜಿಲ್ಲಾಧಿಕಾರಿಯಾಗಿ ನೇಮಿಸಿದ್ದು ನಿಜಕ್ಕೂ ಈ ವೈದ್ಯರಿಗೆ ಹಾಲು ಕುಡಿದಷ್ಟೇ ಖುಷಿ ಕೊಟ್ಟಿದೆ ಅನ್ನಿಸುತ್ತೆ.
ಕೇವಲ ಆಸ್ಪತ್ರೆಗೆ ಸುಧಾರಣೆ ತಂದಿದ್ದಷ್ಟೇ ಅಲ್ಲ, ವಿಶೇಷ ಕಾರ್ಯಪಡೆಗಳನ್ನು ರಚಿಸಿ ಪ್ಲಾಸ್ಟಿಕ್ ವಿರುದ್ಧ ಸಮರವನ್ನೇ ಸಾರಿದ್ದ ಅನಿರುದ್ಧ್‍ರವರು ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯಿಟ್ಟಿದ್ದರು. ಕೆಟ್ಟ ಪರಿಸ್ಥಿತಿಯಲ್ಲಿರುವ ಜಿಲ್ಲೆಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸುಧಾರಿಸುವುದಕ್ಕೆ ಯೋಜನೆಗಳನ್ನು ರೂಪಿಸಿದ್ದರು. ಬಾಲಕಾರ್ಮಿಕ ವ್ಯವಸ್ಥೆಗೆ ಬ್ರೇಕ್ ಹಾಕಲು ಸಜ್ಜಾಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ತೂಕಡಿಸುತ್ತಿದ್ದ ಅಧಿಕಾರಶಾಹಿ ಆಡಳಿತ ಯಂತ್ರಾಂಗಕ್ಕೆ ಚಾಟಿಯೇಟು ಬೀಸಿ ಚುರುಕುಗೊಳಿಸಿದ್ದರು.
ಜನರ ಅಪಾರ ಮೆಚ್ಚುಗೆ ಗಳಿಸಿದ್ದ ಅನಿರುದ್ಧ್ ಅವರ ಬಗ್ಗೆ ಟೀಮ್ ಯುವ ಸಂಘಟನೆಯ ನೇತಾರ ವಿನಯ್ ಮಾಲಗೆಯವರು ಪತ್ರಿಕೆಯೊಡನೆ ಹೀಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. “ಅನಿರುದ್ಧ್ ಶ್ರವಣ್‍ರವರು ಜಿಲ್ಲಾಧಿಕಾರಿಯಾಗಿದ್ದ 78 ದಿನಗಳು ಕೆಳಹಂತದ ಅಧಿಕಾರಿಗಳಿಗೆ ಕಷ್ಟಕರ ದಿನಗಳಾಗಿದ್ದವು. ಹಿಂದುಳಿದ ಈ ಜಿಲ್ಲೆಯನ್ನು ಹೇಗೆ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು, ಯಾವ ವಿಷಯಗಳಿಗೆ ಹೆಚ್ಚಿನ ಮಹತ್ವ ಕೊಡಬೇಕು ಎಂಬ ಬಗ್ಗೆ ದೂರಗಾಮಿ ದೃಷ್ಟಿಕೋನ ಹೊಂದಿದ್ದರು. ಬೀದರ್ ಮತ್ತು ಬಸವಕಲ್ಯಾಣಗಳನ್ನು ಪ್ರಮುಖ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಂಡಿದ್ದ ಅವರು ಬಡಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಅಭಿಲಾಷೆ ಹಂಚಿಕೊಂಡಿದ್ದರು. ಇಂತಹ ಜನಪರ ಅಧಿಕಾರಿಯ ವರ್ಗಾವಣೆಯಾಗಿರುವುದು ಜಿಲ್ಲೆಯ ಜನರಿಗಾದ ದೊಡ್ಡ ನಷ್ಟ”.
ಈ ಕುರಿತು ಸ್ವತಃ ಅನಿರುದ್ಧ್ ಶ್ರವಣ್‍ರನ್ನೇ ಪತ್ರಿಕೆ ಮಾತಿಗೆಳೆದಾಗ, ಸರ್ಕಾರದ ಆದೇಶವನ್ನು ಗೌರವಿಸುತ್ತೇನೆ, ಬೀದರ್‍ನಲ್ಲಿ ನನ್ನ ಅಲ್ಪದಿನಗಳ ಅನುಭವ ಅದ್ಭುತವಾಗಿತ್ತು, ಸುಸೂತ್ರವಾಗಿ ಚುನಾವಣೆ ನಡೆಸಲು ಮತ್ತು ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಹೋರಾಡಲು ಬೀದರ್ ಜನ ನೀಡಿದ ಸಹಕಾರವನ್ನು ನಾನು ಮರೆಯಲಾರೆ ಎಂದರು. ಅವರು ಅದೆಷ್ಟು ಬೀದರ್ ಜನರ ಪ್ರೀತಿವಿಶ್ವಾಸಗಳನ್ನು ಗಳಿಸಿದ್ದರೆಂದರೆ ಕೆಎಟಿ ತೀರ್ಪಿನಂತೆ ಮಹಾದೇವ್‍ರನ್ನೇ ಮರಳಿ ಬೀದರ್ ಜಿಲ್ಲಾಧಿಕಾರಿಯಾಗಿ ನೇಮಿಸಬೇಕೆಂಬ ಆದೇಶ ಹೊರಬೀಳುತ್ತಿದ್ದಂತೆಯೇ ಅನೇಕ ಸಂಘಟನೆಗಳು ಮತ್ತು ಬಿಡಿಬಿಡಿ ವ್ಯಕ್ತಿಗಳು ಮುಖ್ಯಮಂತ್ರಿಗೆ ಪತ್ರ ಬರೆದು ಅನಿರುದ್ಧ್ ಶ್ರವಣ್ ಅವರನ್ನೇ ಮುಂದುವರೆಸುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಿಎಂ ಕುಮಾರಸ್ವಾಮಿಯವರು ಹೇಗೆ ಸ್ಪಂದಿಸುತ್ತಾರೊ ಗೊತ್ತಿಲ್ಲ.

– ಕೆ.ಬಿ.ಕಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...