Homeಸಾಮಾಜಿಕಬೀದರ್ ಡಿಸಿ ವರ್ಗಾವಣೆ ಹಿಂದಿದೆಯಾ `ಮೆಡಿಕಲ್ ಮಾಫಿಯಾ’?

ಬೀದರ್ ಡಿಸಿ ವರ್ಗಾವಣೆ ಹಿಂದಿದೆಯಾ `ಮೆಡಿಕಲ್ ಮಾಫಿಯಾ’?

- Advertisement -
- Advertisement -

ಬಂದ ಎರಡೂವರೆ ತಿಂಗಳಲ್ಲೇ ಬೀದರ್ ಡೀಸಿ ಎತ್ತಂಗಡಿಯಾಗಿದೆ. ಒನ್ಸ್ ಎಗೇನ್ ದಕ್ಷ, ಜನಸ್ನೇಹಿ ಅನ್ನಿಸಿಕೊಂಡ ಅಧಿಕಾರಿಗಳ ಇಂತಹ ದಿಢೀರ್ ವರ್ಗಾವಣೆಯ ಬೆನ್ನಿಗೆ ಏನೇನು ಚರ್ಚೆಗಳು ನಡೆಯಬೇಕೊ ಅವೆಲ್ಲವೂ ಶುರುವಾಗಿವೆ. ನಿಜಕ್ಕೂ ಈಗ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅಲ್ಪಾವಧಿಯಲ್ಲೇ ಜನರ ಮೆಚ್ಚುಗೆ ಗಳಿಸಿದ್ದಂತವರು. ಅದರಲ್ಲೂ ಬೀದರ್ ಜಿಲ್ಲಾ ಆಸ್ಪತ್ರೆಯ ವೈದ್ಯರುಗಳಿಗೆ ಬಿಸಿ ಮುಟ್ಟಿಸಿ, ಇಡೀ ಆಸ್ಪತ್ರೆಯನ್ನು ಸುಧಾರಿಸಿದ ಪರಿಯಿದೆಯಲ್ಲ ಅದು ಜನರ ಮೆಚ್ಚುಗೆ ಗಳಿಸಿತ್ತು. ಆದರೆ ಇದೀಗ ಅಂತವರನ್ನು ವರ್ಗ ಮಾಡಿ ಆ ಜಾಗಕ್ಕೆ “ಭೂಮಿಗೆ ಭಾರವಾಗಿರುವ ವೇಸ್ಟ್ ಬಾಡಿ” ಎಂಬ ಕುಖ್ಯಾತಿಗೆ ಈಡಾಗಿರುವ ಹಳೆಯ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಅವರನ್ನೇ ತಂದು ಕೂರಿಸಲಾಗಿದೆ. ಅಷ್ಟು ಮಾತ್ರವಲ್ಲ, ಶ್ರವಣ್ ಅವರಿಗೆ ಯಾವುದೇ ಹುದ್ದೆ ನೀಡದೆ, ಅವಮಾನಿಸಲಾಗಿದೆ.
ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಿ ನೀತಿಸಂಹಿತೆ ಜಾರಿಯಾದ ಮೇಲೆ ಭಾರತದ ಚುನಾವಣಾ ಆಯೋಗವು ನಿಷ್ಪಕ್ಷಪಾತಿಯಾಗಿ ಮತ್ತು ದಕ್ಷವಾಗಿ ಕಾರ್ಯನಿರ್ವಹಿಸದೆ, ಯಾವುದೊ ಒಂದು ಪಕ್ಷದ ಪರವಾಗಿ ಅಥವಾ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಾರೆಂಬ ಅನುಮಾನವಿದ್ದ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಓದುಗರಿಗೆ ನೆನಪಿರಬಹುದು. ಹಾಗೆ ವರ್ಗಾವಣೆಗೊಂಡವರಲ್ಲಿ ಆಗಿನ ಬೀದರ್ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಕೂಡ ಒಬ್ಬರು. ಅವರ ಜಾಗಕ್ಕೆ ಅನಿರುದ್ಧ್ ಶ್ರವಣ್ ಅವರನ್ನು ನೇಮಕ ಮಾಡಲಾಗಿತ್ತು.
