Homeಮುಖಪುಟವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

- Advertisement -
- Advertisement -

ಈ ವರ್ಷದ ಶರೀರಶಾಸ್ತ್ರ ಅಥವಾ ವೈದ್ಯವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪಾರಿತೋಷಕವನ್ನು ತಾಪಮಾನ ಮತ್ತು ಸ್ಪರ್ಶದ ಗ್ರಾಹಕಗಳ (ರಿಸೆಪ್ಟರ್‌ಗಳ) ಸಂಶೋಧನೆಗಾಗಿ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೋಷಿಯನ್ ಅವರುಗಳಿಗೆ ನೀಡಲಾಗಿದೆ.

ನಾವು ಶಾಖ, ತಂಪು ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತೇವೆ ಎಂಬುದು ಮನುಷ್ಯಜಗತ್ತಿನ ಅತಿದೊಡ್ಡ ವಿಸ್ಮಯಗಳಲ್ಲೊಂದು ಮತ್ತು ನಮ್ಮ ಉಳಿವಿಗೆ ಹಾಗೂ ನಮ್ಮ ಸುತ್ತಲಿನ ಪ್ರಪಂಚದೊಂದಿಗೆ ನಾವು ಹೇಗೆ ವ್ಯವಹರಿಸುತ್ತೇವೆಂಬುದಕ್ಕೆ ಅತಿಮುಖ್ಯ. ನಮ್ಮ ನಿತ್ಯದ ಬದುಕಿನಲ್ಲಿ ಈ ಅರಿವನ್ನು ನಾವು ಸಹಜವೆಂದು ಭಾವಿಸುತ್ತೇವೆ. ಆದರೆ, ತಾಪಮಾನ ಮತ್ತು ಒತ್ತಡವನ್ನು ಅರಿಯಲು ಸಾಧ್ಯವಾಗುವಂತೆ ನರಪ್ರಚೋದನೆಗಳು (ನರ್ವ್ ಇಂಪಲ್ಸಸ್) ಹೊರಡುವುದು ಹೇಗೆ? ಈ ಪ್ರಶ್ನೆಯನ್ನು ಈ ಬಾರಿಯ ನೊಬೆಲ್ ಪುರಸ್ಕೃತರು ಬಗೆಹರಿಸಿದ್ದಾರೆ.

ಕಣ್ಣುಗಳು ಹೇಗೆ ಬೆಳಕನ್ನು ಗುರುತಿಸುತ್ತವೆ, ಶಬ್ದತರಂಗಗಳು ನಮ್ಮ ಒಳಗಿವಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಹಾಗೂ ಹೇಗೆ ವಿವಿಧ ರಾಸಾಯನಿಕ ಸಂಯೋಜನೆಗಳು ನಮ್ಮ ಮೂಗು ಮತ್ತು ಬಾಯಿಯೊಳಗಿನ ರಿಸೆಪ್ಟರ್‌ಗಳೊಂದಿಗೆ ಪ್ರವರ್ತಿಸಿ ವಾಸನೆ ಹಾಗೂ ರುಚಿಯನ್ನು ಹುಟ್ಟಿಸುತ್ತವೆಂಬ ಪ್ರಶ್ನೆಗಳು ಶತಮಾನಗಳ ಕಾಲ ಮನುಷ್ಯರ ಮನಸ್ಸನ್ನು ದಿಗ್ಭ್ರಮೆಗೊಳಿಸಿವೆ.

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವ, ಗಾಳಿಯ ಬೀಸು ಮತ್ತು ಸೂರ್ಯನ ತಾಪದ ಸಂವೇದನೆಗಳನ್ನು ನಮ್ಮ ದೇಹ ಹೇಗೆ ಗ್ರಹಿಸುತ್ತದೆ; ಈ ಬದಲಾಗುವ ಪ್ರಚೋದಕಗಳು ಹಾಗೂ ತಾಪಮಾನ, ಸ್ಪರ್ಶ ಮತ್ತು ಚಲನೆಯ ಪರಿಣಾಮಗಳಿಗೆ ದೇಹ ಹೊಂದಿಕೊಳ್ಳುತ್ತದೆ ಎಂಬ ಪ್ರಶ್ನೆಗಳು ಕೂಡ.

ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಪೋಷಿಯನ್ ಅವರುಗಳ ಸಂಶೋಧನೆಗಿಂತ ಮೊದಲು, ನರವ್ಯವಸ್ಥೆ ಹೇಗೆ ಸುತ್ತಲಿನ ಪರಿಸರದ ಮತ್ತು ರಾಸಾಯನಿಕ ಪ್ರಚೋದಕಗಳನ್ನು ಗ್ರಹಿಸುತ್ತದೆ ಮತ್ತು ಅರ್ಥೈಸುತ್ತದೆ ಎಂಬುದರ ಕುರಿತ ನಮ್ಮ ತಿಳಿವಳಿಕೆಯಲ್ಲಿ ಒಂದು ಬಗೆಹರಿಯದ ಪ್ರಶ್ನೆ ಇತ್ತು; ತಾಪಮಾನ ಮತ್ತು ಯಾಂತ್ರಿಕ ಪ್ರಚೋದಕಗಳು ವಿದ್ಯುತ್ ಸಂದೇಶಗಳಾಗಿ ನಮ್ಮ ನರವ್ಯವಸ್ಥೆಯಲ್ಲಿ ಹೇಗೆ ಪರಿವರ್ತಿತವಾಗುತ್ತವೆ ಎಂಬುದು ತಿಳಿಯದ ಪ್ರಶ್ನೆಯಾಗಿ ಉಳಿದಿತ್ತು.

1990ರಲ್ಲಿ ಡೇವಿಡ್ ಜ್ಯೂಲಿಯಸ್ ಅವರು, ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕ್ಯಾಲಿಫೊರ್ನಿಯಾ ವಿಶ್ವವಿದ್ಯಾಲಯದಲ್ಲಿ, ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕ ಸಂಯುಕ್ತವು ಉರಿಯುವ ಅನುಭವವನ್ನು ಯಾಕೆ ಉಂಟುಮಾಡುತ್ತದೆಂಬುದರ ಮೇಲೆ ಕೆಲಸ ಮಾಡುತ್ತಿದ್ದರು. ಕ್ಯಾಪ್ಸೈಸಿನ್ ನರಕೋಶಗಳನ್ನು ಸಕ್ರಿಯಗೊಳಿಸುತ್ತದೆಂಬುದು ಗೊತ್ತಿದ್ದ ಸಂಗತಿಯಾಗಿತ್ತು; ಆದರೆ ಆ ಕಾರ್ಯವಿಧಾನವೇನೆಂಬುದು ಒಗಟಾಗಿತ್ತು.

ಜ್ಯೂಲಿಯಸ್ ಮತ್ತು ಅವರ ಜೊತೆಗಾರರು, ನೋವು, ಉಷ್ಣಾಂಶ ಮತ್ತು ಸ್ಪರ್ಶಕ್ಕೆ ಪ್ರತಿಕ್ರಿಯಿಸುವ ನರಕೋಶಗಳನ್ನು ಪ್ರತಿನಿಧಿಸುವ ಡಿಎನ್‌ಎ ತುಣುಕುಗಳ ಒಂದು ಸಂಗ್ರಹವನ್ನು ಸಿದ್ಧಪಡಿಸಿದರು. ಕಠಿಣವಾದ ಸಂಶೋಧನೆಯ ನಂತರ, ಜೀವಕೋಶಗಳನ್ನು ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲಗೊಳಿಸುವ ಒಂದು ವಂಶವಾಹಿಯನ್ನು (ಜೀನ್) ಗುರುತಿಸುವುದು ಸಾಧ್ಯವಾಯಿತು. ಹೀಗೆ, ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲವಾದ ವಂಶವಾಹಿ ದೊರಕಿತು! ಈ ವಂಶವಾಹಿಯ ಪ್ರೊಟೀನ್‌ನ್ನು ಟಿಆರ್‌ಪಿವಿ1 ಎಂದು ಕರೆಯಲಾಯಿತು. ಈ ರಿಸೆಪ್ಟರ್ ಉಷ್ಣಾಂಶವನ್ನು ಗ್ರಹಿಸುವ ರಿಸೆಪ್ಟರ್ ಆಗಿತ್ತು ಮತ್ತು ನೋವುಂಟುಮಾಡಬಲ್ಲವೆಂದು ಹೇಳಬಹುದಾದ ಉಷ್ಣಾಂಶಗಳಲ್ಲಿ ಇದು ಸಕ್ರಿಯಗೊಳ್ಳುತ್ತಿತ್ತು.

