Homeಸಾಮಾಜಿಕಬೀದರ್ ಡಿಸಿ ವರ್ಗಾವಣೆ ಹಿಂದಿದೆಯಾ `ಮೆಡಿಕಲ್ ಮಾಫಿಯಾ’?

ಬೀದರ್ ಡಿಸಿ ವರ್ಗಾವಣೆ ಹಿಂದಿದೆಯಾ `ಮೆಡಿಕಲ್ ಮಾಫಿಯಾ’?

- Advertisement -
- Advertisement -

ಬಂದ ಎರಡೂವರೆ ತಿಂಗಳಲ್ಲೇ ಬೀದರ್ ಡೀಸಿ ಎತ್ತಂಗಡಿಯಾಗಿದೆ. ಒನ್ಸ್ ಎಗೇನ್ ದಕ್ಷ, ಜನಸ್ನೇಹಿ ಅನ್ನಿಸಿಕೊಂಡ ಅಧಿಕಾರಿಗಳ ಇಂತಹ ದಿಢೀರ್ ವರ್ಗಾವಣೆಯ ಬೆನ್ನಿಗೆ ಏನೇನು ಚರ್ಚೆಗಳು ನಡೆಯಬೇಕೊ ಅವೆಲ್ಲವೂ ಶುರುವಾಗಿವೆ. ನಿಜಕ್ಕೂ ಈಗ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅಲ್ಪಾವಧಿಯಲ್ಲೇ ಜನರ ಮೆಚ್ಚುಗೆ ಗಳಿಸಿದ್ದಂತವರು. ಅದರಲ್ಲೂ ಬೀದರ್ ಜಿಲ್ಲಾ ಆಸ್ಪತ್ರೆಯ ವೈದ್ಯರುಗಳಿಗೆ ಬಿಸಿ ಮುಟ್ಟಿಸಿ, ಇಡೀ ಆಸ್ಪತ್ರೆಯನ್ನು ಸುಧಾರಿಸಿದ ಪರಿಯಿದೆಯಲ್ಲ ಅದು ಜನರ ಮೆಚ್ಚುಗೆ ಗಳಿಸಿತ್ತು. ಆದರೆ ಇದೀಗ ಅಂತವರನ್ನು ವರ್ಗ ಮಾಡಿ ಆ ಜಾಗಕ್ಕೆ “ಭೂಮಿಗೆ ಭಾರವಾಗಿರುವ ವೇಸ್ಟ್ ಬಾಡಿ” ಎಂಬ ಕುಖ್ಯಾತಿಗೆ ಈಡಾಗಿರುವ ಹಳೆಯ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಅವರನ್ನೇ ತಂದು ಕೂರಿಸಲಾಗಿದೆ. ಅಷ್ಟು ಮಾತ್ರವಲ್ಲ, ಶ್ರವಣ್ ಅವರಿಗೆ ಯಾವುದೇ ಹುದ್ದೆ ನೀಡದೆ, ಅವಮಾನಿಸಲಾಗಿದೆ.
ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಿ ನೀತಿಸಂಹಿತೆ ಜಾರಿಯಾದ ಮೇಲೆ ಭಾರತದ ಚುನಾವಣಾ ಆಯೋಗವು ನಿಷ್ಪಕ್ಷಪಾತಿಯಾಗಿ ಮತ್ತು ದಕ್ಷವಾಗಿ ಕಾರ್ಯನಿರ್ವಹಿಸದೆ, ಯಾವುದೊ ಒಂದು ಪಕ್ಷದ ಪರವಾಗಿ ಅಥವಾ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಾರೆಂಬ ಅನುಮಾನವಿದ್ದ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಓದುಗರಿಗೆ ನೆನಪಿರಬಹುದು. ಹಾಗೆ ವರ್ಗಾವಣೆಗೊಂಡವರಲ್ಲಿ ಆಗಿನ ಬೀದರ್ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಕೂಡ ಒಬ್ಬರು. ಅವರ ಜಾಗಕ್ಕೆ ಅನಿರುದ್ಧ್ ಶ್ರವಣ್ ಅವರನ್ನು ನೇಮಕ ಮಾಡಲಾಗಿತ್ತು.