ಪ್ರಸ್ತುತ ನಿಯಮಗಳ ಪ್ರಕಾರ ಐಎಎಸ್ ಅಧಿಕಾರಿಯನ್ನು, ಒಂದು ಸ್ಥಳದಲ್ಲಿ ಎರಡು ವರ್ಷ ಪೂರ್ಣಗೊಳಿಸುವ ಮುನ್ನವೇ ವರ್ಗಾವಣೆ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಆರ್. ಮಹಾದೇವ್ ಅವರು ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಕರಣವು ಮಹಾದೇವ್ ಅವರ ಪರವಾಗಿಯೇ ತೀರ್ಪಿತ್ತು ಮಹಾದೇವ್ ಅವರನ್ನು ಮರಳಿ ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಬೇಕೆಂದು ಆದೇಶ ನೀಡಿತ್ತು. ನ್ಯಾಯಾಧೀಕರಣದ ಈ ತೀರ್ಪನ್ನು ಪ್ರಶ್ನಿಸಿ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟಿನ ಮೊರೆ ಹೋಯಿತು. ಚುನಾವಣೆಗಳು ನಡೆಯುತ್ತಿರುವುದನ್ನು ಪರಿಗಣಿಸಿದ ಹೈಕೋರ್ಟು ನ್ಯಾಯಾಧೀಕರಣದ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು. ಈಗ ಚುನಾವಣೆಗಳು ಮುಗಿದಿರೋದ್ರಿಂದ ಹೈಕೋರ್ಟು ತಡೆಯಾಜ್ಞೆ ತೆರವುಗೊಳಿಸಿ, ನ್ಯಾಯಾಧೀಕರಣದ ತೀರ್ಪು ಎತ್ತಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ದೆಸೆಯಿಂದ ತೊಲಗಿದ್ದ ಮಹಾದೇವ್ ಮತ್ತೆ ಬೀದರ್‍ಗೆ ವಕ್ಕರಿಸಿಕೊಂಡಿದ್ದಾರೆ.
2011 ಬ್ಯಾಚಿನ ಐಎಎಸ್ ಅಧಿಕಾರಿಯಾದ ಅನಿರುದ್ಧ್ ಶ್ರವಣ್ ಯಾವುದೇ ಅಡೆತಡೆಯಿಲ್ಲದಂತೆ, ಗೊಂದಲಗಳಿಲ್ಲದಂತೆ ಮತ್ತು ಎಲ್ಲೂ ಅಹಿತಕರ ಘಟನೆಗಳು ನಡೆಯದಂತೆ ಅಚ್ಚುಕಟ್ಟಾಗಿ ಚುನಾವಣೆಗಳನ್ನು ನಡೆಸಿದ್ದಲ್ಲದೇ, ನಂತರವೂ ಅನೇಕ ಜನಮೆಚ್ಚುವ ಕೆಲಸಗಳನ್ನು ಮಾಡಿದ್ದರು. ಅದರಲ್ಲಿ ಬೀದರ್ ಜಿಲ್ಲಾಸ್ಪತ್ರೆಗೆ ಕಾಯಕಲ್ಪ ನೀಡಿದ್ದು ವಿಶೇಷವಾದದ್ದು. ಅಸಲಿಗೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ಬೋಧಕ ಆಸ್ಪತ್ರೆಯಾಗಿರುವ ಇದು ಈ ಭಾಗದ ಬಡಬಗ್ಗರ ಆಶಾಕಿರಣ. ಖಾಸಗಿ ಆಸ್ಪತ್ರೆಗಳಿಗೆ ದುಡ್ಡು ಖರ್ಚು ಮಾಡಲಾಗದ ಬಡವರು ಈ ಆಸ್ಪತ್ರೆಗೆ ದೌಡಾಯಿಸುತ್ತಾರೆ.
