HomeಮುಖಪುಟPPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

- Advertisement -
- Advertisement -

ಏಮ್ಸ್ ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವೈಯಕ್ತಿಕ ರಕ್ಷಣಾ ಸಾಧನಗಳ ಲಭ್ಯತೆ,(ಪಿಪಿಇ) ಕೊವಿಡ್ -19 ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆಯ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ​​ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಖಂಡಿಸಿದ ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆರೋಗ್ಯ ಕಾರ್ಯಕರ್ತರ ಮನವಿಗಳನ್ನು ರಚನಾತ್ಮಕ ನೆಲೆಯಲ್ಲಿ ನೋಡಬೇಕು. ಆರೋಗ್ಯ ಕಾರ್ಯಕರ್ತರೊಂದಿಗೆ ಆರೋಗ್ಯಕರ ಚರ್ಚೆ ಮತ್ತು ಸಂವಾದ ನಡೆಸಬೇಕೆಂದು ಕೋರಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮೋದಿಯವರ ಪ್ರಬಲ ನಾಯಕತ್ವವನ್ನು ಶ್ಲಾಘಿಸಿದ ಅಸೋಸಿಯೇಷನ್, ಆರೋಗ್ಯ ಸೌಲಭ್ಯಗಳು ಮತ್ತು ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದೆ.

“ಕೊರೊನಾ ವಿರುದ್ಧ ಮೂಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ನಮ್ಮ ಆರೋಗ್ಯ ಕಾರ್ಯಕರ್ತರು ವೈಯಕ್ತಿಕ ರಕ್ಷಣಾ ಸಲಕರಣೆಗಳ (ಪಿಪಿಇ) ಕುರಿತು, ಕೊವಿಡ್ ಪರೀಕ್ಷಾ ಕಿಟ್‌ಗಳ ಲಭ್ಯತೆ,  ಸಂಪರ್ಕತಡೆಯ ಸೌಲಭ್ಯಗಳ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಈ ವಿಚಾರಗಳನ್ನು ರಚನಾತ್ಮಕವಾಗಿ ನೋಡಬೇಕು” ಎಂದು ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಪ್ರತಾಪ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್‌ಕುಮಾರ್ ಟಿ ಪತ್ರದಲ್ಲಿ ತಿಳಿಸಿದ್ದಾರೆ.

“ರೋಗಿಗಳ ಕಲ್ಯಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆಯ ಬದಲು ಟೀಕೆ ಎದುರಿಸಬೇಕಾಗಿದೆ. ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಆರೋಗ್ಯ ಕಾರ್ಯಕರ್ತರನ್ನು ಅವಮಾನಿಸುವ ಬದಲು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಚನಾತ್ಮಕ ಉದ್ದೇಶಗಳಿಗಾಗಿ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರರಾಗಿರುವುದರಿಂದ, ಈ ಪರಿಸ್ಥಿತಿಯಲ್ಲಿರುವ ವೈದ್ಯರನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಈ ಘಟನೆಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಅಪಹಾಸ್ಯ ಮಾಡುವ ಬದಲು ಸರ್ಕಾರವು ಅವರೊಂದಿಗೆ ಆರೋಗ್ಯಕರ ಸಂವಾದ ಮತ್ತು ಚರ್ಚೆಗೆ ನಡೆಸಬೇಕು. ಅವರ ಮೇಲಿನ ಎಲ್ಲಾ ಶಿಕ್ಷೆಗಳನ್ನು ಹಿಂಪಡೆಯಬೇಕು ಮತ್ತು ಅವರ ಗೌರವವನ್ನು ಪುನಃಸ್ಥಾಪಿಸಬೇಕು ”ಎಂದು ಅಸೋಸಿಯೇಷನ್ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಸಫ್ದರ್ಜಂಗ್ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ,  ವೈಯಕ್ತಿಕ ರಕ್ಷಣಾ ಸಾಧನಗಳು, ಎನ್ -95 ಮಾಸ್ಕುಗಳು, ಟ್ರಿಪಲ್ ಲೇಯರ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ದೇಣಿಗೆಯನ್ನು ಕೋರಿದೆ.

“ಸರ್ಕಾರವು ಸಹ ಈ ಉಪಕರಣಗಳನ್ನು ನೀಡಲು ಪ್ರಯತ್ನಿಸುತ್ತಿದೆ. ಆದರೆ ಬೇಡಿಕೆಯು ಪೂರೈಕೆಗಿಂತಲೂ ಹೆಚ್ಚಿದೆ, ದಯವಿಟ್ಟು ಮೇಲೆ ತಿಳಿಸಿದ ಉಪಕರಣಗಳನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ದಾನ ಮಾಡಿ. ದಯವಿಟ್ಟು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಮೂಲಕ ದೇಣಿಗೆ ನೀಡಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದರೆ, ಆಸ್ಪತ್ರೆಯ ಆಡಳಿತವು ರಕ್ಷಣಾತ್ಮಕ ಸಾಧನಗಳ ಕೊರತೆಯನ್ನು ನಿರಾಕರಿಸಿದೆ. ಸಫ್ದರ್ಜಂಗ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮನೀಶ್ “ವೈದ್ಯಕೀಯ ಉಪಕರಣಗಳನ್ನು ದಾನ ಮಾಡಲು ಆಸಕ್ತಿ ತೋರಿಸಿದ ಲಾಭ ರಹಿತ ಸಂಸ್ಥೆಗಳಿಗೆ ಈ ನೋಟಿಸ್ ಹೊರಡಿಸಲಾಗಿತ್ತು, ಆದರೆ ಅನೇಕ ಜನರು ನಮ್ಮ ನೋಟಿಸ್‌ನ ಸ್ವರೂಪವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇಣಿಗೆಯ ಬ್ಯಾಂಕ್ ಖಾತಾ ಸಂಖ್ಯೆಯನ್ನು ತಪ್ಪಾಗಿ ಲಗತ್ತಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

ಸಫ್ದರ್ಜಂಗ್ ಆಸ್ಪತ್ರೆಗೆ ನಾವು ಯಾವತ್ತೂ ಹಣವನ್ನು ಕೇಳಲಿಲ್ಲ ಮತ್ತು ಬದಲಿಗೆ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೂಲಕ ಸರಿಯಾದ ಆಡಳಿತಾತ್ಮಕ ರೀತಿಯಲ್ಲಿ ವೈದ್ಯಕೀಯ ಉಪಕರಣಗಳನ್ನು ಮಾತ್ರ ದೇಣಿಗೆಯಾಗಿ ಕೇಳಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆಯಿಲ್ಲ, ಆದರೆ ಈ ಸಾಂಕ್ರಾಮಿಕ ರೋಗದ ಭವಿಷ್ಯದ ಹಾದಿಯು ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಆದ್ದರಿಂದ ಅದಕ್ಕಾಗಿ ನಮ್ಮ ಸನ್ನದ್ಧತೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿರಬೇಕು” ಎಂದು ಮನೀಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...