Homeಆರೋಗ್ಯಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

- Advertisement -
- Advertisement -

ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಸಂಶೋಧನೆ ಮತ್ತು ಅದಕ್ಕೆ ಸಿಕ್ಕಿರುವ ಫಲಿತಾಂಶ ಇಂತದ್ದೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ಜುಲೈ 2ರಂದು Nature Communications ವೈದ್ಯಕೀಯ ಜರ್ನಲ್‍ನಲ್ಲಿ ಪ್ರಕಟಿಸಿರುವಂತೆ ಏಡ್ಸ್ ತಂದೊಡ್ಡುವ ಎಚ್.ಐ.ವಿ ವೈರಸ್ ಅನ್ನು ಜೀವಿಯ ದೇಹದಿಂದ ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸಾ ವಿಧಾನವನ್ನು ಕಂಡುಹಿಡಿದಿರುವುದಾಗಿ’ ವಿಜ್ಞಾನಿಗಳು ಘೋಷಿಸಿದ್ದಾರೆ. ಟೆಂಪಲ್ ಯೂನಿವರ್ಸಿಟಿಯ ನ್ಯೂರೋವೈರಾಲಜಿ ಸೆಂಟರ್‍ನ ನಿರ್ದೇಶಕ ಡಾ. ಕಮೆಲ್ ಖಲೀಲಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ನ್ಯೂರೋ ಡೀಜನೆರೇಟಿವ್ ಡಿಸೀಸ್ ವಿಭಾಗದ ನಿರ್ದೇಶಕ ಹೊವಾರ್ಡ್ ಜೆಂಡಲ್‍ಮನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ.

ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಜೀನ್ ಎಡಿಟಿಂಗ್ ಥೆರಪಿ ಮೂಲಕ ವೈರಸ್‍ನ ಸಂತಾನಾಭಿವೃದ್ಧಿಯನ್ನು ನಿರ್ಬಂಧಿಸಿ ಅದು ಕ್ರಮೇಣ ದೇಹದ ಕೋಶಗಳು ಮತ್ತು ಸೋಂಕಿತ ಪ್ರಾಣಿಯ ಅಂಗಾಂಗಳಿಂದಲೇ ನಶಿಸಿಹೋಗುವಂತೆ ಈ ಚಿಕಿತ್ಸೆ ಮಾಡಲಿದೆ ಎನ್ನಲಾಗಿದೆ.

ಪ್ರಸ್ತುತ ಏಡ್ಸ್ ರೋಗಕ್ಕೆ `ಆ್ಯಂಟಿ-ರಿಟ್ರೋವೈರಲ್ ಥೆರಪಿ’ (ಎ.ಆರ್.ಟಿ) ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ, ಮಾನವನ ರಕ್ತದಲ್ಲಿ ಎಚ್.ಐ.ವಿ.ಯನ್ನು ಪತ್ತೆಹಚ್ಚಲಾಗದಷ್ಟು ಕನಿಷ್ಠ ಮಟ್ಟಕ್ಕೆ ಅದರ ಬೆಳವಣಿಗೆಯನ್ನು ಹತ್ತಿಕ್ಕಲಾಗುತ್ತಿದೆ. ಆದರೆ ಇದು ವೈರಸನ್ನು ಶಾಶ್ವತವಾಗಿ ದೇಹದಿಂದ ನಿರ್ಮೂಲನೆ ಮಾಡುವುದಿಲ್ಲ. ಅಂದರೆ, ಇದು ಶಾಶ್ವತ ಚಿಕಿತ್ಸೆಯಲ್ಲ, ರೋಗಿಯ ಜೀವಿತಾವಧಿಯನ್ನು ಸ್ವಲ್ಪವಷ್ಟೇ ಹಿಗ್ಗಿಸುವ ಪ್ರಯತ್ನ. ಎ.ಆರ್.ಟಿ ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ವೈರಸ್ ತಮ್ಮ ಆಕ್ರಮಣಕಾರಿ ಸಂತಾನಾಭಿವೃದ್ಧಿ ತಟಸ್ಥಗೊಳಿಸಿ ಅವಿತಿಟ್ಟುಕೊಂಡಿರುತ್ತದೆ. ಚಿಕಿತ್ಸೆ ನಿಲ್ಲುತ್ತಿದ್ದಂತೆಯೇ ವೈರಸ್ ಸಂಖ್ಯೆ ಉಲ್ಬಣಿಸಲು ಶುರುವಾಗುತ್ತಿತ್ತು.

ಎ.ಆರ್.ಟಿ ಚಿಕಿತ್ಸೆಯಿಂದಾಗಿ ರೋಗ ತಾತ್ಕಾಲಿಕವಾಗಿ ಉಪಶಮನಗೊಂಡ ತರುವಾಯ ಎಚ್.ಐ.ವಿ ವೈರಸ್ ಮತ್ತೆ ಉಲ್ಬಣಿಸಬೇಕೆಂದರೆ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಶೇಖರವಾಗಿರುತ್ತಿದ್ದ ವರ್ಣತಂತು ಘಟಕಗಳ ಜೊತೆಗೆ ಅದು ಸಂಯೋಜನೆಗೊಳ್ಳಬೇಕಿರುತ್ತದೆ. ಇಲ್ಲಿಯೇ, ವರ್ಷಗಟ್ಟಲೆ ಎ.ಆರ್.ಟಿ ಚಿಕಿತ್ಸೆಗೆ ಸ್ಪಂದಿಸದೆ ಎಚ್‍ಐವಿ ತನ್ನ ಸುಪ್ತ ಸ್ಥಿತಿಯಲ್ಲಿ ಅಡಗಿಕೊಳ್ಳಲು ಸಾಧ್ಯವಿರುವುದು.