ಆದರೆ, ಇಲ್ಲಿನ ವೈದ್ಯರಿಗೆ ರೊಕ್ಕ ಮಾಡುವ ಕಾಯಿಲೆ ಅಂಟಿಕೊಂಡು, ಪ್ರತಿಯೊಬ್ಬ ವೈದ್ಯರೂ ತಮ್ಮದೇ ಆದ ಸ್ವಂತ ಖಾಸಗಿ ಕ್ಲಿನಿಕ್ ತೆರೆದುಕೊಂಡು ದಿನವಿಡೀ ಅಲ್ಲೇ ಠಿಕಾಣಿ ಹೂಡಿರುತ್ತಿದ್ದರು. ಆಸ್ಪತ್ರೆಯತ್ತ ಮುಖ ಹಾಕುತ್ತಿರಲಿಲ್ಲ. ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ಕುಗಳಲ್ಲಿ ಸೇವೆ ಸಲ್ಲಿಸುವುದು ನಿಯಮಗಳ ಪ್ರಕಾರ ಅಪರಾಧವೇನಲ್ಲ. ಆದರೆ, ಸರ್ಕಾರಿ ಕೆಲಸದ ಅವಧಿ ಮುಗಿದ ಮೇಲೆ ಅಥವಾ ಅದಕ್ಕಿಂತ ಮೊದಲು ಆ ಕೆಲಸ ಮಾಡಬಹುದು. ಆದರೆ, ಬೀದರಿನ ವೈದ್ಯರು ತಮ್ಮ ಸರ್ಕಾರಿ ಕರ್ತವ್ಯವನ್ನೇ ಮರೆತು ಸ್ವಂತ ಕ್ಲಿನಿಕ್ಕುಗಳಲ್ಲಿ ಹಣ ಪೀಕುವ ದಂಧೆಗೆ ಫಿಕ್ಸ್ ಆಗಿದ್ದರು.
ಅತ್ತ ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್‍ರೆ, ಪ್ರಯೋಗಾಲಯ, ಔಷಧಿ ಅಂಗಡಿ ಸೌಕರ್ಯಗಳಿದ್ದರೂ ಜನರಿಗೆ ಅವುಗಳ ಉಪಯೋಗ ದೊರಕುತ್ತಿರಲಿಲ್ಲ. ಯಾಕೆಂದರೆ, ಆಸ್ಪತ್ರೆಯ ಸಿಬ್ಬಂದಿ ಖಾಸಗೀ ಔಷಧಿ ಅಂಗಡಿಗಳು, ಖಾಸಗಿ ಲ್ಯಾಬ್‍ಗಳನ್ನು ಶಿಫಾರಸ್ಸು ಮಾಡಿ ತಾಕೀತು ಮಾಡುತ್ತಿದ್ದರು.
ಅನಿರುದ್ಧ್ ಶ್ರವಣ್ ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ಇದೆಲ್ಲಕ್ಕೂ ಬ್ರೇಕ್ ಬಿತ್ತು. ಮೊದಲ ಸಲ ಆಸ್ಪತ್ರೆಗೆ ಭೇಟಿ ನೀಡಿದಾಗಲೇ ಬಹುತೇಕ ವೈದ್ಯರು ಇಲ್ಲದಿರುವುದನ್ನು ಗಮನಿಸಿದ ಶ್ರವಣ್ ಆವತ್ತಿನಿಂದಲೇ ಚಾಟಿ ಬೀಸುವುದಕ್ಕೆ ಶುರು ಮಾಡಿದರು. ನೋಟಿಸ್ ಜಾರಿ ಮಾಡಿದ್ದಲ್ಲದೆ ಕರ್ತವ್ಯದ ಸಮಯದಲ್ಲಿ ಆಸ್ಪತ್ರೆಯಲ್ಲೇ ಸೇವೆ ಸಲ್ಲಿಸುವುದಾಗಿ ಎಲ್ಲಾ ವೈದ್ಯರಿಂದ ತಲಾ ಒಂದೊಂದು ಲಕ್ಷ ರೂಪಾಯಿ ಬಾಂಡ್ ಬರೆಸಿಕೊಂಡಿದ್ದರು. ಅಷ್ಟಕ್ಕೇ ಸುಮ್ಮನಾಗದೆ, ವಾರಕ್ಕೆ ಎರಡು ಮೂರು ಬಾರಿ ಭೇಟಿ ನೀಡಿ ಚೆಕ್ ಮಾಡುತ್ತಿದ್ದರು. ಹದಗೆಟ್ಟುಹೋಗಿದ್ದ ಆಸ್ಪತ್ರೆ ಒಂದೇ ತಿಂಗಳಲ್ಲಿ ಮತ್ತೆ ಸರಿಹಾದಿಗೆ ಬಂದಿತು. ಚಿಕಿತ್ಸೆ ಬಯಸಿ ಬರುತ್ತಿದ್ದ ಬಡಬಗ್ಗರಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ಸಿಗಲಾರಂಭಿಸಿತು.
