Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...