HomeಮುಖಪುಟPPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

- Advertisement -
- Advertisement -

ಏಮ್ಸ್ ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವೈಯಕ್ತಿಕ ರಕ್ಷಣಾ ಸಾಧನಗಳ ಲಭ್ಯತೆ,(ಪಿಪಿಇ) ಕೊವಿಡ್ -19 ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆಯ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ​​ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಖಂಡಿಸಿದ ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆರೋಗ್ಯ ಕಾರ್ಯಕರ್ತರ ಮನವಿಗಳನ್ನು ರಚನಾತ್ಮಕ ನೆಲೆಯಲ್ಲಿ ನೋಡಬೇಕು. ಆರೋಗ್ಯ ಕಾರ್ಯಕರ್ತರೊಂದಿಗೆ ಆರೋಗ್ಯಕರ ಚರ್ಚೆ ಮತ್ತು ಸಂವಾದ ನಡೆಸಬೇಕೆಂದು ಕೋರಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮೋದಿಯವರ ಪ್ರಬಲ ನಾಯಕತ್ವವನ್ನು ಶ್ಲಾಘಿಸಿದ ಅಸೋಸಿಯೇಷನ್, ಆರೋಗ್ಯ ಸೌಲಭ್ಯಗಳು ಮತ್ತು ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದೆ.

“ಕೊರೊನಾ ವಿರುದ್ಧ ಮೂಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ನಮ್ಮ ಆರೋಗ್ಯ ಕಾರ್ಯಕರ್ತರು ವೈಯಕ್ತಿಕ ರಕ್ಷಣಾ ಸಲಕರಣೆಗಳ (ಪಿಪಿಇ) ಕುರಿತು, ಕೊವಿಡ್ ಪರೀಕ್ಷಾ ಕಿಟ್‌ಗಳ ಲಭ್ಯತೆ,  ಸಂಪರ್ಕತಡೆಯ ಸೌಲಭ್ಯಗಳ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಈ ವಿಚಾರಗಳನ್ನು ರಚನಾತ್ಮಕವಾಗಿ ನೋಡಬೇಕು” ಎಂದು ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಪ್ರತಾಪ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್‌ಕುಮಾರ್ ಟಿ ಪತ್ರದಲ್ಲಿ ತಿಳಿಸಿದ್ದಾರೆ.

“ರೋಗಿಗಳ ಕಲ್ಯಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆಯ ಬದಲು ಟೀಕೆ ಎದುರಿಸಬೇಕಾಗಿದೆ. ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಆರೋಗ್ಯ ಕಾರ್ಯಕರ್ತರನ್ನು ಅವಮಾನಿಸುವ ಬದಲು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಚನಾತ್ಮಕ ಉದ್ದೇಶಗಳಿಗಾಗಿ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರರಾಗಿರುವುದರಿಂದ, ಈ ಪರಿಸ್ಥಿತಿಯಲ್ಲಿರುವ ವೈದ್ಯರನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಈ ಘಟನೆಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಅಪಹಾಸ್ಯ ಮಾಡುವ ಬದಲು ಸರ್ಕಾರವು ಅವರೊಂದಿಗೆ ಆರೋಗ್ಯಕರ ಸಂವಾದ ಮತ್ತು ಚರ್ಚೆಗೆ ನಡೆಸಬೇಕು. ಅವರ ಮೇಲಿನ ಎಲ್ಲಾ ಶಿಕ್ಷೆಗಳನ್ನು ಹಿಂಪಡೆಯಬೇಕು ಮತ್ತು ಅವರ ಗೌರವವನ್ನು ಪುನಃಸ್ಥಾಪಿಸಬೇಕು ”ಎಂದು ಅಸೋಸಿಯೇಷನ್ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಸಫ್ದರ್ಜಂಗ್ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ,  ವೈಯಕ್ತಿಕ ರಕ್ಷಣಾ ಸಾಧನಗಳು, ಎನ್ -95 ಮಾಸ್ಕುಗಳು, ಟ್ರಿಪಲ್ ಲೇಯರ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ದೇಣಿಗೆಯನ್ನು ಕೋರಿದೆ.

“ಸರ್ಕಾರವು ಸಹ ಈ ಉಪಕರಣಗಳನ್ನು ನೀಡಲು ಪ್ರಯತ್ನಿಸುತ್ತಿದೆ. ಆದರೆ ಬೇಡಿಕೆಯು ಪೂರೈಕೆಗಿಂತಲೂ ಹೆಚ್ಚಿದೆ, ದಯವಿಟ್ಟು ಮೇಲೆ ತಿಳಿಸಿದ ಉಪಕರಣಗಳನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ದಾನ ಮಾಡಿ. ದಯವಿಟ್ಟು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಮೂಲಕ ದೇಣಿಗೆ ನೀಡಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದರೆ, ಆಸ್ಪತ್ರೆಯ ಆಡಳಿತವು ರಕ್ಷಣಾತ್ಮಕ ಸಾಧನಗಳ ಕೊರತೆಯನ್ನು ನಿರಾಕರಿಸಿದೆ. ಸಫ್ದರ್ಜಂಗ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮನೀಶ್ “ವೈದ್ಯಕೀಯ ಉಪಕರಣಗಳನ್ನು ದಾನ ಮಾಡಲು ಆಸಕ್ತಿ ತೋರಿಸಿದ ಲಾಭ ರಹಿತ ಸಂಸ್ಥೆಗಳಿಗೆ ಈ ನೋಟಿಸ್ ಹೊರಡಿಸಲಾಗಿತ್ತು, ಆದರೆ ಅನೇಕ ಜನರು ನಮ್ಮ ನೋಟಿಸ್‌ನ ಸ್ವರೂಪವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇಣಿಗೆಯ ಬ್ಯಾಂಕ್ ಖಾತಾ ಸಂಖ್ಯೆಯನ್ನು ತಪ್ಪಾಗಿ ಲಗತ್ತಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

ಸಫ್ದರ್ಜಂಗ್ ಆಸ್ಪತ್ರೆಗೆ ನಾವು ಯಾವತ್ತೂ ಹಣವನ್ನು ಕೇಳಲಿಲ್ಲ ಮತ್ತು ಬದಲಿಗೆ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೂಲಕ ಸರಿಯಾದ ಆಡಳಿತಾತ್ಮಕ ರೀತಿಯಲ್ಲಿ ವೈದ್ಯಕೀಯ ಉಪಕರಣಗಳನ್ನು ಮಾತ್ರ ದೇಣಿಗೆಯಾಗಿ ಕೇಳಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆಯಿಲ್ಲ, ಆದರೆ ಈ ಸಾಂಕ್ರಾಮಿಕ ರೋಗದ ಭವಿಷ್ಯದ ಹಾದಿಯು ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಆದ್ದರಿಂದ ಅದಕ್ಕಾಗಿ ನಮ್ಮ ಸನ್ನದ್ಧತೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿರಬೇಕು” ಎಂದು ಮನೀಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...