Homeಕರ್ನಾಟಕಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು: ಚಿಂತಕ ವಡ್ಡಗೆರೆ ನಾಗರಾಜಯ್ಯ

ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು: ಚಿಂತಕ ವಡ್ಡಗೆರೆ ನಾಗರಾಜಯ್ಯ

‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ಬಿಡುಗಡೆಗೆ ಸಂಘಪರಿವಾರದ ವಿರೋಧಕ್ಕೆ ಅಸಮಾಧಾನ

- Advertisement -
- Advertisement -

ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು. ಇಲ್ಲಿವರೆಗೆ ನಡೆದಿರುವ ಚಳವಳಿಗಳಾಗಲಿ, ಮಾನವೀಯ ಚಿಂತನೆಗಳಾಗಲಿ ಹೀಗೆ ನಮ್ಮನ್ನೆಲ್ಲಾ ಬೆಸೆದಿರುವುದು ಅಕ್ಷರ ಮತ್ತು ಪುಸ್ತಕಗಳ ಮೂಲಕವಾಗಿವೆ ಎಂದು ಚಿಂತಕ ವಡ್ಡಗೆರೆ ನಾಗರಾಜಯ್ಯ ಅವರು ಹೇಳಿದ್ದಾರೆ. ಖ್ಯಾತ ಕ್ರಿಕೆಟಿಗ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಗ್ಗೆಗಿನ “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕಕ್ಕೆ ಸಂಘಪರಿವಾರ ವಿರೋಧ ವ್ಯಕ್ತಪಡಿಸಿರುವುದ ಬಗ್ಗೆ ಅವರು ಮಾತನಾಡುತ್ತಿದ್ದರು.

ಪ್ರಥಮ ಪ್ರಕಾಶನ ಬೆಂಗಳೂರು ಪ್ರಕಟಿಸಿದ್ದ “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ಯೋಜಿಸಲಾಗಿತ್ತು. ಆದರೆ ಸಂಘಪರಿವಾರದಿಂದ ವಿರೋಧ ವ್ಯಕ್ತವಾದ್ದರಿಂದ ನಿಗದಿಪಡಿಸಲಾಗಿದ್ದ ಸ್ಥಳ ಬದಲಾಯಿಸಿ, ಲೇಖಕರ ಮನೆಯಲ್ಲಿಯೇ ಗುರುವಾರ ಸಂಜೆ ಬಿಡುಗಡೆಗೊಳಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಾಗರಾಜಯ್ಯ ಅವರು, “ಇಮ್ರನ್ ಖಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಕ್ರಿಕೆಟ್ ತಾರೆ. ನಮಗೆ ಅವರ ರಾಜಕೀಯ, ಧಾರ್ಮಿಕ ಚಿಂತನೆಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಅಂತಹ ಭಿನ್ನಮತಗಳನ್ನು ಇಟ್ಟುಕೊಂಡೆ ಒಬ್ಬ ವ್ಯಕ್ತಿಯ ಒಳಿತು, ವ್ಯಕ್ತಿತ್ವದ ಘನತೆ, ಅವರ ಸಾಧನೆಯನ್ನು ಗುರುತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ತುಂಬಾ ಮುಖ್ಯವಾಗುತ್ತದೆ. ಎಲ್ಲಿಂದಲೇ ಆಗಲಿ, ನಮಗೆ ಹೊಸ ಬೆಳಕು, ನೀರು, ವಾತಾವರಣ, ಹೊಸತನ ಬೇಕಾಗಿದೆ. ಇವುಗಳನ್ನು ಸ್ವಾಗತಿಸೋಣ. ಮಾನವೀಯ ಆಲೋಚನೆಗಳು ಎಲ್ಲಿಂದ ಬಂದರೂ ಏನು ತಪ್ಪಿದೆ?” ಎಂದು ಹೇಳಿದರು.

