HomeಮುಖಪುಟPPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

- Advertisement -
- Advertisement -

ಏಮ್ಸ್ ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವೈಯಕ್ತಿಕ ರಕ್ಷಣಾ ಸಾಧನಗಳ ಲಭ್ಯತೆ,(ಪಿಪಿಇ) ಕೊವಿಡ್ -19 ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆಯ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ​​ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಖಂಡಿಸಿದ ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆರೋಗ್ಯ ಕಾರ್ಯಕರ್ತರ ಮನವಿಗಳನ್ನು ರಚನಾತ್ಮಕ ನೆಲೆಯಲ್ಲಿ ನೋಡಬೇಕು. ಆರೋಗ್ಯ ಕಾರ್ಯಕರ್ತರೊಂದಿಗೆ ಆರೋಗ್ಯಕರ ಚರ್ಚೆ ಮತ್ತು ಸಂವಾದ ನಡೆಸಬೇಕೆಂದು ಕೋರಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮೋದಿಯವರ ಪ್ರಬಲ ನಾಯಕತ್ವವನ್ನು ಶ್ಲಾಘಿಸಿದ ಅಸೋಸಿಯೇಷನ್, ಆರೋಗ್ಯ ಸೌಲಭ್ಯಗಳು ಮತ್ತು ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದೆ.

“ಕೊರೊನಾ ವಿರುದ್ಧ ಮೂಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ನಮ್ಮ ಆರೋಗ್ಯ ಕಾರ್ಯಕರ್ತರು ವೈಯಕ್ತಿಕ ರಕ್ಷಣಾ ಸಲಕರಣೆಗಳ (ಪಿಪಿಇ) ಕುರಿತು, ಕೊವಿಡ್ ಪರೀಕ್ಷಾ ಕಿಟ್‌ಗಳ ಲಭ್ಯತೆ,  ಸಂಪರ್ಕತಡೆಯ ಸೌಲಭ್ಯಗಳ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಈ ವಿಚಾರಗಳನ್ನು ರಚನಾತ್ಮಕವಾಗಿ ನೋಡಬೇಕು” ಎಂದು ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಪ್ರತಾಪ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್‌ಕುಮಾರ್ ಟಿ ಪತ್ರದಲ್ಲಿ ತಿಳಿಸಿದ್ದಾರೆ.

“ರೋಗಿಗಳ ಕಲ್ಯಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆಯ ಬದಲು ಟೀಕೆ ಎದುರಿಸಬೇಕಾಗಿದೆ. ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಆರೋಗ್ಯ ಕಾರ್ಯಕರ್ತರನ್ನು ಅವಮಾನಿಸುವ ಬದಲು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಚನಾತ್ಮಕ ಉದ್ದೇಶಗಳಿಗಾಗಿ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರರಾಗಿರುವುದರಿಂದ, ಈ ಪರಿಸ್ಥಿತಿಯಲ್ಲಿರುವ ವೈದ್ಯರನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಈ ಘಟನೆಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಅಪಹಾಸ್ಯ ಮಾಡುವ ಬದಲು ಸರ್ಕಾರವು ಅವರೊಂದಿಗೆ ಆರೋಗ್ಯಕರ ಸಂವಾದ ಮತ್ತು ಚರ್ಚೆಗೆ ನಡೆಸಬೇಕು. ಅವರ ಮೇಲಿನ ಎಲ್ಲಾ ಶಿಕ್ಷೆಗಳನ್ನು ಹಿಂಪಡೆಯಬೇಕು ಮತ್ತು ಅವರ ಗೌರವವನ್ನು ಪುನಃಸ್ಥಾಪಿಸಬೇಕು ”ಎಂದು ಅಸೋಸಿಯೇಷನ್ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಸಫ್ದರ್ಜಂಗ್ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ,  ವೈಯಕ್ತಿಕ ರಕ್ಷಣಾ ಸಾಧನಗಳು, ಎನ್ -95 ಮಾಸ್ಕುಗಳು, ಟ್ರಿಪಲ್ ಲೇಯರ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ದೇಣಿಗೆಯನ್ನು ಕೋರಿದೆ.

“ಸರ್ಕಾರವು ಸಹ ಈ ಉಪಕರಣಗಳನ್ನು ನೀಡಲು ಪ್ರಯತ್ನಿಸುತ್ತಿದೆ. ಆದರೆ ಬೇಡಿಕೆಯು ಪೂರೈಕೆಗಿಂತಲೂ ಹೆಚ್ಚಿದೆ, ದಯವಿಟ್ಟು ಮೇಲೆ ತಿಳಿಸಿದ ಉಪಕರಣಗಳನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ದಾನ ಮಾಡಿ. ದಯವಿಟ್ಟು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಮೂಲಕ ದೇಣಿಗೆ ನೀಡಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದರೆ, ಆಸ್ಪತ್ರೆಯ ಆಡಳಿತವು ರಕ್ಷಣಾತ್ಮಕ ಸಾಧನಗಳ ಕೊರತೆಯನ್ನು ನಿರಾಕರಿಸಿದೆ. ಸಫ್ದರ್ಜಂಗ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮನೀಶ್ “ವೈದ್ಯಕೀಯ ಉಪಕರಣಗಳನ್ನು ದಾನ ಮಾಡಲು ಆಸಕ್ತಿ ತೋರಿಸಿದ ಲಾಭ ರಹಿತ ಸಂಸ್ಥೆಗಳಿಗೆ ಈ ನೋಟಿಸ್ ಹೊರಡಿಸಲಾಗಿತ್ತು, ಆದರೆ ಅನೇಕ ಜನರು ನಮ್ಮ ನೋಟಿಸ್‌ನ ಸ್ವರೂಪವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇಣಿಗೆಯ ಬ್ಯಾಂಕ್ ಖಾತಾ ಸಂಖ್ಯೆಯನ್ನು ತಪ್ಪಾಗಿ ಲಗತ್ತಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

ಸಫ್ದರ್ಜಂಗ್ ಆಸ್ಪತ್ರೆಗೆ ನಾವು ಯಾವತ್ತೂ ಹಣವನ್ನು ಕೇಳಲಿಲ್ಲ ಮತ್ತು ಬದಲಿಗೆ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೂಲಕ ಸರಿಯಾದ ಆಡಳಿತಾತ್ಮಕ ರೀತಿಯಲ್ಲಿ ವೈದ್ಯಕೀಯ ಉಪಕರಣಗಳನ್ನು ಮಾತ್ರ ದೇಣಿಗೆಯಾಗಿ ಕೇಳಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆಯಿಲ್ಲ, ಆದರೆ ಈ ಸಾಂಕ್ರಾಮಿಕ ರೋಗದ ಭವಿಷ್ಯದ ಹಾದಿಯು ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಆದ್ದರಿಂದ ಅದಕ್ಕಾಗಿ ನಮ್ಮ ಸನ್ನದ್ಧತೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿರಬೇಕು” ಎಂದು ಮನೀಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...