Homeಕರ್ನಾಟಕಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು: ಚಿಂತಕ ವಡ್ಡಗೆರೆ ನಾಗರಾಜಯ್ಯ

ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು: ಚಿಂತಕ ವಡ್ಡಗೆರೆ ನಾಗರಾಜಯ್ಯ

‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ಬಿಡುಗಡೆಗೆ ಸಂಘಪರಿವಾರದ ವಿರೋಧಕ್ಕೆ ಅಸಮಾಧಾನ

- Advertisement -
- Advertisement -

ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು. ಇಲ್ಲಿವರೆಗೆ ನಡೆದಿರುವ ಚಳವಳಿಗಳಾಗಲಿ, ಮಾನವೀಯ ಚಿಂತನೆಗಳಾಗಲಿ ಹೀಗೆ ನಮ್ಮನ್ನೆಲ್ಲಾ ಬೆಸೆದಿರುವುದು ಅಕ್ಷರ ಮತ್ತು ಪುಸ್ತಕಗಳ ಮೂಲಕವಾಗಿವೆ ಎಂದು ಚಿಂತಕ ವಡ್ಡಗೆರೆ ನಾಗರಾಜಯ್ಯ ಅವರು ಹೇಳಿದ್ದಾರೆ. ಖ್ಯಾತ ಕ್ರಿಕೆಟಿಗ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಗ್ಗೆಗಿನ “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕಕ್ಕೆ ಸಂಘಪರಿವಾರ ವಿರೋಧ ವ್ಯಕ್ತಪಡಿಸಿರುವುದ ಬಗ್ಗೆ ಅವರು ಮಾತನಾಡುತ್ತಿದ್ದರು.

ಪ್ರಥಮ ಪ್ರಕಾಶನ ಬೆಂಗಳೂರು ಪ್ರಕಟಿಸಿದ್ದ “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ಯೋಜಿಸಲಾಗಿತ್ತು. ಆದರೆ ಸಂಘಪರಿವಾರದಿಂದ ವಿರೋಧ ವ್ಯಕ್ತವಾದ್ದರಿಂದ ನಿಗದಿಪಡಿಸಲಾಗಿದ್ದ ಸ್ಥಳ ಬದಲಾಯಿಸಿ, ಲೇಖಕರ ಮನೆಯಲ್ಲಿಯೇ ಗುರುವಾರ ಸಂಜೆ ಬಿಡುಗಡೆಗೊಳಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಾಗರಾಜಯ್ಯ ಅವರು, “ಇಮ್ರನ್ ಖಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಕ್ರಿಕೆಟ್ ತಾರೆ. ನಮಗೆ ಅವರ ರಾಜಕೀಯ, ಧಾರ್ಮಿಕ ಚಿಂತನೆಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಅಂತಹ ಭಿನ್ನಮತಗಳನ್ನು ಇಟ್ಟುಕೊಂಡೆ ಒಬ್ಬ ವ್ಯಕ್ತಿಯ ಒಳಿತು, ವ್ಯಕ್ತಿತ್ವದ ಘನತೆ, ಅವರ ಸಾಧನೆಯನ್ನು ಗುರುತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ತುಂಬಾ ಮುಖ್ಯವಾಗುತ್ತದೆ. ಎಲ್ಲಿಂದಲೇ ಆಗಲಿ, ನಮಗೆ ಹೊಸ ಬೆಳಕು, ನೀರು, ವಾತಾವರಣ, ಹೊಸತನ ಬೇಕಾಗಿದೆ. ಇವುಗಳನ್ನು ಸ್ವಾಗತಿಸೋಣ. ಮಾನವೀಯ ಆಲೋಚನೆಗಳು ಎಲ್ಲಿಂದ ಬಂದರೂ ಏನು ತಪ್ಪಿದೆ?” ಎಂದು ಹೇಳಿದರು.

