Homeಮುಖಪುಟವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

- Advertisement -
- Advertisement -

ಈ ವರ್ಷದ ಶರೀರಶಾಸ್ತ್ರ ಅಥವಾ ವೈದ್ಯವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪಾರಿತೋಷಕವನ್ನು ತಾಪಮಾನ ಮತ್ತು ಸ್ಪರ್ಶದ ಗ್ರಾಹಕಗಳ (ರಿಸೆಪ್ಟರ್‌ಗಳ) ಸಂಶೋಧನೆಗಾಗಿ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೋಷಿಯನ್ ಅವರುಗಳಿಗೆ ನೀಡಲಾಗಿದೆ.

ನಾವು ಶಾಖ, ತಂಪು ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತೇವೆ ಎಂಬುದು ಮನುಷ್ಯಜಗತ್ತಿನ ಅತಿದೊಡ್ಡ ವಿಸ್ಮಯಗಳಲ್ಲೊಂದು ಮತ್ತು ನಮ್ಮ ಉಳಿವಿಗೆ ಹಾಗೂ ನಮ್ಮ ಸುತ್ತಲಿನ ಪ್ರಪಂಚದೊಂದಿಗೆ ನಾವು ಹೇಗೆ ವ್ಯವಹರಿಸುತ್ತೇವೆಂಬುದಕ್ಕೆ ಅತಿಮುಖ್ಯ. ನಮ್ಮ ನಿತ್ಯದ ಬದುಕಿನಲ್ಲಿ ಈ ಅರಿವನ್ನು ನಾವು ಸಹಜವೆಂದು ಭಾವಿಸುತ್ತೇವೆ. ಆದರೆ, ತಾಪಮಾನ ಮತ್ತು ಒತ್ತಡವನ್ನು ಅರಿಯಲು ಸಾಧ್ಯವಾಗುವಂತೆ ನರಪ್ರಚೋದನೆಗಳು (ನರ್ವ್ ಇಂಪಲ್ಸಸ್) ಹೊರಡುವುದು ಹೇಗೆ? ಈ ಪ್ರಶ್ನೆಯನ್ನು ಈ ಬಾರಿಯ ನೊಬೆಲ್ ಪುರಸ್ಕೃತರು ಬಗೆಹರಿಸಿದ್ದಾರೆ.

ಕಣ್ಣುಗಳು ಹೇಗೆ ಬೆಳಕನ್ನು ಗುರುತಿಸುತ್ತವೆ, ಶಬ್ದತರಂಗಗಳು ನಮ್ಮ ಒಳಗಿವಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಹಾಗೂ ಹೇಗೆ ವಿವಿಧ ರಾಸಾಯನಿಕ ಸಂಯೋಜನೆಗಳು ನಮ್ಮ ಮೂಗು ಮತ್ತು ಬಾಯಿಯೊಳಗಿನ ರಿಸೆಪ್ಟರ್‌ಗಳೊಂದಿಗೆ ಪ್ರವರ್ತಿಸಿ ವಾಸನೆ ಹಾಗೂ ರುಚಿಯನ್ನು ಹುಟ್ಟಿಸುತ್ತವೆಂಬ ಪ್ರಶ್ನೆಗಳು ಶತಮಾನಗಳ ಕಾಲ ಮನುಷ್ಯರ ಮನಸ್ಸನ್ನು ದಿಗ್ಭ್ರಮೆಗೊಳಿಸಿವೆ.

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವ, ಗಾಳಿಯ ಬೀಸು ಮತ್ತು ಸೂರ್ಯನ ತಾಪದ ಸಂವೇದನೆಗಳನ್ನು ನಮ್ಮ ದೇಹ ಹೇಗೆ ಗ್ರಹಿಸುತ್ತದೆ; ಈ ಬದಲಾಗುವ ಪ್ರಚೋದಕಗಳು ಹಾಗೂ ತಾಪಮಾನ, ಸ್ಪರ್ಶ ಮತ್ತು ಚಲನೆಯ ಪರಿಣಾಮಗಳಿಗೆ ದೇಹ ಹೊಂದಿಕೊಳ್ಳುತ್ತದೆ ಎಂಬ ಪ್ರಶ್ನೆಗಳು ಕೂಡ.

ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಪೋಷಿಯನ್ ಅವರುಗಳ ಸಂಶೋಧನೆಗಿಂತ ಮೊದಲು, ನರವ್ಯವಸ್ಥೆ ಹೇಗೆ ಸುತ್ತಲಿನ ಪರಿಸರದ ಮತ್ತು ರಾಸಾಯನಿಕ ಪ್ರಚೋದಕಗಳನ್ನು ಗ್ರಹಿಸುತ್ತದೆ ಮತ್ತು ಅರ್ಥೈಸುತ್ತದೆ ಎಂಬುದರ ಕುರಿತ ನಮ್ಮ ತಿಳಿವಳಿಕೆಯಲ್ಲಿ ಒಂದು ಬಗೆಹರಿಯದ ಪ್ರಶ್ನೆ ಇತ್ತು; ತಾಪಮಾನ ಮತ್ತು ಯಾಂತ್ರಿಕ ಪ್ರಚೋದಕಗಳು ವಿದ್ಯುತ್ ಸಂದೇಶಗಳಾಗಿ ನಮ್ಮ ನರವ್ಯವಸ್ಥೆಯಲ್ಲಿ ಹೇಗೆ ಪರಿವರ್ತಿತವಾಗುತ್ತವೆ ಎಂಬುದು ತಿಳಿಯದ ಪ್ರಶ್ನೆಯಾಗಿ ಉಳಿದಿತ್ತು.

1990ರಲ್ಲಿ ಡೇವಿಡ್ ಜ್ಯೂಲಿಯಸ್ ಅವರು, ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕ್ಯಾಲಿಫೊರ್ನಿಯಾ ವಿಶ್ವವಿದ್ಯಾಲಯದಲ್ಲಿ, ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕ ಸಂಯುಕ್ತವು ಉರಿಯುವ ಅನುಭವವನ್ನು ಯಾಕೆ ಉಂಟುಮಾಡುತ್ತದೆಂಬುದರ ಮೇಲೆ ಕೆಲಸ ಮಾಡುತ್ತಿದ್ದರು. ಕ್ಯಾಪ್ಸೈಸಿನ್ ನರಕೋಶಗಳನ್ನು ಸಕ್ರಿಯಗೊಳಿಸುತ್ತದೆಂಬುದು ಗೊತ್ತಿದ್ದ ಸಂಗತಿಯಾಗಿತ್ತು; ಆದರೆ ಆ ಕಾರ್ಯವಿಧಾನವೇನೆಂಬುದು ಒಗಟಾಗಿತ್ತು.

ಜ್ಯೂಲಿಯಸ್ ಮತ್ತು ಅವರ ಜೊತೆಗಾರರು, ನೋವು, ಉಷ್ಣಾಂಶ ಮತ್ತು ಸ್ಪರ್ಶಕ್ಕೆ ಪ್ರತಿಕ್ರಿಯಿಸುವ ನರಕೋಶಗಳನ್ನು ಪ್ರತಿನಿಧಿಸುವ ಡಿಎನ್‌ಎ ತುಣುಕುಗಳ ಒಂದು ಸಂಗ್ರಹವನ್ನು ಸಿದ್ಧಪಡಿಸಿದರು. ಕಠಿಣವಾದ ಸಂಶೋಧನೆಯ ನಂತರ, ಜೀವಕೋಶಗಳನ್ನು ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲಗೊಳಿಸುವ ಒಂದು ವಂಶವಾಹಿಯನ್ನು (ಜೀನ್) ಗುರುತಿಸುವುದು ಸಾಧ್ಯವಾಯಿತು. ಹೀಗೆ, ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲವಾದ ವಂಶವಾಹಿ ದೊರಕಿತು! ಈ ವಂಶವಾಹಿಯ ಪ್ರೊಟೀನ್‌ನ್ನು ಟಿಆರ್‌ಪಿವಿ1 ಎಂದು ಕರೆಯಲಾಯಿತು. ಈ ರಿಸೆಪ್ಟರ್ ಉಷ್ಣಾಂಶವನ್ನು ಗ್ರಹಿಸುವ ರಿಸೆಪ್ಟರ್ ಆಗಿತ್ತು ಮತ್ತು ನೋವುಂಟುಮಾಡಬಲ್ಲವೆಂದು ಹೇಳಬಹುದಾದ ಉಷ್ಣಾಂಶಗಳಲ್ಲಿ ಇದು ಸಕ್ರಿಯಗೊಳ್ಳುತ್ತಿತ್ತು.