ಪ್ರಸ್ತುತ ನಿಯಮಗಳ ಪ್ರಕಾರ ಐಎಎಸ್ ಅಧಿಕಾರಿಯನ್ನು, ಒಂದು ಸ್ಥಳದಲ್ಲಿ ಎರಡು ವರ್ಷ ಪೂರ್ಣಗೊಳಿಸುವ ಮುನ್ನವೇ ವರ್ಗಾವಣೆ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಆರ್. ಮಹಾದೇವ್ ಅವರು ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಕರಣವು ಮಹಾದೇವ್ ಅವರ ಪರವಾಗಿಯೇ ತೀರ್ಪಿತ್ತು ಮಹಾದೇವ್ ಅವರನ್ನು ಮರಳಿ ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಬೇಕೆಂದು ಆದೇಶ ನೀಡಿತ್ತು. ನ್ಯಾಯಾಧೀಕರಣದ ಈ ತೀರ್ಪನ್ನು ಪ್ರಶ್ನಿಸಿ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟಿನ ಮೊರೆ ಹೋಯಿತು. ಚುನಾವಣೆಗಳು ನಡೆಯುತ್ತಿರುವುದನ್ನು ಪರಿಗಣಿಸಿದ ಹೈಕೋರ್ಟು ನ್ಯಾಯಾಧೀಕರಣದ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು. ಈಗ ಚುನಾವಣೆಗಳು ಮುಗಿದಿರೋದ್ರಿಂದ ಹೈಕೋರ್ಟು ತಡೆಯಾಜ್ಞೆ ತೆರವುಗೊಳಿಸಿ, ನ್ಯಾಯಾಧೀಕರಣದ ತೀರ್ಪು ಎತ್ತಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ದೆಸೆಯಿಂದ ತೊಲಗಿದ್ದ ಮಹಾದೇವ್ ಮತ್ತೆ ಬೀದರ್‍ಗೆ ವಕ್ಕರಿಸಿಕೊಂಡಿದ್ದಾರೆ.
2011 ಬ್ಯಾಚಿನ ಐಎಎಸ್ ಅಧಿಕಾರಿಯಾದ ಅನಿರುದ್ಧ್ ಶ್ರವಣ್ ಯಾವುದೇ ಅಡೆತಡೆಯಿಲ್ಲದಂತೆ, ಗೊಂದಲಗಳಿಲ್ಲದಂತೆ ಮತ್ತು ಎಲ್ಲೂ ಅಹಿತಕರ ಘಟನೆಗಳು ನಡೆಯದಂತೆ ಅಚ್ಚುಕಟ್ಟಾಗಿ ಚುನಾವಣೆಗಳನ್ನು ನಡೆಸಿದ್ದಲ್ಲದೇ, ನಂತರವೂ ಅನೇಕ ಜನಮೆಚ್ಚುವ ಕೆಲಸಗಳನ್ನು ಮಾಡಿದ್ದರು. ಅದರಲ್ಲಿ ಬೀದರ್ ಜಿಲ್ಲಾಸ್ಪತ್ರೆಗೆ ಕಾಯಕಲ್ಪ ನೀಡಿದ್ದು ವಿಶೇಷವಾದದ್ದು. ಅಸಲಿಗೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ಬೋಧಕ ಆಸ್ಪತ್ರೆಯಾಗಿರುವ ಇದು ಈ ಭಾಗದ ಬಡಬಗ್ಗರ ಆಶಾಕಿರಣ. ಖಾಸಗಿ ಆಸ್ಪತ್ರೆಗಳಿಗೆ ದುಡ್ಡು ಖರ್ಚು ಮಾಡಲಾಗದ ಬಡವರು ಈ ಆಸ್ಪತ್ರೆಗೆ ದೌಡಾಯಿಸುತ್ತಾರೆ.