ಅನಿರುದ್ಧ್ ಈ ಕ್ರಮದಿಂದ ಬಡರೋಗಿಗಳಿಗೆ ಅನುಕೂಲವಾದರು ವೈದ್ಯರ ಅಕ್ರಮ ಹಣಗಳಿಕೆಗೆ ಬ್ರೇಕ್ ಬಿದ್ದಿತು. ಇದರಿಂದ ಹತಾಶಗೊಂಡ ಅವರು ಶತಗತಾಯ ಶ್ರವಣ್ ಅವರನ್ನು ಎತ್ತಂಗಡಿ ಮಾಡಲೇಬೇಕೆಂಬ ಪ್ರಯತ್ನ ಶುರು ಮಾಡಿಕೊಂಡರು. ಒಬ್ಬ ವೈದ್ಯರೇ ಹೇಳುವಂತೆ ಪ್ರತಿಯೊಬ್ಬ ಡಾಕ್ಟರ್ ತಲಾ ಐದೈದು ಲಕ್ಷ ರೂಪಾಯಿ ಕಲೆಹಾಕಿಕೊಂಡು ಬೆಂಗಳೂರಿಗೆ ಹೋಗಿ ಡೀಸಿ ವರ್ಗಾವಣೆಗೆ ಪ್ರಯತ್ನಿಸಿದ್ದರಂತೆ. ಇದೇ ವೇಳೆಗೆ ಹೈಕೋರ್ಟ್ ಕೂಡಾ ತನ್ನ ತಡೆಯಾಜ್ಞೆ ತೆರವುಗೊಳಿಸಿ ಮತ್ತೆ ಮಹಾದೇವ್ ಅವರನ್ನೇ ಜಿಲ್ಲಾಧಿಕಾರಿಯಾಗಿ ನೇಮಿಸಿದ್ದು ನಿಜಕ್ಕೂ ಈ ವೈದ್ಯರಿಗೆ ಹಾಲು ಕುಡಿದಷ್ಟೇ ಖುಷಿ ಕೊಟ್ಟಿದೆ ಅನ್ನಿಸುತ್ತೆ.
ಕೇವಲ ಆಸ್ಪತ್ರೆಗೆ ಸುಧಾರಣೆ ತಂದಿದ್ದಷ್ಟೇ ಅಲ್ಲ, ವಿಶೇಷ ಕಾರ್ಯಪಡೆಗಳನ್ನು ರಚಿಸಿ ಪ್ಲಾಸ್ಟಿಕ್ ವಿರುದ್ಧ ಸಮರವನ್ನೇ ಸಾರಿದ್ದ ಅನಿರುದ್ಧ್‍ರವರು ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯಿಟ್ಟಿದ್ದರು. ಕೆಟ್ಟ ಪರಿಸ್ಥಿತಿಯಲ್ಲಿರುವ ಜಿಲ್ಲೆಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸುಧಾರಿಸುವುದಕ್ಕೆ ಯೋಜನೆಗಳನ್ನು ರೂಪಿಸಿದ್ದರು. ಬಾಲಕಾರ್ಮಿಕ ವ್ಯವಸ್ಥೆಗೆ ಬ್ರೇಕ್ ಹಾಕಲು ಸಜ್ಜಾಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ತೂಕಡಿಸುತ್ತಿದ್ದ ಅಧಿಕಾರಶಾಹಿ ಆಡಳಿತ ಯಂತ್ರಾಂಗಕ್ಕೆ ಚಾಟಿಯೇಟು ಬೀಸಿ ಚುರುಕುಗೊಳಿಸಿದ್ದರು.