ಇದನ್ನೂ ಓದಿ: ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

“ಎರಡು ದೇಶಗಳ ಸ್ಥಿತಿ ಈಗ ದಾಯಾದಿ ಮತ್ಸರದ ತರ ಆಗಿಹೋಗಿದೆ. ಆದರೆ ಈ ದಾಯಾದಿಗಳು ತಮ್ಮ ಮತ್ಸರ ಮರೆತು ಸೋದರ ಭಾವದಿಂದ ಇರಬಾರದು ಎಂದೇನು ಇಲ್ಲವಲ್ಲ? ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು. ಇಲ್ಲಿವರೆಗೆ ನಡೆದಿರುವ ಚಳವಳಿಗಳಾಗಲಿ, ಮಾನವೀಯ ಚಿಂತನೆಗಳಾಗಲಿ ಹೀಗೆ ನಮ್ಮನ್ನೆಲ್ಲಾ ಬೆಸೆದಿರುವುದು ಅಕ್ಷರ ಮತ್ತು ಪುಸ್ತಕಗಳ ಮೂಲಕವಾಗಿವೆ”

“ಹೀಗೆ ಇದೊಂದು ಸಾಂಸ್ಕೃತಿಕ ಕೊಡುಕೊಳ್ಳುವಿಕೆ ಹಾಗೂ ಅನುಸಂಧಾನವಾಗಿದೆ. ಈ ಅನುಸಂಧಾನ ನಡೆದಾಗಲೆ ವ್ಯಕ್ತಿತ್ವ ವಿಕಸನ ಆಗುವುದು. ವೈರಿ ಎಂದು ಹೇಳಿಕೊಂಡು ಅಲ್ಲಿನ ಎಲ್ಲರಲ್ಲೂ ವೈರತ್ವವಿದೆ, ವಿಷವಿದೆ ಎನ್ನುತ್ತಾ ಹೋದರೆ ನಮ್ಮೊಳಗೆಯೆ ವಿಷವಿದೆ ಎಂದರ್ಥ. ಕೆಟ್ಟವನು ಯಾರು ಎಂದು ಹುಡುಕಿಕೊಂಡು ಹೋಗುವ ಗುಣವೇ ನಮ್ಮೊಳಗಿನ ಕೆಟ್ಟತನ”.

“ವಚನ ಸಾಹಿತ್ಯ, ಬುದ್ಧನ ಬೋಧನೆಗಳು, ಮಹಾವೀರನ ಬೋಧನೆಗಳನ್ನೇ ನೋಡಿ, ಈ ಎಲ್ಲವು ನಮಗೆ ಸಾಹಿತ್ಯದ ಮೂಲಕ ಸಿಕ್ಕವುಗಾಳಾಗಿವೆ. ಯಾವ ಚಳವಳಿ ಮಾಡದೆ ಇರುವ ಕೆಲಸವನ್ನು ಒಂದು ಸಾಹಿತ್ಯ ಮಾಡುತ್ತವೆ. ಹಾದಿ ಬೀದಿ ಹೋರಾಟಕ್ಕಿಂತಲೂ ದೊಡ್ಡದಾದ ಕೂಡಿಸುವಿಕೆ, ಬೆಸೆಯುವಿಕೆ ಒಂದು ಪುಸ್ತಕದಿಂದ ಸಾಧ್ಯವಿದೆ. ಅಂತಹ ಪುಸ್ತಕಗಳನ್ನು ನಾವು ಅನ್ಯ ದೇಶದವನು, ವೈರಿ ಎಂದು ಹೇಳಿ ನೋಡಿದರೆ ಹೇಗೆ?”