ಈ ಸಂಶೋಧನೆಯು ಅತಿ ಮಹತ್ವದ್ದಾಗಿತ್ತು. ಇದು, ತಣ್ಣಗಿರುವುದನ್ನು ಗ್ರಹಿಸುವ ಇನ್ನೂ ಅನೇಕ ತಾಪಮಾನದ ರಿಸೆಪ್ಟರ್‌ಗಳ ಶೋಧಕ್ಕೆ ದಾರಿಮಾಡಿಕೊಟ್ಟಿತು. ಅನೇಕ ಪ್ರಯೋಗಾಲಯಗಳು, ಜೀವವೈಜ್ಞಾನಿಕವಾಗಿ ಮಾರ್ಪಡಿಸಲ್ಪಟ್ಟು ಈ ಹೊಸದಾಗಿ ಕಂಡುಹಿಡಿಯಲಾದ ವಂಶವಾಹಿಗಳನ್ನು ಹೊಂದಿಲ್ಲದ ಇಲಿಗಳ ಮೇಲೆ, ಸಂಶೋಧಿಸಲ್ಪಟ್ಟಿದ್ದ ಗ್ರಾಹಕಗಳು ತಾಪಮಾನ ಸಂವೇದನೆಯ ಮೇಲೆ ಬೀರುವ ಪರಿಣಾಮವೇನು ಎಂಬುದರ ಕುರಿತ ಪ್ರಯೋಗಗಳನ್ನು ಆರಂಭಿಸಿದವು. ಡೇವಿಡ್ ಜ್ಯೂಲಿಯಸ್ ಅವರು ಟಿಆರ್‌ಪಿವಿ1ನ್ನು ಕಂಡುಹಿಡಿದ ಸಂಶೋಧನೆಯು, ತಾಪಮಾನದ ವ್ಯತ್ಯಾಸಗಳು ಹೇಗೆ ನರ ವ್ಯವಸ್ಥೆಯಲ್ಲಿ ವಿದ್ಯುತ್ ಸಂದೇಶಗಳನ್ನು ಹುಟ್ಟುಹಾಕಬಲ್ಲವು ಎಂಬ ಕುರಿತು ಪಥಪ್ರವರ್ತಕವಾದುದಾಗಿತ್ತು.

ಅಮೆರಿಕದ ಕ್ಯಾಲಿಫೋರ್ನಿಯಾದ ಲಹೋಯಾದಲ್ಲಿರುವ ಸ್ಕ್ರಿಪ್ಸ್ ರಿಸರ್ಚ್ ಸಂಸ್ಥೆಯಲ್ಲಿದ್ದ ಆರ್ಡೆಮ್ ಪಟಪೋಷಿಯನ್ ಅವರು, ಯಾಂತ್ರಿಕ ಪ್ರಚೋದಕಗಳಿಂದ ಸಕ್ರಿಯಗೊಳ್ಳುವ ಅಸ್ಪಷ್ಟ ರಿಸೆಪ್ಟರ್‌ಗಳನ್ನು ಕಂಡುಹಿಡಿಯಲು ಬಯಸಿದರು.

ಒಂದು ಮೈಕ್ರೋಪಿಪೆಟ್ (ದ್ರವಪದಾರ್ಥಗಳನ್ನು ಅಳೆಯುವುದಕ್ಕೆ ಬಳಸುವ ಒಂದು ಅತಿಸಣ್ಣ ಕೊಳವೆ)ನಿಂದ ತಟ್ಟಿದಾಗ ಅಳೆಯಲು ಸಾಧ್ಯವಿರುವಷ್ಟು ಪ್ರಮಾಣದ ವಿದ್ಯುತ್ ಸಂದೇಶವನ್ನು ಹೊರಡಿಸುವ ಜೀವಕೋಶಗಳ ಸಾಲೊಂದನ್ನು ಪಟಪೋಷಿಯನ್ ಮತ್ತು ಅವರ ಜೊತೆಗಾರರು ಮೊದಲು ಕಂಡುಹಿಡಿದರು. ಕಷ್ಟಕರವಾದ ಹುಡುಕಾಟದ ನಂತರ, ಪಟಪೋಷಿಯನ್ ಮತ್ತು ಅವರ ಜೊತೆಗಾರರಿಗೆ ಮೈಕ್ರೋಪಿಪೆಟ್‌ನ ಒತ್ತುವಿಕೆಯ ಪರಿಣಾಮವನ್ನು ಮೌನವಾಗಿಸುವಂತೆ ಜೀವಕೋಶಗಳನ್ನು ಅಸಂವೇದನಾಶೀಲಗೊಳಿಸುವ ವಂಶವಾಹಿಯನ್ನು ಶೋಧಿಸುವುದು ಸಾಧ್ಯವಾಯಿತು. ಈ ವಂಶವಾಹಿಗಳು ಈ ಹಿಂದೆ ನಮಗೆ ತಿಳಿಯದಿದ್ದ ಯಾಂತ್ರಿಕ ಸಂವೇದನಾಶೀಲ ಅಯಾನ್ ಚಾನಲ್‌ಅನ್ನು ಕೋಡ್ ಮಾಡುವಂಥವಾಗಿದ್ದವು.

