Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...