ಇದನ್ನೂ ಓದಿ: ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

“ಎರಡು ದೇಶಗಳ ಸ್ಥಿತಿ ಈಗ ದಾಯಾದಿ ಮತ್ಸರದ ತರ ಆಗಿಹೋಗಿದೆ. ಆದರೆ ಈ ದಾಯಾದಿಗಳು ತಮ್ಮ ಮತ್ಸರ ಮರೆತು ಸೋದರ ಭಾವದಿಂದ ಇರಬಾರದು ಎಂದೇನು ಇಲ್ಲವಲ್ಲ? ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು. ಇಲ್ಲಿವರೆಗೆ ನಡೆದಿರುವ ಚಳವಳಿಗಳಾಗಲಿ, ಮಾನವೀಯ ಚಿಂತನೆಗಳಾಗಲಿ ಹೀಗೆ ನಮ್ಮನ್ನೆಲ್ಲಾ ಬೆಸೆದಿರುವುದು ಅಕ್ಷರ ಮತ್ತು ಪುಸ್ತಕಗಳ ಮೂಲಕವಾಗಿವೆ”

“ಹೀಗೆ ಇದೊಂದು ಸಾಂಸ್ಕೃತಿಕ ಕೊಡುಕೊಳ್ಳುವಿಕೆ ಹಾಗೂ ಅನುಸಂಧಾನವಾಗಿದೆ. ಈ ಅನುಸಂಧಾನ ನಡೆದಾಗಲೆ ವ್ಯಕ್ತಿತ್ವ ವಿಕಸನ ಆಗುವುದು. ವೈರಿ ಎಂದು ಹೇಳಿಕೊಂಡು ಅಲ್ಲಿನ ಎಲ್ಲರಲ್ಲೂ ವೈರತ್ವವಿದೆ, ವಿಷವಿದೆ ಎನ್ನುತ್ತಾ ಹೋದರೆ ನಮ್ಮೊಳಗೆಯೆ ವಿಷವಿದೆ ಎಂದರ್ಥ. ಕೆಟ್ಟವನು ಯಾರು ಎಂದು ಹುಡುಕಿಕೊಂಡು ಹೋಗುವ ಗುಣವೇ ನಮ್ಮೊಳಗಿನ ಕೆಟ್ಟತನ”.

“ವಚನ ಸಾಹಿತ್ಯ, ಬುದ್ಧನ ಬೋಧನೆಗಳು, ಮಹಾವೀರನ ಬೋಧನೆಗಳನ್ನೇ ನೋಡಿ, ಈ ಎಲ್ಲವು ನಮಗೆ ಸಾಹಿತ್ಯದ ಮೂಲಕ ಸಿಕ್ಕವುಗಾಳಾಗಿವೆ. ಯಾವ ಚಳವಳಿ ಮಾಡದೆ ಇರುವ ಕೆಲಸವನ್ನು ಒಂದು ಸಾಹಿತ್ಯ ಮಾಡುತ್ತವೆ. ಹಾದಿ ಬೀದಿ ಹೋರಾಟಕ್ಕಿಂತಲೂ ದೊಡ್ಡದಾದ ಕೂಡಿಸುವಿಕೆ, ಬೆಸೆಯುವಿಕೆ ಒಂದು ಪುಸ್ತಕದಿಂದ ಸಾಧ್ಯವಿದೆ. ಅಂತಹ ಪುಸ್ತಕಗಳನ್ನು ನಾವು ಅನ್ಯ ದೇಶದವನು, ವೈರಿ ಎಂದು ಹೇಳಿ ನೋಡಿದರೆ ಹೇಗೆ?”

