Homeಮುಖಪುಟವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

- Advertisement -
- Advertisement -

ಈ ವರ್ಷದ ಶರೀರಶಾಸ್ತ್ರ ಅಥವಾ ವೈದ್ಯವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪಾರಿತೋಷಕವನ್ನು ತಾಪಮಾನ ಮತ್ತು ಸ್ಪರ್ಶದ ಗ್ರಾಹಕಗಳ (ರಿಸೆಪ್ಟರ್‌ಗಳ) ಸಂಶೋಧನೆಗಾಗಿ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೋಷಿಯನ್ ಅವರುಗಳಿಗೆ ನೀಡಲಾಗಿದೆ.

ನಾವು ಶಾಖ, ತಂಪು ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತೇವೆ ಎಂಬುದು ಮನುಷ್ಯಜಗತ್ತಿನ ಅತಿದೊಡ್ಡ ವಿಸ್ಮಯಗಳಲ್ಲೊಂದು ಮತ್ತು ನಮ್ಮ ಉಳಿವಿಗೆ ಹಾಗೂ ನಮ್ಮ ಸುತ್ತಲಿನ ಪ್ರಪಂಚದೊಂದಿಗೆ ನಾವು ಹೇಗೆ ವ್ಯವಹರಿಸುತ್ತೇವೆಂಬುದಕ್ಕೆ ಅತಿಮುಖ್ಯ. ನಮ್ಮ ನಿತ್ಯದ ಬದುಕಿನಲ್ಲಿ ಈ ಅರಿವನ್ನು ನಾವು ಸಹಜವೆಂದು ಭಾವಿಸುತ್ತೇವೆ. ಆದರೆ, ತಾಪಮಾನ ಮತ್ತು ಒತ್ತಡವನ್ನು ಅರಿಯಲು ಸಾಧ್ಯವಾಗುವಂತೆ ನರಪ್ರಚೋದನೆಗಳು (ನರ್ವ್ ಇಂಪಲ್ಸಸ್) ಹೊರಡುವುದು ಹೇಗೆ? ಈ ಪ್ರಶ್ನೆಯನ್ನು ಈ ಬಾರಿಯ ನೊಬೆಲ್ ಪುರಸ್ಕೃತರು ಬಗೆಹರಿಸಿದ್ದಾರೆ.

ಕಣ್ಣುಗಳು ಹೇಗೆ ಬೆಳಕನ್ನು ಗುರುತಿಸುತ್ತವೆ, ಶಬ್ದತರಂಗಗಳು ನಮ್ಮ ಒಳಗಿವಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಹಾಗೂ ಹೇಗೆ ವಿವಿಧ ರಾಸಾಯನಿಕ ಸಂಯೋಜನೆಗಳು ನಮ್ಮ ಮೂಗು ಮತ್ತು ಬಾಯಿಯೊಳಗಿನ ರಿಸೆಪ್ಟರ್‌ಗಳೊಂದಿಗೆ ಪ್ರವರ್ತಿಸಿ ವಾಸನೆ ಹಾಗೂ ರುಚಿಯನ್ನು ಹುಟ್ಟಿಸುತ್ತವೆಂಬ ಪ್ರಶ್ನೆಗಳು ಶತಮಾನಗಳ ಕಾಲ ಮನುಷ್ಯರ ಮನಸ್ಸನ್ನು ದಿಗ್ಭ್ರಮೆಗೊಳಿಸಿವೆ.

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವ, ಗಾಳಿಯ ಬೀಸು ಮತ್ತು ಸೂರ್ಯನ ತಾಪದ ಸಂವೇದನೆಗಳನ್ನು ನಮ್ಮ ದೇಹ ಹೇಗೆ ಗ್ರಹಿಸುತ್ತದೆ; ಈ ಬದಲಾಗುವ ಪ್ರಚೋದಕಗಳು ಹಾಗೂ ತಾಪಮಾನ, ಸ್ಪರ್ಶ ಮತ್ತು ಚಲನೆಯ ಪರಿಣಾಮಗಳಿಗೆ ದೇಹ ಹೊಂದಿಕೊಳ್ಳುತ್ತದೆ ಎಂಬ ಪ್ರಶ್ನೆಗಳು ಕೂಡ.

ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಪೋಷಿಯನ್ ಅವರುಗಳ ಸಂಶೋಧನೆಗಿಂತ ಮೊದಲು, ನರವ್ಯವಸ್ಥೆ ಹೇಗೆ ಸುತ್ತಲಿನ ಪರಿಸರದ ಮತ್ತು ರಾಸಾಯನಿಕ ಪ್ರಚೋದಕಗಳನ್ನು ಗ್ರಹಿಸುತ್ತದೆ ಮತ್ತು ಅರ್ಥೈಸುತ್ತದೆ ಎಂಬುದರ ಕುರಿತ ನಮ್ಮ ತಿಳಿವಳಿಕೆಯಲ್ಲಿ ಒಂದು ಬಗೆಹರಿಯದ ಪ್ರಶ್ನೆ ಇತ್ತು; ತಾಪಮಾನ ಮತ್ತು ಯಾಂತ್ರಿಕ ಪ್ರಚೋದಕಗಳು ವಿದ್ಯುತ್ ಸಂದೇಶಗಳಾಗಿ ನಮ್ಮ ನರವ್ಯವಸ್ಥೆಯಲ್ಲಿ ಹೇಗೆ ಪರಿವರ್ತಿತವಾಗುತ್ತವೆ ಎಂಬುದು ತಿಳಿಯದ ಪ್ರಶ್ನೆಯಾಗಿ ಉಳಿದಿತ್ತು.

1990ರಲ್ಲಿ ಡೇವಿಡ್ ಜ್ಯೂಲಿಯಸ್ ಅವರು, ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕ್ಯಾಲಿಫೊರ್ನಿಯಾ ವಿಶ್ವವಿದ್ಯಾಲಯದಲ್ಲಿ, ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕ ಸಂಯುಕ್ತವು ಉರಿಯುವ ಅನುಭವವನ್ನು ಯಾಕೆ ಉಂಟುಮಾಡುತ್ತದೆಂಬುದರ ಮೇಲೆ ಕೆಲಸ ಮಾಡುತ್ತಿದ್ದರು. ಕ್ಯಾಪ್ಸೈಸಿನ್ ನರಕೋಶಗಳನ್ನು ಸಕ್ರಿಯಗೊಳಿಸುತ್ತದೆಂಬುದು ಗೊತ್ತಿದ್ದ ಸಂಗತಿಯಾಗಿತ್ತು; ಆದರೆ ಆ ಕಾರ್ಯವಿಧಾನವೇನೆಂಬುದು ಒಗಟಾಗಿತ್ತು.

ಜ್ಯೂಲಿಯಸ್ ಮತ್ತು ಅವರ ಜೊತೆಗಾರರು, ನೋವು, ಉಷ್ಣಾಂಶ ಮತ್ತು ಸ್ಪರ್ಶಕ್ಕೆ ಪ್ರತಿಕ್ರಿಯಿಸುವ ನರಕೋಶಗಳನ್ನು ಪ್ರತಿನಿಧಿಸುವ ಡಿಎನ್‌ಎ ತುಣುಕುಗಳ ಒಂದು ಸಂಗ್ರಹವನ್ನು ಸಿದ್ಧಪಡಿಸಿದರು. ಕಠಿಣವಾದ ಸಂಶೋಧನೆಯ ನಂತರ, ಜೀವಕೋಶಗಳನ್ನು ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲಗೊಳಿಸುವ ಒಂದು ವಂಶವಾಹಿಯನ್ನು (ಜೀನ್) ಗುರುತಿಸುವುದು ಸಾಧ್ಯವಾಯಿತು. ಹೀಗೆ, ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲವಾದ ವಂಶವಾಹಿ ದೊರಕಿತು! ಈ ವಂಶವಾಹಿಯ ಪ್ರೊಟೀನ್‌ನ್ನು ಟಿಆರ್‌ಪಿವಿ1 ಎಂದು ಕರೆಯಲಾಯಿತು. ಈ ರಿಸೆಪ್ಟರ್ ಉಷ್ಣಾಂಶವನ್ನು ಗ್ರಹಿಸುವ ರಿಸೆಪ್ಟರ್ ಆಗಿತ್ತು ಮತ್ತು ನೋವುಂಟುಮಾಡಬಲ್ಲವೆಂದು ಹೇಳಬಹುದಾದ ಉಷ್ಣಾಂಶಗಳಲ್ಲಿ ಇದು ಸಕ್ರಿಯಗೊಳ್ಳುತ್ತಿತ್ತು.