ಆದರೆ, ಇಲ್ಲಿನ ವೈದ್ಯರಿಗೆ ರೊಕ್ಕ ಮಾಡುವ ಕಾಯಿಲೆ ಅಂಟಿಕೊಂಡು, ಪ್ರತಿಯೊಬ್ಬ ವೈದ್ಯರೂ ತಮ್ಮದೇ ಆದ ಸ್ವಂತ ಖಾಸಗಿ ಕ್ಲಿನಿಕ್ ತೆರೆದುಕೊಂಡು ದಿನವಿಡೀ ಅಲ್ಲೇ ಠಿಕಾಣಿ ಹೂಡಿರುತ್ತಿದ್ದರು. ಆಸ್ಪತ್ರೆಯತ್ತ ಮುಖ ಹಾಕುತ್ತಿರಲಿಲ್ಲ. ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ಕುಗಳಲ್ಲಿ ಸೇವೆ ಸಲ್ಲಿಸುವುದು ನಿಯಮಗಳ ಪ್ರಕಾರ ಅಪರಾಧವೇನಲ್ಲ. ಆದರೆ, ಸರ್ಕಾರಿ ಕೆಲಸದ ಅವಧಿ ಮುಗಿದ ಮೇಲೆ ಅಥವಾ ಅದಕ್ಕಿಂತ ಮೊದಲು ಆ ಕೆಲಸ ಮಾಡಬಹುದು. ಆದರೆ, ಬೀದರಿನ ವೈದ್ಯರು ತಮ್ಮ ಸರ್ಕಾರಿ ಕರ್ತವ್ಯವನ್ನೇ ಮರೆತು ಸ್ವಂತ ಕ್ಲಿನಿಕ್ಕುಗಳಲ್ಲಿ ಹಣ ಪೀಕುವ ದಂಧೆಗೆ ಫಿಕ್ಸ್ ಆಗಿದ್ದರು.
ಅತ್ತ ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್‍ರೆ, ಪ್ರಯೋಗಾಲಯ, ಔಷಧಿ ಅಂಗಡಿ ಸೌಕರ್ಯಗಳಿದ್ದರೂ ಜನರಿಗೆ ಅವುಗಳ ಉಪಯೋಗ ದೊರಕುತ್ತಿರಲಿಲ್ಲ. ಯಾಕೆಂದರೆ, ಆಸ್ಪತ್ರೆಯ ಸಿಬ್ಬಂದಿ ಖಾಸಗೀ ಔಷಧಿ ಅಂಗಡಿಗಳು, ಖಾಸಗಿ ಲ್ಯಾಬ್‍ಗಳನ್ನು ಶಿಫಾರಸ್ಸು ಮಾಡಿ ತಾಕೀತು ಮಾಡುತ್ತಿದ್ದರು.
ಅನಿರುದ್ಧ್ ಶ್ರವಣ್ ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ಇದೆಲ್ಲಕ್ಕೂ ಬ್ರೇಕ್ ಬಿತ್ತು. ಮೊದಲ ಸಲ ಆಸ್ಪತ್ರೆಗೆ ಭೇಟಿ ನೀಡಿದಾಗಲೇ ಬಹುತೇಕ ವೈದ್ಯರು ಇಲ್ಲದಿರುವುದನ್ನು ಗಮನಿಸಿದ ಶ್ರವಣ್ ಆವತ್ತಿನಿಂದಲೇ ಚಾಟಿ ಬೀಸುವುದಕ್ಕೆ ಶುರು ಮಾಡಿದರು. ನೋಟಿಸ್ ಜಾರಿ ಮಾಡಿದ್ದಲ್ಲದೆ ಕರ್ತವ್ಯದ ಸಮಯದಲ್ಲಿ ಆಸ್ಪತ್ರೆಯಲ್ಲೇ ಸೇವೆ ಸಲ್ಲಿಸುವುದಾಗಿ ಎಲ್ಲಾ ವೈದ್ಯರಿಂದ ತಲಾ ಒಂದೊಂದು ಲಕ್ಷ ರೂಪಾಯಿ ಬಾಂಡ್ ಬರೆಸಿಕೊಂಡಿದ್ದರು. ಅಷ್ಟಕ್ಕೇ ಸುಮ್ಮನಾಗದೆ, ವಾರಕ್ಕೆ ಎರಡು ಮೂರು ಬಾರಿ ಭೇಟಿ ನೀಡಿ ಚೆಕ್ ಮಾಡುತ್ತಿದ್ದರು. ಹದಗೆಟ್ಟುಹೋಗಿದ್ದ ಆಸ್ಪತ್ರೆ ಒಂದೇ ತಿಂಗಳಲ್ಲಿ ಮತ್ತೆ ಸರಿಹಾದಿಗೆ ಬಂದಿತು. ಚಿಕಿತ್ಸೆ ಬಯಸಿ ಬರುತ್ತಿದ್ದ ಬಡಬಗ್ಗರಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ಸಿಗಲಾರಂಭಿಸಿತು.