ಜನರ ಅಪಾರ ಮೆಚ್ಚುಗೆ ಗಳಿಸಿದ್ದ ಅನಿರುದ್ಧ್ ಅವರ ಬಗ್ಗೆ ಟೀಮ್ ಯುವ ಸಂಘಟನೆಯ ನೇತಾರ ವಿನಯ್ ಮಾಲಗೆಯವರು ಪತ್ರಿಕೆಯೊಡನೆ ಹೀಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. “ಅನಿರುದ್ಧ್ ಶ್ರವಣ್‍ರವರು ಜಿಲ್ಲಾಧಿಕಾರಿಯಾಗಿದ್ದ 78 ದಿನಗಳು ಕೆಳಹಂತದ ಅಧಿಕಾರಿಗಳಿಗೆ ಕಷ್ಟಕರ ದಿನಗಳಾಗಿದ್ದವು. ಹಿಂದುಳಿದ ಈ ಜಿಲ್ಲೆಯನ್ನು ಹೇಗೆ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು, ಯಾವ ವಿಷಯಗಳಿಗೆ ಹೆಚ್ಚಿನ ಮಹತ್ವ ಕೊಡಬೇಕು ಎಂಬ ಬಗ್ಗೆ ದೂರಗಾಮಿ ದೃಷ್ಟಿಕೋನ ಹೊಂದಿದ್ದರು. ಬೀದರ್ ಮತ್ತು ಬಸವಕಲ್ಯಾಣಗಳನ್ನು ಪ್ರಮುಖ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಂಡಿದ್ದ ಅವರು ಬಡಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಅಭಿಲಾಷೆ ಹಂಚಿಕೊಂಡಿದ್ದರು. ಇಂತಹ ಜನಪರ ಅಧಿಕಾರಿಯ ವರ್ಗಾವಣೆಯಾಗಿರುವುದು ಜಿಲ್ಲೆಯ ಜನರಿಗಾದ ದೊಡ್ಡ ನಷ್ಟ”.
ಈ ಕುರಿತು ಸ್ವತಃ ಅನಿರುದ್ಧ್ ಶ್ರವಣ್‍ರನ್ನೇ ಪತ್ರಿಕೆ ಮಾತಿಗೆಳೆದಾಗ, ಸರ್ಕಾರದ ಆದೇಶವನ್ನು ಗೌರವಿಸುತ್ತೇನೆ, ಬೀದರ್‍ನಲ್ಲಿ ನನ್ನ ಅಲ್ಪದಿನಗಳ ಅನುಭವ ಅದ್ಭುತವಾಗಿತ್ತು, ಸುಸೂತ್ರವಾಗಿ ಚುನಾವಣೆ ನಡೆಸಲು ಮತ್ತು ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಹೋರಾಡಲು ಬೀದರ್ ಜನ ನೀಡಿದ ಸಹಕಾರವನ್ನು ನಾನು ಮರೆಯಲಾರೆ ಎಂದರು. ಅವರು ಅದೆಷ್ಟು ಬೀದರ್ ಜನರ ಪ್ರೀತಿವಿಶ್ವಾಸಗಳನ್ನು ಗಳಿಸಿದ್ದರೆಂದರೆ ಕೆಎಟಿ ತೀರ್ಪಿನಂತೆ ಮಹಾದೇವ್‍ರನ್ನೇ ಮರಳಿ ಬೀದರ್ ಜಿಲ್ಲಾಧಿಕಾರಿಯಾಗಿ ನೇಮಿಸಬೇಕೆಂಬ ಆದೇಶ ಹೊರಬೀಳುತ್ತಿದ್ದಂತೆಯೇ ಅನೇಕ ಸಂಘಟನೆಗಳು ಮತ್ತು ಬಿಡಿಬಿಡಿ ವ್ಯಕ್ತಿಗಳು ಮುಖ್ಯಮಂತ್ರಿಗೆ ಪತ್ರ ಬರೆದು ಅನಿರುದ್ಧ್ ಶ್ರವಣ್ ಅವರನ್ನೇ ಮುಂದುವರೆಸುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಿಎಂ ಕುಮಾರಸ್ವಾಮಿಯವರು ಹೇಗೆ ಸ್ಪಂದಿಸುತ್ತಾರೊ ಗೊತ್ತಿಲ್ಲ.

– ಕೆ.ಬಿ.ಕಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...