Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...