ಇದನ್ನೂ ಓದಿ: ಸಂಘಪರಿವಾರದ ವಿರೋಧದ ನಡುವೆಯು ‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ಬಿಡುಗಡೆ

“ಪಾಕಿಸ್ತಾನ ಮತ್ತು ನಮ್ಮ ದೇಶದ ಶಿಕ್ಷಣ, ಬಡತನ, ಕೃಷಿ ಹೀಗೆ ಯಾವುದೇ ವಿಚಾವನ್ನು ತೆಗೆದುಕೊಳ್ಳಿ, ಹೆಚ್ಚು ಕಡಿಮೆ ನಾವು ಅವರು ಸಮಾನ ಮತ್ತು ಸಮಾನ ದುಃಖಿಗಳು. ಅವರ ಮತ್ತು ನಮ್ಮ ಬಾಳಾಟ, ಗೋಳಾಟ, ಜೀವನ ವಿಧಾನ, ಸಂಸ್ಕೃತಿ ವಿಧಾನ, ನೆಲೆ ಎಲ್ಲವೂ ಒಂದೆ ಆಗಿದೆ. ಹೀಗಿರುವಾಗ ಅವರ ಬಗ್ಗೆ ಓದಬಾರದು ಎಂದು ಹೇಗೆ ಹೇಳಲು ಸಾಧ್ಯ? ನಮ್ಮ ರಾಜಕೀಯ ಮತ್ತು ಧಾರ್ಮಿಕ ಭಿನ್ನಾಭಿಪ್ರಾಯಗಳು ಇರಲಿ, ಭಿನ್ನಮತಗಳು ಯಾವುತ್ತಿಗೂ ಸ್ವಾಗತಾರ್ಹ. ಆದರೆ ಸಂಪೂರ್ಣ ವೈರಿ ಎಂದು ಅವರನ್ನು ಆಚೆಕಡೆ ಎಸೆದುಬಿಟ್ಟ ನಾವು ಸಾಧಿಸುವುದು ಏನಿದೆ?”

“ಬ್ರಿಟೀಷರ ವಿರುದ್ಧ ಹೋರಾಟ ಮಾಡುವಾಗ ನಾವು ಒಂದೇ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಂತೆ ಬದುಕಿದ್ದವರು. ಹೀಗಿರುವಾಗ ಒಬ್ಬ ಕ್ರಿಕೆಟ್ ತಾರೆ, ಮಾಜಿ ಪ್ರಧಾನ ಮಂತ್ರಿಯ ಪುಸ್ತಕ ನಮ್ಮಲ್ಲಿ ಯಾಕೆ ಬಿಡುಗಡೆಯಾಗಬೇಕು ಎನ್ನುವುದು ಸರಿಯಲ್ಲ”

“ಮುಂದಕ್ಕೂ ನಾವು ವೈರಿಗಳಾಗಿಯೆ ಬದುಕಬೇಕೆ? ಇನ್ನೆಷ್ಟು ಕಾಲ ವೈರಿಗಳಂತೆ ಬಾಳಿಕೊಂಡು ಹೋಗಬೇಕು? ಪುಲ್ವಾಮದಲ್ಲಿ ಭಾರತೀಯರನ್ನು ಕೊಂದಿದ್ದಕ್ಕೆ ಅವರು ಸಂಭ್ರಮಪಟ್ಟರು ಎಂಬುವುದು ಈಗ ವಿವಾದ. ಆದರೆ ಪಾಕಿಸ್ತಾನಿಗಳನ್ನು ಕೊಂದರೆ ನಮ್ಮ ದೇಶದಲ್ಲಿ ಸಂಭ್ರಮ ಪಡುವವರು ಇಲ್ಲವೆ?. ಅದಾಗ್ಯೂ ನಮ್ಮ ಧರ್ಮ, ನಮ್ಮ ಮೌಲ್ಯ, ಕೊಲ್ಲುವುದಲ್ಲ ಬದಲಾಗಿ ಅಹಿಂಸೆಯಾಗಿದೆ. ಮಾನವೀಯತೆ, ಪ್ರೀತಿಯಾಗಿದೆ ನಮ್ಮ ಮೌಲ್ಯ, ಧರ್ಮ” ಎಂದು ನಾಗರಾಜಯ್ಯ ಅವರು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ; ‘ಸಮನ್ವಯ ಮಾಡಿಕೊಳ್ಳದಿದ್ದರೆ ಕಾವ್ಯ ಹೇಗಾಗುತ್ತೆ?’ ಚೆನ್ನವೀರ ಕಣವಿ ಅವರ ಸಂದರ್ಶನ