ಇವುಗಳನ್ನು ’ಒತ್ತಡ’ ಎಂಬುದರ ಗ್ರೀಕ್ ಪದದ ಮೇಲೆ ಪೈಜ಼ೋ1 ಹಾಗೂ ಪೈಜ಼ೋ2 ಎಂದು ಹೆಸರಿಸಲಾಯಿತು. ಇನ್ನೂ ಮುಂದುವರೆದ ಅಧ್ಯಯನಗಳು, ಪೈಜ಼ೋ1 ಮತ್ತು ಪೈಜ಼ೋ2ಗಳು ಜೀವಕೋಶದ ಕೋಶಪದರದ ಮೇಲೆ ಉಂಟಾಗುವ ಒತ್ತಡದಿಂದ ನೇರವಾಗಿ ಸಕ್ರಿಯಗೊಳ್ಳುವ ಅಯಾನ್ ಚಾನಲ್‌ಗಳೆಂಬುದು ಖಚಿತವಾಯಿತು.

ಟಿಆರ್‌ಪಿವಿ1, ಟಿಆರ್‌ಪಿಎಂ8, ಪೈಜ಼ೋ ಚಾನಲ್‌ಗಳೆಲ್ಲವನ್ನು ಕಂಡುಹಿಡಿದ ವಿನೂತನ ಮತ್ತು ಅದ್ವಿತೀಯ ಸಂಶೋಧನೆಗಳ ಮೂಲಕ ಈ ಬಾರಿಯ ನೊಬೆಲ್ ಪಾರಿತೋಷಕದ ವಿಜೇತರು, ಶಾಖ, ತಂಪು ಮತ್ತು ಯಾಂತ್ರಿಕ ಶಕ್ತಿಗಳು ಉಂಟುಮಾಡುವ ನರ ಸಂವೇದನೆಗಳು ಹೇಗೆ ಸುತ್ತಲಿನ ಪರಿಸರವನ್ನು ಗ್ರಹಿಸಲು ಮತ್ತು ಅದಕ್ಕೆ ಹೊಂದಿಕೊಳ್ಳಲು ನಮಗೆ ನೆರವಾಗುತ್ತವೆಂಬುದನ್ನು ನಾವು ಅರಿಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕನ್ನಡಕ್ಕೆ: ಮಲ್ಲಿಗೆ

ಡಾ. ಸ್ವಾತಿ ಶುಕ್ಲಾ

ಡಾ.ಸ್ವಾತಿ ಶುಕ್ಲಾ
ಜರ್ಮನಿಯಲ್ಲಿ ‘ರೋಗ ನಿರೋಧಕ’ ಶಾಸ್ತ್ರದಲ್ಲಿ ಪಿಎಚ್‌ಡಿಯನ್ನು ಮುಗಿಸಿದ್ದಾರೆ. ಸ್ವೀಡನ್‌ನಲ್ಲಿ ಪೋಸ್ಟ್ ಡಾಕ್ಟೋರಲ್ ಸಂಶೋಧನೆಯನ್ನೂ ಮುಗಿಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಗೌರಿಲಂಕೇಶ್‌ನ್ಯೂಸ್.ಕಾಮ್‌ನ ಸಹ ಸಂಪಾದಕರಾಗಿದ್ದಾರೆ.


ಇದನ್ನೂ ಓದಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...