ಈ ಸಂಶೋಧನೆಯು ಅತಿ ಮಹತ್ವದ್ದಾಗಿತ್ತು. ಇದು, ತಣ್ಣಗಿರುವುದನ್ನು ಗ್ರಹಿಸುವ ಇನ್ನೂ ಅನೇಕ ತಾಪಮಾನದ ರಿಸೆಪ್ಟರ್‌ಗಳ ಶೋಧಕ್ಕೆ ದಾರಿಮಾಡಿಕೊಟ್ಟಿತು. ಅನೇಕ ಪ್ರಯೋಗಾಲಯಗಳು, ಜೀವವೈಜ್ಞಾನಿಕವಾಗಿ ಮಾರ್ಪಡಿಸಲ್ಪಟ್ಟು ಈ ಹೊಸದಾಗಿ ಕಂಡುಹಿಡಿಯಲಾದ ವಂಶವಾಹಿಗಳನ್ನು ಹೊಂದಿಲ್ಲದ ಇಲಿಗಳ ಮೇಲೆ, ಸಂಶೋಧಿಸಲ್ಪಟ್ಟಿದ್ದ ಗ್ರಾಹಕಗಳು ತಾಪಮಾನ ಸಂವೇದನೆಯ ಮೇಲೆ ಬೀರುವ ಪರಿಣಾಮವೇನು ಎಂಬುದರ ಕುರಿತ ಪ್ರಯೋಗಗಳನ್ನು ಆರಂಭಿಸಿದವು. ಡೇವಿಡ್ ಜ್ಯೂಲಿಯಸ್ ಅವರು ಟಿಆರ್‌ಪಿವಿ1ನ್ನು ಕಂಡುಹಿಡಿದ ಸಂಶೋಧನೆಯು, ತಾಪಮಾನದ ವ್ಯತ್ಯಾಸಗಳು ಹೇಗೆ ನರ ವ್ಯವಸ್ಥೆಯಲ್ಲಿ ವಿದ್ಯುತ್ ಸಂದೇಶಗಳನ್ನು ಹುಟ್ಟುಹಾಕಬಲ್ಲವು ಎಂಬ ಕುರಿತು ಪಥಪ್ರವರ್ತಕವಾದುದಾಗಿತ್ತು.

ಅಮೆರಿಕದ ಕ್ಯಾಲಿಫೋರ್ನಿಯಾದ ಲಹೋಯಾದಲ್ಲಿರುವ ಸ್ಕ್ರಿಪ್ಸ್ ರಿಸರ್ಚ್ ಸಂಸ್ಥೆಯಲ್ಲಿದ್ದ ಆರ್ಡೆಮ್ ಪಟಪೋಷಿಯನ್ ಅವರು, ಯಾಂತ್ರಿಕ ಪ್ರಚೋದಕಗಳಿಂದ ಸಕ್ರಿಯಗೊಳ್ಳುವ ಅಸ್ಪಷ್ಟ ರಿಸೆಪ್ಟರ್‌ಗಳನ್ನು ಕಂಡುಹಿಡಿಯಲು ಬಯಸಿದರು.

ಒಂದು ಮೈಕ್ರೋಪಿಪೆಟ್ (ದ್ರವಪದಾರ್ಥಗಳನ್ನು ಅಳೆಯುವುದಕ್ಕೆ ಬಳಸುವ ಒಂದು ಅತಿಸಣ್ಣ ಕೊಳವೆ)ನಿಂದ ತಟ್ಟಿದಾಗ ಅಳೆಯಲು ಸಾಧ್ಯವಿರುವಷ್ಟು ಪ್ರಮಾಣದ ವಿದ್ಯುತ್ ಸಂದೇಶವನ್ನು ಹೊರಡಿಸುವ ಜೀವಕೋಶಗಳ ಸಾಲೊಂದನ್ನು ಪಟಪೋಷಿಯನ್ ಮತ್ತು ಅವರ ಜೊತೆಗಾರರು ಮೊದಲು ಕಂಡುಹಿಡಿದರು. ಕಷ್ಟಕರವಾದ ಹುಡುಕಾಟದ ನಂತರ, ಪಟಪೋಷಿಯನ್ ಮತ್ತು ಅವರ ಜೊತೆಗಾರರಿಗೆ ಮೈಕ್ರೋಪಿಪೆಟ್‌ನ ಒತ್ತುವಿಕೆಯ ಪರಿಣಾಮವನ್ನು ಮೌನವಾಗಿಸುವಂತೆ ಜೀವಕೋಶಗಳನ್ನು ಅಸಂವೇದನಾಶೀಲಗೊಳಿಸುವ ವಂಶವಾಹಿಯನ್ನು ಶೋಧಿಸುವುದು ಸಾಧ್ಯವಾಯಿತು. ಈ ವಂಶವಾಹಿಗಳು ಈ ಹಿಂದೆ ನಮಗೆ ತಿಳಿಯದಿದ್ದ ಯಾಂತ್ರಿಕ ಸಂವೇದನಾಶೀಲ ಅಯಾನ್ ಚಾನಲ್‌ಅನ್ನು ಕೋಡ್ ಮಾಡುವಂಥವಾಗಿದ್ದವು.