ಈ ಸಂಶೋಧನೆಯು ಅತಿ ಮಹತ್ವದ್ದಾಗಿತ್ತು. ಇದು, ತಣ್ಣಗಿರುವುದನ್ನು ಗ್ರಹಿಸುವ ಇನ್ನೂ ಅನೇಕ ತಾಪಮಾನದ ರಿಸೆಪ್ಟರ್‌ಗಳ ಶೋಧಕ್ಕೆ ದಾರಿಮಾಡಿಕೊಟ್ಟಿತು. ಅನೇಕ ಪ್ರಯೋಗಾಲಯಗಳು, ಜೀವವೈಜ್ಞಾನಿಕವಾಗಿ ಮಾರ್ಪಡಿಸಲ್ಪಟ್ಟು ಈ ಹೊಸದಾಗಿ ಕಂಡುಹಿಡಿಯಲಾದ ವಂಶವಾಹಿಗಳನ್ನು ಹೊಂದಿಲ್ಲದ ಇಲಿಗಳ ಮೇಲೆ, ಸಂಶೋಧಿಸಲ್ಪಟ್ಟಿದ್ದ ಗ್ರಾಹಕಗಳು ತಾಪಮಾನ ಸಂವೇದನೆಯ ಮೇಲೆ ಬೀರುವ ಪರಿಣಾಮವೇನು ಎಂಬುದರ ಕುರಿತ ಪ್ರಯೋಗಗಳನ್ನು ಆರಂಭಿಸಿದವು. ಡೇವಿಡ್ ಜ್ಯೂಲಿಯಸ್ ಅವರು ಟಿಆರ್‌ಪಿವಿ1ನ್ನು ಕಂಡುಹಿಡಿದ ಸಂಶೋಧನೆಯು, ತಾಪಮಾನದ ವ್ಯತ್ಯಾಸಗಳು ಹೇಗೆ ನರ ವ್ಯವಸ್ಥೆಯಲ್ಲಿ ವಿದ್ಯುತ್ ಸಂದೇಶಗಳನ್ನು ಹುಟ್ಟುಹಾಕಬಲ್ಲವು ಎಂಬ ಕುರಿತು ಪಥಪ್ರವರ್ತಕವಾದುದಾಗಿತ್ತು.

ಅಮೆರಿಕದ ಕ್ಯಾಲಿಫೋರ್ನಿಯಾದ ಲಹೋಯಾದಲ್ಲಿರುವ ಸ್ಕ್ರಿಪ್ಸ್ ರಿಸರ್ಚ್ ಸಂಸ್ಥೆಯಲ್ಲಿದ್ದ ಆರ್ಡೆಮ್ ಪಟಪೋಷಿಯನ್ ಅವರು, ಯಾಂತ್ರಿಕ ಪ್ರಚೋದಕಗಳಿಂದ ಸಕ್ರಿಯಗೊಳ್ಳುವ ಅಸ್ಪಷ್ಟ ರಿಸೆಪ್ಟರ್‌ಗಳನ್ನು ಕಂಡುಹಿಡಿಯಲು ಬಯಸಿದರು.

ಒಂದು ಮೈಕ್ರೋಪಿಪೆಟ್ (ದ್ರವಪದಾರ್ಥಗಳನ್ನು ಅಳೆಯುವುದಕ್ಕೆ ಬಳಸುವ ಒಂದು ಅತಿಸಣ್ಣ ಕೊಳವೆ)ನಿಂದ ತಟ್ಟಿದಾಗ ಅಳೆಯಲು ಸಾಧ್ಯವಿರುವಷ್ಟು ಪ್ರಮಾಣದ ವಿದ್ಯುತ್ ಸಂದೇಶವನ್ನು ಹೊರಡಿಸುವ ಜೀವಕೋಶಗಳ ಸಾಲೊಂದನ್ನು ಪಟಪೋಷಿಯನ್ ಮತ್ತು ಅವರ ಜೊತೆಗಾರರು ಮೊದಲು ಕಂಡುಹಿಡಿದರು. ಕಷ್ಟಕರವಾದ ಹುಡುಕಾಟದ ನಂತರ, ಪಟಪೋಷಿಯನ್ ಮತ್ತು ಅವರ ಜೊತೆಗಾರರಿಗೆ ಮೈಕ್ರೋಪಿಪೆಟ್‌ನ ಒತ್ತುವಿಕೆಯ ಪರಿಣಾಮವನ್ನು ಮೌನವಾಗಿಸುವಂತೆ ಜೀವಕೋಶಗಳನ್ನು ಅಸಂವೇದನಾಶೀಲಗೊಳಿಸುವ ವಂಶವಾಹಿಯನ್ನು ಶೋಧಿಸುವುದು ಸಾಧ್ಯವಾಯಿತು. ಈ ವಂಶವಾಹಿಗಳು ಈ ಹಿಂದೆ ನಮಗೆ ತಿಳಿಯದಿದ್ದ ಯಾಂತ್ರಿಕ ಸಂವೇದನಾಶೀಲ ಅಯಾನ್ ಚಾನಲ್‌ಅನ್ನು ಕೋಡ್ ಮಾಡುವಂಥವಾಗಿದ್ದವು.