ಇದನ್ನೂ ಓದಿ: ಸಂಘಪರಿವಾರದ ವಿರೋಧದ ನಡುವೆಯು ‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ಬಿಡುಗಡೆ

“ಪಾಕಿಸ್ತಾನ ಮತ್ತು ನಮ್ಮ ದೇಶದ ಶಿಕ್ಷಣ, ಬಡತನ, ಕೃಷಿ ಹೀಗೆ ಯಾವುದೇ ವಿಚಾವನ್ನು ತೆಗೆದುಕೊಳ್ಳಿ, ಹೆಚ್ಚು ಕಡಿಮೆ ನಾವು ಅವರು ಸಮಾನ ಮತ್ತು ಸಮಾನ ದುಃಖಿಗಳು. ಅವರ ಮತ್ತು ನಮ್ಮ ಬಾಳಾಟ, ಗೋಳಾಟ, ಜೀವನ ವಿಧಾನ, ಸಂಸ್ಕೃತಿ ವಿಧಾನ, ನೆಲೆ ಎಲ್ಲವೂ ಒಂದೆ ಆಗಿದೆ. ಹೀಗಿರುವಾಗ ಅವರ ಬಗ್ಗೆ ಓದಬಾರದು ಎಂದು ಹೇಗೆ ಹೇಳಲು ಸಾಧ್ಯ? ನಮ್ಮ ರಾಜಕೀಯ ಮತ್ತು ಧಾರ್ಮಿಕ ಭಿನ್ನಾಭಿಪ್ರಾಯಗಳು ಇರಲಿ, ಭಿನ್ನಮತಗಳು ಯಾವುತ್ತಿಗೂ ಸ್ವಾಗತಾರ್ಹ. ಆದರೆ ಸಂಪೂರ್ಣ ವೈರಿ ಎಂದು ಅವರನ್ನು ಆಚೆಕಡೆ ಎಸೆದುಬಿಟ್ಟ ನಾವು ಸಾಧಿಸುವುದು ಏನಿದೆ?”

“ಬ್ರಿಟೀಷರ ವಿರುದ್ಧ ಹೋರಾಟ ಮಾಡುವಾಗ ನಾವು ಒಂದೇ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಂತೆ ಬದುಕಿದ್ದವರು. ಹೀಗಿರುವಾಗ ಒಬ್ಬ ಕ್ರಿಕೆಟ್ ತಾರೆ, ಮಾಜಿ ಪ್ರಧಾನ ಮಂತ್ರಿಯ ಪುಸ್ತಕ ನಮ್ಮಲ್ಲಿ ಯಾಕೆ ಬಿಡುಗಡೆಯಾಗಬೇಕು ಎನ್ನುವುದು ಸರಿಯಲ್ಲ”

“ಮುಂದಕ್ಕೂ ನಾವು ವೈರಿಗಳಾಗಿಯೆ ಬದುಕಬೇಕೆ? ಇನ್ನೆಷ್ಟು ಕಾಲ ವೈರಿಗಳಂತೆ ಬಾಳಿಕೊಂಡು ಹೋಗಬೇಕು? ಪುಲ್ವಾಮದಲ್ಲಿ ಭಾರತೀಯರನ್ನು ಕೊಂದಿದ್ದಕ್ಕೆ ಅವರು ಸಂಭ್ರಮಪಟ್ಟರು ಎಂಬುವುದು ಈಗ ವಿವಾದ. ಆದರೆ ಪಾಕಿಸ್ತಾನಿಗಳನ್ನು ಕೊಂದರೆ ನಮ್ಮ ದೇಶದಲ್ಲಿ ಸಂಭ್ರಮ ಪಡುವವರು ಇಲ್ಲವೆ?. ಅದಾಗ್ಯೂ ನಮ್ಮ ಧರ್ಮ, ನಮ್ಮ ಮೌಲ್ಯ, ಕೊಲ್ಲುವುದಲ್ಲ ಬದಲಾಗಿ ಅಹಿಂಸೆಯಾಗಿದೆ. ಮಾನವೀಯತೆ, ಪ್ರೀತಿಯಾಗಿದೆ ನಮ್ಮ ಮೌಲ್ಯ, ಧರ್ಮ” ಎಂದು ನಾಗರಾಜಯ್ಯ ಅವರು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ; ‘ಸಮನ್ವಯ ಮಾಡಿಕೊಳ್ಳದಿದ್ದರೆ ಕಾವ್ಯ ಹೇಗಾಗುತ್ತೆ?’ ಚೆನ್ನವೀರ ಕಣವಿ ಅವರ ಸಂದರ್ಶನ

