Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...