ಇವುಗಳನ್ನು ’ಒತ್ತಡ’ ಎಂಬುದರ ಗ್ರೀಕ್ ಪದದ ಮೇಲೆ ಪೈಜ಼ೋ1 ಹಾಗೂ ಪೈಜ಼ೋ2 ಎಂದು ಹೆಸರಿಸಲಾಯಿತು. ಇನ್ನೂ ಮುಂದುವರೆದ ಅಧ್ಯಯನಗಳು, ಪೈಜ಼ೋ1 ಮತ್ತು ಪೈಜ಼ೋ2ಗಳು ಜೀವಕೋಶದ ಕೋಶಪದರದ ಮೇಲೆ ಉಂಟಾಗುವ ಒತ್ತಡದಿಂದ ನೇರವಾಗಿ ಸಕ್ರಿಯಗೊಳ್ಳುವ ಅಯಾನ್ ಚಾನಲ್‌ಗಳೆಂಬುದು ಖಚಿತವಾಯಿತು.

ಟಿಆರ್‌ಪಿವಿ1, ಟಿಆರ್‌ಪಿಎಂ8, ಪೈಜ಼ೋ ಚಾನಲ್‌ಗಳೆಲ್ಲವನ್ನು ಕಂಡುಹಿಡಿದ ವಿನೂತನ ಮತ್ತು ಅದ್ವಿತೀಯ ಸಂಶೋಧನೆಗಳ ಮೂಲಕ ಈ ಬಾರಿಯ ನೊಬೆಲ್ ಪಾರಿತೋಷಕದ ವಿಜೇತರು, ಶಾಖ, ತಂಪು ಮತ್ತು ಯಾಂತ್ರಿಕ ಶಕ್ತಿಗಳು ಉಂಟುಮಾಡುವ ನರ ಸಂವೇದನೆಗಳು ಹೇಗೆ ಸುತ್ತಲಿನ ಪರಿಸರವನ್ನು ಗ್ರಹಿಸಲು ಮತ್ತು ಅದಕ್ಕೆ ಹೊಂದಿಕೊಳ್ಳಲು ನಮಗೆ ನೆರವಾಗುತ್ತವೆಂಬುದನ್ನು ನಾವು ಅರಿಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕನ್ನಡಕ್ಕೆ: ಮಲ್ಲಿಗೆ

ಡಾ. ಸ್ವಾತಿ ಶುಕ್ಲಾ

ಡಾ.ಸ್ವಾತಿ ಶುಕ್ಲಾ
ಜರ್ಮನಿಯಲ್ಲಿ ‘ರೋಗ ನಿರೋಧಕ’ ಶಾಸ್ತ್ರದಲ್ಲಿ ಪಿಎಚ್‌ಡಿಯನ್ನು ಮುಗಿಸಿದ್ದಾರೆ. ಸ್ವೀಡನ್‌ನಲ್ಲಿ ಪೋಸ್ಟ್ ಡಾಕ್ಟೋರಲ್ ಸಂಶೋಧನೆಯನ್ನೂ ಮುಗಿಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಗೌರಿಲಂಕೇಶ್‌ನ್ಯೂಸ್.ಕಾಮ್‌ನ ಸಹ ಸಂಪಾದಕರಾಗಿದ್ದಾರೆ.


ಇದನ್ನೂ ಓದಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...