“ಇಂಗ್ಲೀಷರು ನಮ್ಮನ್ನು ಗುಲಾಮಗಿರಿಗೆ ತಳ್ಳಿ ನಮ್ಮನ್ನು ಆಳ್ವಿಕೆ ನಡೆಸಿದವರಾಗಿದ್ದಾರೆ. ಇಂಗ್ಲಿಷ್‌‌ನವರ ಕೃತಿಗಳನ್ನು ಇಲ್ಲಿ ಯಾಕೆ ಓದುತ್ತೀರಿ ಎಂದು ಕೇಳಿದರೆ ಸರಿಯಾಗುತ್ತದೆಯೆ. ಆದರೆ ಅಲ್ಲಿನ ಸಾಹಿತ್ಯವೂ ನಮಗೆ ಬೇಕು, ಹಾಗೆಯೆ ಇಲ್ಲಿನ ಸಾಹಿತ್ಯವನ್ನೂ ನಾವು ಅಲ್ಲಿಗೆ ಕಳುಹಿಸಬೇಕು. ಕಾರ್ಲ್ ಮಾರ್ಕ್ಸ್‌ ಅನ್ನು ನಾವು ಓದುತ್ತೇವೆ ಎಂದರೆ, ಇಲ್ಲಿನ ಬಸವ, ಬುದ್ಧನನ್ನು ಅವರು ಓದುವುದು ಬೇಡವೆ? ಚೀನಾದ ಕ್ರಾಂತಿಕಾರಿ ಮಾವೋತ್ಸೆ ತುಂಗನನ್ನು ನಾವು ಓದುತ್ತೇವೆ ಎಂದರೆ, ಇಲ್ಲಿನ ಭಗತ್‌ ಸಿಂಗ್‌ನನ್ನು ಅವರು ತಿಳಿಯುವುದು ಬೇಡವೆ? ಟಾಲ್ಸ್‌ಟಾಯ್ ಅವರನ್ನು ನಾವು ಓದುತ್ತೇವೆ, ಕುವೆಂಪು ಅವರನ್ನು ಅವರು ಓದುವುದು ಬೇಡವೆ?”

“ಭಾರತ ಮತ್ತು ಪಾಕಿಸ್ತಾನ ಎರಡು ಕೂಡಾ ಘೋಷಿತ ಶತ್ರುಗಳು ಎಂಬಂತೆ ಬಿಂಬಿಸಲಾಗುತ್ತಿದೆ. ಅದರಲ್ಲೂ ಈ ಎರಡು ದೇಶಗಳನ್ನು ಧರ್ಮದ ನೆಲೆಯಲ್ಲಿ, ಮುಸ್ಲಿಮರು ಎ‌ನ್ನುವ ಕಾರಣಕ್ಕೆ ಘೋಷಿತ ಶತ್ರುಗಳು ಎಂಬಂತೆ ಬಿಂಬಿಸಲಾಗುತ್ತಿದೆ. ಹೀಗಾದರೆ ಉಳಿದ ಎಲ್ಲಾ ದೇಶಕ್ಕೂ ಈ ಧರ್ಮದ ನೆಲೆಯನ್ನೇ ಇವರು ಅನ್ವಯಿಸುತ್ತಾರೆ. ಹಿಂದೂ ಧರ್ಮವನ್ನು ಶ್ರೇಷ್ಠ ಎಂದು ನಂಬಿಸುತ್ತಾ, ಇಸ್ಲಾಂ ಧರ್ಮವನ್ನು ವೈರಿ ನೆಲೆಯಲ್ಲಿ ಕಂಡು ಬೇರೆ ರಾಷ್ಟ್ರಗಳನ್ನು ಕೂಡಾ ವೈರಿ ದೇಶಗಳಂತೆ ಕಾಣುತ್ತಾರೆ”

