Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...