HomeಮುಖಪುಟPPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

- Advertisement -
- Advertisement -

ಏಮ್ಸ್ ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವೈಯಕ್ತಿಕ ರಕ್ಷಣಾ ಸಾಧನಗಳ ಲಭ್ಯತೆ,(ಪಿಪಿಇ) ಕೊವಿಡ್ -19 ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆಯ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ​​ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಖಂಡಿಸಿದ ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆರೋಗ್ಯ ಕಾರ್ಯಕರ್ತರ ಮನವಿಗಳನ್ನು ರಚನಾತ್ಮಕ ನೆಲೆಯಲ್ಲಿ ನೋಡಬೇಕು. ಆರೋಗ್ಯ ಕಾರ್ಯಕರ್ತರೊಂದಿಗೆ ಆರೋಗ್ಯಕರ ಚರ್ಚೆ ಮತ್ತು ಸಂವಾದ ನಡೆಸಬೇಕೆಂದು ಕೋರಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮೋದಿಯವರ ಪ್ರಬಲ ನಾಯಕತ್ವವನ್ನು ಶ್ಲಾಘಿಸಿದ ಅಸೋಸಿಯೇಷನ್, ಆರೋಗ್ಯ ಸೌಲಭ್ಯಗಳು ಮತ್ತು ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದೆ.

“ಕೊರೊನಾ ವಿರುದ್ಧ ಮೂಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ನಮ್ಮ ಆರೋಗ್ಯ ಕಾರ್ಯಕರ್ತರು ವೈಯಕ್ತಿಕ ರಕ್ಷಣಾ ಸಲಕರಣೆಗಳ (ಪಿಪಿಇ) ಕುರಿತು, ಕೊವಿಡ್ ಪರೀಕ್ಷಾ ಕಿಟ್‌ಗಳ ಲಭ್ಯತೆ,  ಸಂಪರ್ಕತಡೆಯ ಸೌಲಭ್ಯಗಳ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಈ ವಿಚಾರಗಳನ್ನು ರಚನಾತ್ಮಕವಾಗಿ ನೋಡಬೇಕು” ಎಂದು ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಪ್ರತಾಪ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್‌ಕುಮಾರ್ ಟಿ ಪತ್ರದಲ್ಲಿ ತಿಳಿಸಿದ್ದಾರೆ.

“ರೋಗಿಗಳ ಕಲ್ಯಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆಯ ಬದಲು ಟೀಕೆ ಎದುರಿಸಬೇಕಾಗಿದೆ. ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಆರೋಗ್ಯ ಕಾರ್ಯಕರ್ತರನ್ನು ಅವಮಾನಿಸುವ ಬದಲು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಚನಾತ್ಮಕ ಉದ್ದೇಶಗಳಿಗಾಗಿ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರರಾಗಿರುವುದರಿಂದ, ಈ ಪರಿಸ್ಥಿತಿಯಲ್ಲಿರುವ ವೈದ್ಯರನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಈ ಘಟನೆಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಅಪಹಾಸ್ಯ ಮಾಡುವ ಬದಲು ಸರ್ಕಾರವು ಅವರೊಂದಿಗೆ ಆರೋಗ್ಯಕರ ಸಂವಾದ ಮತ್ತು ಚರ್ಚೆಗೆ ನಡೆಸಬೇಕು. ಅವರ ಮೇಲಿನ ಎಲ್ಲಾ ಶಿಕ್ಷೆಗಳನ್ನು ಹಿಂಪಡೆಯಬೇಕು ಮತ್ತು ಅವರ ಗೌರವವನ್ನು ಪುನಃಸ್ಥಾಪಿಸಬೇಕು ”ಎಂದು ಅಸೋಸಿಯೇಷನ್ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಸಫ್ದರ್ಜಂಗ್ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ,  ವೈಯಕ್ತಿಕ ರಕ್ಷಣಾ ಸಾಧನಗಳು, ಎನ್ -95 ಮಾಸ್ಕುಗಳು, ಟ್ರಿಪಲ್ ಲೇಯರ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ದೇಣಿಗೆಯನ್ನು ಕೋರಿದೆ.

“ಸರ್ಕಾರವು ಸಹ ಈ ಉಪಕರಣಗಳನ್ನು ನೀಡಲು ಪ್ರಯತ್ನಿಸುತ್ತಿದೆ. ಆದರೆ ಬೇಡಿಕೆಯು ಪೂರೈಕೆಗಿಂತಲೂ ಹೆಚ್ಚಿದೆ, ದಯವಿಟ್ಟು ಮೇಲೆ ತಿಳಿಸಿದ ಉಪಕರಣಗಳನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ದಾನ ಮಾಡಿ. ದಯವಿಟ್ಟು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಮೂಲಕ ದೇಣಿಗೆ ನೀಡಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದರೆ, ಆಸ್ಪತ್ರೆಯ ಆಡಳಿತವು ರಕ್ಷಣಾತ್ಮಕ ಸಾಧನಗಳ ಕೊರತೆಯನ್ನು ನಿರಾಕರಿಸಿದೆ. ಸಫ್ದರ್ಜಂಗ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮನೀಶ್ “ವೈದ್ಯಕೀಯ ಉಪಕರಣಗಳನ್ನು ದಾನ ಮಾಡಲು ಆಸಕ್ತಿ ತೋರಿಸಿದ ಲಾಭ ರಹಿತ ಸಂಸ್ಥೆಗಳಿಗೆ ಈ ನೋಟಿಸ್ ಹೊರಡಿಸಲಾಗಿತ್ತು, ಆದರೆ ಅನೇಕ ಜನರು ನಮ್ಮ ನೋಟಿಸ್‌ನ ಸ್ವರೂಪವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇಣಿಗೆಯ ಬ್ಯಾಂಕ್ ಖಾತಾ ಸಂಖ್ಯೆಯನ್ನು ತಪ್ಪಾಗಿ ಲಗತ್ತಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

ಸಫ್ದರ್ಜಂಗ್ ಆಸ್ಪತ್ರೆಗೆ ನಾವು ಯಾವತ್ತೂ ಹಣವನ್ನು ಕೇಳಲಿಲ್ಲ ಮತ್ತು ಬದಲಿಗೆ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೂಲಕ ಸರಿಯಾದ ಆಡಳಿತಾತ್ಮಕ ರೀತಿಯಲ್ಲಿ ವೈದ್ಯಕೀಯ ಉಪಕರಣಗಳನ್ನು ಮಾತ್ರ ದೇಣಿಗೆಯಾಗಿ ಕೇಳಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆಯಿಲ್ಲ, ಆದರೆ ಈ ಸಾಂಕ್ರಾಮಿಕ ರೋಗದ ಭವಿಷ್ಯದ ಹಾದಿಯು ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಆದ್ದರಿಂದ ಅದಕ್ಕಾಗಿ ನಮ್ಮ ಸನ್ನದ್ಧತೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿರಬೇಕು” ಎಂದು ಮನೀಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...