ಇವುಗಳನ್ನು ’ಒತ್ತಡ’ ಎಂಬುದರ ಗ್ರೀಕ್ ಪದದ ಮೇಲೆ ಪೈಜ಼ೋ1 ಹಾಗೂ ಪೈಜ಼ೋ2 ಎಂದು ಹೆಸರಿಸಲಾಯಿತು. ಇನ್ನೂ ಮುಂದುವರೆದ ಅಧ್ಯಯನಗಳು, ಪೈಜ಼ೋ1 ಮತ್ತು ಪೈಜ಼ೋ2ಗಳು ಜೀವಕೋಶದ ಕೋಶಪದರದ ಮೇಲೆ ಉಂಟಾಗುವ ಒತ್ತಡದಿಂದ ನೇರವಾಗಿ ಸಕ್ರಿಯಗೊಳ್ಳುವ ಅಯಾನ್ ಚಾನಲ್‌ಗಳೆಂಬುದು ಖಚಿತವಾಯಿತು.

ಟಿಆರ್‌ಪಿವಿ1, ಟಿಆರ್‌ಪಿಎಂ8, ಪೈಜ಼ೋ ಚಾನಲ್‌ಗಳೆಲ್ಲವನ್ನು ಕಂಡುಹಿಡಿದ ವಿನೂತನ ಮತ್ತು ಅದ್ವಿತೀಯ ಸಂಶೋಧನೆಗಳ ಮೂಲಕ ಈ ಬಾರಿಯ ನೊಬೆಲ್ ಪಾರಿತೋಷಕದ ವಿಜೇತರು, ಶಾಖ, ತಂಪು ಮತ್ತು ಯಾಂತ್ರಿಕ ಶಕ್ತಿಗಳು ಉಂಟುಮಾಡುವ ನರ ಸಂವೇದನೆಗಳು ಹೇಗೆ ಸುತ್ತಲಿನ ಪರಿಸರವನ್ನು ಗ್ರಹಿಸಲು ಮತ್ತು ಅದಕ್ಕೆ ಹೊಂದಿಕೊಳ್ಳಲು ನಮಗೆ ನೆರವಾಗುತ್ತವೆಂಬುದನ್ನು ನಾವು ಅರಿಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕನ್ನಡಕ್ಕೆ: ಮಲ್ಲಿಗೆ

ಡಾ. ಸ್ವಾತಿ ಶುಕ್ಲಾ

ಡಾ.ಸ್ವಾತಿ ಶುಕ್ಲಾ
ಜರ್ಮನಿಯಲ್ಲಿ ‘ರೋಗ ನಿರೋಧಕ’ ಶಾಸ್ತ್ರದಲ್ಲಿ ಪಿಎಚ್‌ಡಿಯನ್ನು ಮುಗಿಸಿದ್ದಾರೆ. ಸ್ವೀಡನ್‌ನಲ್ಲಿ ಪೋಸ್ಟ್ ಡಾಕ್ಟೋರಲ್ ಸಂಶೋಧನೆಯನ್ನೂ ಮುಗಿಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಗೌರಿಲಂಕೇಶ್‌ನ್ಯೂಸ್.ಕಾಮ್‌ನ ಸಹ ಸಂಪಾದಕರಾಗಿದ್ದಾರೆ.


ಇದನ್ನೂ ಓದಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...