ಅನಿರುದ್ಧ್ ಈ ಕ್ರಮದಿಂದ ಬಡರೋಗಿಗಳಿಗೆ ಅನುಕೂಲವಾದರು ವೈದ್ಯರ ಅಕ್ರಮ ಹಣಗಳಿಕೆಗೆ ಬ್ರೇಕ್ ಬಿದ್ದಿತು. ಇದರಿಂದ ಹತಾಶಗೊಂಡ ಅವರು ಶತಗತಾಯ ಶ್ರವಣ್ ಅವರನ್ನು ಎತ್ತಂಗಡಿ ಮಾಡಲೇಬೇಕೆಂಬ ಪ್ರಯತ್ನ ಶುರು ಮಾಡಿಕೊಂಡರು. ಒಬ್ಬ ವೈದ್ಯರೇ ಹೇಳುವಂತೆ ಪ್ರತಿಯೊಬ್ಬ ಡಾಕ್ಟರ್ ತಲಾ ಐದೈದು ಲಕ್ಷ ರೂಪಾಯಿ ಕಲೆಹಾಕಿಕೊಂಡು ಬೆಂಗಳೂರಿಗೆ ಹೋಗಿ ಡೀಸಿ ವರ್ಗಾವಣೆಗೆ ಪ್ರಯತ್ನಿಸಿದ್ದರಂತೆ. ಇದೇ ವೇಳೆಗೆ ಹೈಕೋರ್ಟ್ ಕೂಡಾ ತನ್ನ ತಡೆಯಾಜ್ಞೆ ತೆರವುಗೊಳಿಸಿ ಮತ್ತೆ ಮಹಾದೇವ್ ಅವರನ್ನೇ ಜಿಲ್ಲಾಧಿಕಾರಿಯಾಗಿ ನೇಮಿಸಿದ್ದು ನಿಜಕ್ಕೂ ಈ ವೈದ್ಯರಿಗೆ ಹಾಲು ಕುಡಿದಷ್ಟೇ ಖುಷಿ ಕೊಟ್ಟಿದೆ ಅನ್ನಿಸುತ್ತೆ.
ಕೇವಲ ಆಸ್ಪತ್ರೆಗೆ ಸುಧಾರಣೆ ತಂದಿದ್ದಷ್ಟೇ ಅಲ್ಲ, ವಿಶೇಷ ಕಾರ್ಯಪಡೆಗಳನ್ನು ರಚಿಸಿ ಪ್ಲಾಸ್ಟಿಕ್ ವಿರುದ್ಧ ಸಮರವನ್ನೇ ಸಾರಿದ್ದ ಅನಿರುದ್ಧ್‍ರವರು ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯಿಟ್ಟಿದ್ದರು. ಕೆಟ್ಟ ಪರಿಸ್ಥಿತಿಯಲ್ಲಿರುವ ಜಿಲ್ಲೆಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸುಧಾರಿಸುವುದಕ್ಕೆ ಯೋಜನೆಗಳನ್ನು ರೂಪಿಸಿದ್ದರು. ಬಾಲಕಾರ್ಮಿಕ ವ್ಯವಸ್ಥೆಗೆ ಬ್ರೇಕ್ ಹಾಕಲು ಸಜ್ಜಾಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ತೂಕಡಿಸುತ್ತಿದ್ದ ಅಧಿಕಾರಶಾಹಿ ಆಡಳಿತ ಯಂತ್ರಾಂಗಕ್ಕೆ ಚಾಟಿಯೇಟು ಬೀಸಿ ಚುರುಕುಗೊಳಿಸಿದ್ದರು.
