HomeಮುಖಪುಟPPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

- Advertisement -
- Advertisement -

ಏಮ್ಸ್ ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವೈಯಕ್ತಿಕ ರಕ್ಷಣಾ ಸಾಧನಗಳ ಲಭ್ಯತೆ,(ಪಿಪಿಇ) ಕೊವಿಡ್ -19 ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆಯ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ​​ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಖಂಡಿಸಿದ ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆರೋಗ್ಯ ಕಾರ್ಯಕರ್ತರ ಮನವಿಗಳನ್ನು ರಚನಾತ್ಮಕ ನೆಲೆಯಲ್ಲಿ ನೋಡಬೇಕು. ಆರೋಗ್ಯ ಕಾರ್ಯಕರ್ತರೊಂದಿಗೆ ಆರೋಗ್ಯಕರ ಚರ್ಚೆ ಮತ್ತು ಸಂವಾದ ನಡೆಸಬೇಕೆಂದು ಕೋರಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮೋದಿಯವರ ಪ್ರಬಲ ನಾಯಕತ್ವವನ್ನು ಶ್ಲಾಘಿಸಿದ ಅಸೋಸಿಯೇಷನ್, ಆರೋಗ್ಯ ಸೌಲಭ್ಯಗಳು ಮತ್ತು ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದೆ.

“ಕೊರೊನಾ ವಿರುದ್ಧ ಮೂಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ನಮ್ಮ ಆರೋಗ್ಯ ಕಾರ್ಯಕರ್ತರು ವೈಯಕ್ತಿಕ ರಕ್ಷಣಾ ಸಲಕರಣೆಗಳ (ಪಿಪಿಇ) ಕುರಿತು, ಕೊವಿಡ್ ಪರೀಕ್ಷಾ ಕಿಟ್‌ಗಳ ಲಭ್ಯತೆ,  ಸಂಪರ್ಕತಡೆಯ ಸೌಲಭ್ಯಗಳ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಈ ವಿಚಾರಗಳನ್ನು ರಚನಾತ್ಮಕವಾಗಿ ನೋಡಬೇಕು” ಎಂದು ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಪ್ರತಾಪ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್‌ಕುಮಾರ್ ಟಿ ಪತ್ರದಲ್ಲಿ ತಿಳಿಸಿದ್ದಾರೆ.

“ರೋಗಿಗಳ ಕಲ್ಯಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆಯ ಬದಲು ಟೀಕೆ ಎದುರಿಸಬೇಕಾಗಿದೆ. ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಆರೋಗ್ಯ ಕಾರ್ಯಕರ್ತರನ್ನು ಅವಮಾನಿಸುವ ಬದಲು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಚನಾತ್ಮಕ ಉದ್ದೇಶಗಳಿಗಾಗಿ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರರಾಗಿರುವುದರಿಂದ, ಈ ಪರಿಸ್ಥಿತಿಯಲ್ಲಿರುವ ವೈದ್ಯರನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಈ ಘಟನೆಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಅಪಹಾಸ್ಯ ಮಾಡುವ ಬದಲು ಸರ್ಕಾರವು ಅವರೊಂದಿಗೆ ಆರೋಗ್ಯಕರ ಸಂವಾದ ಮತ್ತು ಚರ್ಚೆಗೆ ನಡೆಸಬೇಕು. ಅವರ ಮೇಲಿನ ಎಲ್ಲಾ ಶಿಕ್ಷೆಗಳನ್ನು ಹಿಂಪಡೆಯಬೇಕು ಮತ್ತು ಅವರ ಗೌರವವನ್ನು ಪುನಃಸ್ಥಾಪಿಸಬೇಕು ”ಎಂದು ಅಸೋಸಿಯೇಷನ್ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಸಫ್ದರ್ಜಂಗ್ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ,  ವೈಯಕ್ತಿಕ ರಕ್ಷಣಾ ಸಾಧನಗಳು, ಎನ್ -95 ಮಾಸ್ಕುಗಳು, ಟ್ರಿಪಲ್ ಲೇಯರ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ದೇಣಿಗೆಯನ್ನು ಕೋರಿದೆ.

“ಸರ್ಕಾರವು ಸಹ ಈ ಉಪಕರಣಗಳನ್ನು ನೀಡಲು ಪ್ರಯತ್ನಿಸುತ್ತಿದೆ. ಆದರೆ ಬೇಡಿಕೆಯು ಪೂರೈಕೆಗಿಂತಲೂ ಹೆಚ್ಚಿದೆ, ದಯವಿಟ್ಟು ಮೇಲೆ ತಿಳಿಸಿದ ಉಪಕರಣಗಳನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ದಾನ ಮಾಡಿ. ದಯವಿಟ್ಟು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಮೂಲಕ ದೇಣಿಗೆ ನೀಡಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದರೆ, ಆಸ್ಪತ್ರೆಯ ಆಡಳಿತವು ರಕ್ಷಣಾತ್ಮಕ ಸಾಧನಗಳ ಕೊರತೆಯನ್ನು ನಿರಾಕರಿಸಿದೆ. ಸಫ್ದರ್ಜಂಗ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮನೀಶ್ “ವೈದ್ಯಕೀಯ ಉಪಕರಣಗಳನ್ನು ದಾನ ಮಾಡಲು ಆಸಕ್ತಿ ತೋರಿಸಿದ ಲಾಭ ರಹಿತ ಸಂಸ್ಥೆಗಳಿಗೆ ಈ ನೋಟಿಸ್ ಹೊರಡಿಸಲಾಗಿತ್ತು, ಆದರೆ ಅನೇಕ ಜನರು ನಮ್ಮ ನೋಟಿಸ್‌ನ ಸ್ವರೂಪವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇಣಿಗೆಯ ಬ್ಯಾಂಕ್ ಖಾತಾ ಸಂಖ್ಯೆಯನ್ನು ತಪ್ಪಾಗಿ ಲಗತ್ತಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

ಸಫ್ದರ್ಜಂಗ್ ಆಸ್ಪತ್ರೆಗೆ ನಾವು ಯಾವತ್ತೂ ಹಣವನ್ನು ಕೇಳಲಿಲ್ಲ ಮತ್ತು ಬದಲಿಗೆ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೂಲಕ ಸರಿಯಾದ ಆಡಳಿತಾತ್ಮಕ ರೀತಿಯಲ್ಲಿ ವೈದ್ಯಕೀಯ ಉಪಕರಣಗಳನ್ನು ಮಾತ್ರ ದೇಣಿಗೆಯಾಗಿ ಕೇಳಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆಯಿಲ್ಲ, ಆದರೆ ಈ ಸಾಂಕ್ರಾಮಿಕ ರೋಗದ ಭವಿಷ್ಯದ ಹಾದಿಯು ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಆದ್ದರಿಂದ ಅದಕ್ಕಾಗಿ ನಮ್ಮ ಸನ್ನದ್ಧತೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿರಬೇಕು” ಎಂದು ಮನೀಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...