“ಇಂಗ್ಲೀಷರು ನಮ್ಮನ್ನು ಗುಲಾಮಗಿರಿಗೆ ತಳ್ಳಿ ನಮ್ಮನ್ನು ಆಳ್ವಿಕೆ ನಡೆಸಿದವರಾಗಿದ್ದಾರೆ. ಇಂಗ್ಲಿಷ್‌‌ನವರ ಕೃತಿಗಳನ್ನು ಇಲ್ಲಿ ಯಾಕೆ ಓದುತ್ತೀರಿ ಎಂದು ಕೇಳಿದರೆ ಸರಿಯಾಗುತ್ತದೆಯೆ. ಆದರೆ ಅಲ್ಲಿನ ಸಾಹಿತ್ಯವೂ ನಮಗೆ ಬೇಕು, ಹಾಗೆಯೆ ಇಲ್ಲಿನ ಸಾಹಿತ್ಯವನ್ನೂ ನಾವು ಅಲ್ಲಿಗೆ ಕಳುಹಿಸಬೇಕು. ಕಾರ್ಲ್ ಮಾರ್ಕ್ಸ್‌ ಅನ್ನು ನಾವು ಓದುತ್ತೇವೆ ಎಂದರೆ, ಇಲ್ಲಿನ ಬಸವ, ಬುದ್ಧನನ್ನು ಅವರು ಓದುವುದು ಬೇಡವೆ? ಚೀನಾದ ಕ್ರಾಂತಿಕಾರಿ ಮಾವೋತ್ಸೆ ತುಂಗನನ್ನು ನಾವು ಓದುತ್ತೇವೆ ಎಂದರೆ, ಇಲ್ಲಿನ ಭಗತ್‌ ಸಿಂಗ್‌ನನ್ನು ಅವರು ತಿಳಿಯುವುದು ಬೇಡವೆ? ಟಾಲ್ಸ್‌ಟಾಯ್ ಅವರನ್ನು ನಾವು ಓದುತ್ತೇವೆ, ಕುವೆಂಪು ಅವರನ್ನು ಅವರು ಓದುವುದು ಬೇಡವೆ?”

“ಭಾರತ ಮತ್ತು ಪಾಕಿಸ್ತಾನ ಎರಡು ಕೂಡಾ ಘೋಷಿತ ಶತ್ರುಗಳು ಎಂಬಂತೆ ಬಿಂಬಿಸಲಾಗುತ್ತಿದೆ. ಅದರಲ್ಲೂ ಈ ಎರಡು ದೇಶಗಳನ್ನು ಧರ್ಮದ ನೆಲೆಯಲ್ಲಿ, ಮುಸ್ಲಿಮರು ಎ‌ನ್ನುವ ಕಾರಣಕ್ಕೆ ಘೋಷಿತ ಶತ್ರುಗಳು ಎಂಬಂತೆ ಬಿಂಬಿಸಲಾಗುತ್ತಿದೆ. ಹೀಗಾದರೆ ಉಳಿದ ಎಲ್ಲಾ ದೇಶಕ್ಕೂ ಈ ಧರ್ಮದ ನೆಲೆಯನ್ನೇ ಇವರು ಅನ್ವಯಿಸುತ್ತಾರೆ. ಹಿಂದೂ ಧರ್ಮವನ್ನು ಶ್ರೇಷ್ಠ ಎಂದು ನಂಬಿಸುತ್ತಾ, ಇಸ್ಲಾಂ ಧರ್ಮವನ್ನು ವೈರಿ ನೆಲೆಯಲ್ಲಿ ಕಂಡು ಬೇರೆ ರಾಷ್ಟ್ರಗಳನ್ನು ಕೂಡಾ ವೈರಿ ದೇಶಗಳಂತೆ ಕಾಣುತ್ತಾರೆ”