ಡಾ. ಖಲೀಲಿಯವರ ತಂಡ CRISPR-Cas9 ತಂತ್ರಜ್ಞಾನದ ಮೂಲಕ ಇಂಥಾ ಸುಪ್ತ ಸ್ಥಿತಿಯಲ್ಲಿರುವ ಎಚ್.ಐ.ವಿ ವೈರಸ್‍ನ ವರ್ಣತಂತುಗಳನ್ನೇ ಮಾರ್ಪಾಡು ಮಾಡುವ ಪ್ರಯೋಗ ನಡೆಸಿದ್ದು ಅದೀಗ ಯಶಸ್ವಿಯಾಗಿದೆ. ಇಲಿಗಳನ್ನು ತಮ್ಮ ಪ್ರಯೋಗಕ್ಕೆ ಬಳಸಿಕೊಂಡಿರುವ ವಿಜ್ಞಾನಿಗಳು ಶೇ.33ರಷ್ಟು ಎಚ್.ಐ.ವಿ ಸೋಂಕಿತ ಇಲಿಗಳ ದೇಹದಿಂದ ಎಚ್.ಐ.ವಿ. ಡಿ.ಎನ್.ಎ ಅನ್ನೇ ಸಂಪೂರ್ಣವಾಗಿ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಚಿಕಿತ್ಸೆ ಏಕಾಂಗಿಯಾಗಿ ಏಡ್ಸ್ ವೈರಸ್ ಅನ್ನು ನಿರ್ಮೂಲನೆ ಮಾಡದು, ಎ.ಆರ್.ಟಿ ಚಿಕಿತ್ಸೆಯ ಜೊತೆಗೆ ಇದನ್ನು ಪ್ರಯೋಗಿಸಿದರೆ ಯಶಸ್ಸು ಕಾಣಬಹುದು ಎಂದಿದ್ದಾರೆ ವಿಜ್ಞಾನಿಗಳು.

ಇದಕ್ಕೂ ಮೊದಲು ಇದೇ ನೆಬ್ರಾಸ್ಕಾ ಮೆಡಿಕಲ್ ಸೆಂಟರ್‍ನ ಸಂಶೋಧಕರುಗಳಾದ ಡಾ.ಜೆಂಡಲ್‍ಮನ್ ಮತ್ತು ಡಾ.ಬೆನ್ಸನ್ ಎಡಾಗ್ವಾ ಅವರು `ಲಾಂಗ್ ಆಕ್ಟಿಂಗ್ ಸ್ಲೋ-ಎಫೆಕ್ಟಿವ್ ರಿಲೀಸ್ (LASER) ಎ.ಆರ್.ಟಿ’ ಚಿಕಿತ್ಸೆಯನ್ನು ಶೋಧಿಸಿದ್ದರು. ಇದು ಸಹಾ ಎ.ಆರ್.ಟಿ.ಯಂತೆ ಏಡ್ಸ್ ರೋಗವನ್ನು ಸಂಪೂರ್ಣ ಗುಣಪಡಿಸದಿದ್ದರು ಮೇಲಿಂದ ಮೇಲೆ ಎಆರ್‍ಟಿ ಚಿಕಿತ್ಸೆ ಪಡೆಯುವ ಹೊರೆಯನ್ನು ತಪ್ಪಿಸಿತ್ತು. ಇದೀಗ ಈ LASER ಎ.ಆರ್.ಟಿ ಮತ್ತು CRISPR-Cas9 ತಂತ್ರಜ್ಞಾನಗಳ ಜಂಟಿ ಬಳಕೆಯ ಮೂಲಕ ಎಚ್.ಐ.ವಿ ರೋಗಾಣುವನ್ನು ಸಂಪೂರ್ಣವಾಗಿ ದೇಹದಿಂದ ನಾಶ ಪಡಿಸಲು ಸಾಧ್ಯ ಎನ್ನುವುದನ್ನು ಹೊಸ ಸಂಶೋಧನೆ ತೋರಿಸಿಕೊಟ್ಟಿದೆ.

ಇಲಿಗಳಲ್ಲಿ ಯಶಸ್ವಿಯಾಗಿರುವ ಈ ಪ್ರಯೋಗ ಮನುಷ್ಯನ ದೇಹದಲ್ಲಿ ಯಾವ ಪರಿಣಾಮ ಬೀರುತ್ತದೆ, ವರ್ಣತಂತುಗಳನ್ನೇ ಮಾರ್ಪಾಟು ಮಾಡುವ ಚಿಕಿತ್ಸೆಯಿಂದ ಏನಾದರು ಗಂಭೀರ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ ಎಂಬುದನ್ನು ಪರೀಕ್ಷೆಗೊಳಪಡಿಸುವುದಷ್ಟೇ ಈಗ ಬಾಕಿ ಉಳಿದಿರುವುದು. ಒಟ್ಟಿನಲ್ಲಿ ಏಡ್ಸ್ ರೋಗದ ವಿರುದ್ಧದ ವೈದ್ಯಕೀಯ ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಶಾಶ್ವತ ಸಂಪೂರ್ಣ ಚಿಕಿತ್ಸೆ ಪತ್ತೆ ಮಾಡುವ ಗುರಿಗೆ ಸನಿಹವಾದಂತಾಗಿದೆ.

ಆಧಾರ: ಫಸ್ಟ್ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...