ಜನರ ಅಪಾರ ಮೆಚ್ಚುಗೆ ಗಳಿಸಿದ್ದ ಅನಿರುದ್ಧ್ ಅವರ ಬಗ್ಗೆ ಟೀಮ್ ಯುವ ಸಂಘಟನೆಯ ನೇತಾರ ವಿನಯ್ ಮಾಲಗೆಯವರು ಪತ್ರಿಕೆಯೊಡನೆ ಹೀಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. “ಅನಿರುದ್ಧ್ ಶ್ರವಣ್‍ರವರು ಜಿಲ್ಲಾಧಿಕಾರಿಯಾಗಿದ್ದ 78 ದಿನಗಳು ಕೆಳಹಂತದ ಅಧಿಕಾರಿಗಳಿಗೆ ಕಷ್ಟಕರ ದಿನಗಳಾಗಿದ್ದವು. ಹಿಂದುಳಿದ ಈ ಜಿಲ್ಲೆಯನ್ನು ಹೇಗೆ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು, ಯಾವ ವಿಷಯಗಳಿಗೆ ಹೆಚ್ಚಿನ ಮಹತ್ವ ಕೊಡಬೇಕು ಎಂಬ ಬಗ್ಗೆ ದೂರಗಾಮಿ ದೃಷ್ಟಿಕೋನ ಹೊಂದಿದ್ದರು. ಬೀದರ್ ಮತ್ತು ಬಸವಕಲ್ಯಾಣಗಳನ್ನು ಪ್ರಮುಖ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಂಡಿದ್ದ ಅವರು ಬಡಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಅಭಿಲಾಷೆ ಹಂಚಿಕೊಂಡಿದ್ದರು. ಇಂತಹ ಜನಪರ ಅಧಿಕಾರಿಯ ವರ್ಗಾವಣೆಯಾಗಿರುವುದು ಜಿಲ್ಲೆಯ ಜನರಿಗಾದ ದೊಡ್ಡ ನಷ್ಟ”.
ಈ ಕುರಿತು ಸ್ವತಃ ಅನಿರುದ್ಧ್ ಶ್ರವಣ್‍ರನ್ನೇ ಪತ್ರಿಕೆ ಮಾತಿಗೆಳೆದಾಗ, ಸರ್ಕಾರದ ಆದೇಶವನ್ನು ಗೌರವಿಸುತ್ತೇನೆ, ಬೀದರ್‍ನಲ್ಲಿ ನನ್ನ ಅಲ್ಪದಿನಗಳ ಅನುಭವ ಅದ್ಭುತವಾಗಿತ್ತು, ಸುಸೂತ್ರವಾಗಿ ಚುನಾವಣೆ ನಡೆಸಲು ಮತ್ತು ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಹೋರಾಡಲು ಬೀದರ್ ಜನ ನೀಡಿದ ಸಹಕಾರವನ್ನು ನಾನು ಮರೆಯಲಾರೆ ಎಂದರು. ಅವರು ಅದೆಷ್ಟು ಬೀದರ್ ಜನರ ಪ್ರೀತಿವಿಶ್ವಾಸಗಳನ್ನು ಗಳಿಸಿದ್ದರೆಂದರೆ ಕೆಎಟಿ ತೀರ್ಪಿನಂತೆ ಮಹಾದೇವ್‍ರನ್ನೇ ಮರಳಿ ಬೀದರ್ ಜಿಲ್ಲಾಧಿಕಾರಿಯಾಗಿ ನೇಮಿಸಬೇಕೆಂಬ ಆದೇಶ ಹೊರಬೀಳುತ್ತಿದ್ದಂತೆಯೇ ಅನೇಕ ಸಂಘಟನೆಗಳು ಮತ್ತು ಬಿಡಿಬಿಡಿ ವ್ಯಕ್ತಿಗಳು ಮುಖ್ಯಮಂತ್ರಿಗೆ ಪತ್ರ ಬರೆದು ಅನಿರುದ್ಧ್ ಶ್ರವಣ್ ಅವರನ್ನೇ ಮುಂದುವರೆಸುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಿಎಂ ಕುಮಾರಸ್ವಾಮಿಯವರು ಹೇಗೆ ಸ್ಪಂದಿಸುತ್ತಾರೊ ಗೊತ್ತಿಲ್ಲ.

– ಕೆ.ಬಿ.ಕಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...