Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...