“ವರ್ತಮಾನ ಭಾರತದ ಅಂತರಂಗದ ಒಳಗೆ ಕೂಡಾ ಹಿಂದೂ-ಮುಸ್ಲಿಂ ವೈರತ್ವ ಭಾರಿ ಜೋರಾಗಿ ಹೊಗೆಯಾಡುತ್ತಿದೆ. ಹೀಗಾಗಿ ಇದಕ್ಕೆ ಲಗಾಮು ಹಾಕುವುದು ತುಂಬಾ ಅಗತ್ಯವಿದೆ. ಈ ಹೊತ್ತು ಭಾರತ ಅಂತಾರಾಷ್ಟ್ರೀಯ ಸಂಬಂಧಗಳನ್ನು ಬೇರೆ ಬೇರೆ ದೇಶಗಳೊಂದಿಗೆ ದಕ್ಕಿಸಿಕೊಳ್ಳಬೇಕಾಗಿದೆ. ದೇಶದ ರಾಜತಾಂತ್ರಿಕದ ಮುಖ್ಯಗುರಿ ಈ ರೀತಿ ಅಂತಾರಾಷ್ಟ್ರೀಯ ಸಂಬಂಧಗಳನ್ನು ಬೆಸೆದುಕೊಳ್ಳುವುದು. ಭಾರತ-ಪಾಕಿಸ್ತಾನ ರಾಷ್ಟ್ರಗಳು ಬೇರೆ ಯಾವುದೆ ದೇಶಗಳಿಗಿಂತ ಹೆಚ್ಚಾಗಿ ಸೋದರ ಸಂಬಂಧವನ್ನು ಬೆಳೆಸಿಕೊಳ್ಳಬೇಕಿದೆ. ಯಾಕೆಂದರೆ ಈ ಎರಡು ದೇಶಗಳು ವಿಭಜನೆ ಪೂರ್ವದಲ್ಲಿ ಬ್ರಿಟೀಷರ ವಿರುದ್ಧ ಐಕ್ಯತೆಯಿಂದ ಹೋರಾಡಿ ದೇಶಗಳನ್ನು ಸ್ವಾತಂತ್ಯ್ರಗೊಳಿಸಿವೆ. ಆ ವೇಳೆ ಇದ್ದಂತಹ ಐಕ್ಯತೆ, ಆಗಿನ ಸೋದರ ಸಂಬಂಧಗಳನ್ನು ನೆನಪಿಸಿಕೊಂಡರೆ ಮುಸ್ಲಿಮರು ಮಾತ್ರವಲ್ಲ, ಪಾಕಿಸ್ತಾನದವರು ಕೂಡಾ ನಮ್ಮ ಸಹೋದರರೆ ಎಂಬ ಬಂಧುತ್ವ ಬಂದುಬಿಡುತ್ತದೆ” ಎಂದು ನಾಗರಾಜಯ್ಯ ಅವರು ಹೇಳಿದರು.

ಇದನ್ನೂ ಓದಿ: ಎಷ್ಟು ಬೆಂಕಿ ಹಚ್ಚಬಲ್ಲಿರಿ ನೀವು?

ಮಾಜಿ ಕ್ರಿಕೆಟಿಗ, ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಬಗ್ಗೆಗಿನ, “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕವನ್ನು ಗುರುವಾರ ಬೆಂಗಳೂರಿನ ನಾಗರಬಾವಿಯಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕದ ಲೇಖಕರಾದ ಸುಧಾಕರ್‌ ಎಸ್‌.ಬಿ. ಅವರ ನಿವಾಸದಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌‌. ನಾಗಮೋಹನ ದಾಸ್‌ ಅವರು ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ, ಮಾಜಿ ಸಚಿವರಾದ ಡಾ.ಲೀಲಾದೇವಿ ಆರ್ ಪ್ರಸಾದ್, ಪುಸ್ತಕದ ಲೇಖಕ ಸುಧಾಕರ್ ಎಸ್ ಬಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಪ್ರಕಾಶ್ ಟಿ.ಎನ್. ಕಮ್ಮರಡಿ, ಪ್ರೊ. ರಾಜಪ್ಪ ದಳವಾಯಿ, ವಿ.ಎನ್. ವೀರನಾಗಪ್ಪ ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...