“ವರ್ತಮಾನ ಭಾರತದ ಅಂತರಂಗದ ಒಳಗೆ ಕೂಡಾ ಹಿಂದೂ-ಮುಸ್ಲಿಂ ವೈರತ್ವ ಭಾರಿ ಜೋರಾಗಿ ಹೊಗೆಯಾಡುತ್ತಿದೆ. ಹೀಗಾಗಿ ಇದಕ್ಕೆ ಲಗಾಮು ಹಾಕುವುದು ತುಂಬಾ ಅಗತ್ಯವಿದೆ. ಈ ಹೊತ್ತು ಭಾರತ ಅಂತಾರಾಷ್ಟ್ರೀಯ ಸಂಬಂಧಗಳನ್ನು ಬೇರೆ ಬೇರೆ ದೇಶಗಳೊಂದಿಗೆ ದಕ್ಕಿಸಿಕೊಳ್ಳಬೇಕಾಗಿದೆ. ದೇಶದ ರಾಜತಾಂತ್ರಿಕದ ಮುಖ್ಯಗುರಿ ಈ ರೀತಿ ಅಂತಾರಾಷ್ಟ್ರೀಯ ಸಂಬಂಧಗಳನ್ನು ಬೆಸೆದುಕೊಳ್ಳುವುದು. ಭಾರತ-ಪಾಕಿಸ್ತಾನ ರಾಷ್ಟ್ರಗಳು ಬೇರೆ ಯಾವುದೆ ದೇಶಗಳಿಗಿಂತ ಹೆಚ್ಚಾಗಿ ಸೋದರ ಸಂಬಂಧವನ್ನು ಬೆಳೆಸಿಕೊಳ್ಳಬೇಕಿದೆ. ಯಾಕೆಂದರೆ ಈ ಎರಡು ದೇಶಗಳು ವಿಭಜನೆ ಪೂರ್ವದಲ್ಲಿ ಬ್ರಿಟೀಷರ ವಿರುದ್ಧ ಐಕ್ಯತೆಯಿಂದ ಹೋರಾಡಿ ದೇಶಗಳನ್ನು ಸ್ವಾತಂತ್ಯ್ರಗೊಳಿಸಿವೆ. ಆ ವೇಳೆ ಇದ್ದಂತಹ ಐಕ್ಯತೆ, ಆಗಿನ ಸೋದರ ಸಂಬಂಧಗಳನ್ನು ನೆನಪಿಸಿಕೊಂಡರೆ ಮುಸ್ಲಿಮರು ಮಾತ್ರವಲ್ಲ, ಪಾಕಿಸ್ತಾನದವರು ಕೂಡಾ ನಮ್ಮ ಸಹೋದರರೆ ಎಂಬ ಬಂಧುತ್ವ ಬಂದುಬಿಡುತ್ತದೆ” ಎಂದು ನಾಗರಾಜಯ್ಯ ಅವರು ಹೇಳಿದರು.

ಇದನ್ನೂ ಓದಿ: ಎಷ್ಟು ಬೆಂಕಿ ಹಚ್ಚಬಲ್ಲಿರಿ ನೀವು?

ಮಾಜಿ ಕ್ರಿಕೆಟಿಗ, ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಬಗ್ಗೆಗಿನ, “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕವನ್ನು ಗುರುವಾರ ಬೆಂಗಳೂರಿನ ನಾಗರಬಾವಿಯಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕದ ಲೇಖಕರಾದ ಸುಧಾಕರ್‌ ಎಸ್‌.ಬಿ. ಅವರ ನಿವಾಸದಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌‌. ನಾಗಮೋಹನ ದಾಸ್‌ ಅವರು ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ, ಮಾಜಿ ಸಚಿವರಾದ ಡಾ.ಲೀಲಾದೇವಿ ಆರ್ ಪ್ರಸಾದ್, ಪುಸ್ತಕದ ಲೇಖಕ ಸುಧಾಕರ್ ಎಸ್ ಬಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಪ್ರಕಾಶ್ ಟಿ.ಎನ್. ಕಮ್ಮರಡಿ, ಪ್ರೊ. ರಾಜಪ್ಪ ದಳವಾಯಿ, ವಿ.ಎನ್. ವೀರನಾಗಪ್ಪ ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...