Homeಮುಖಪುಟವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

- Advertisement -
- Advertisement -

ಈ ವರ್ಷದ ಶರೀರಶಾಸ್ತ್ರ ಅಥವಾ ವೈದ್ಯವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪಾರಿತೋಷಕವನ್ನು ತಾಪಮಾನ ಮತ್ತು ಸ್ಪರ್ಶದ ಗ್ರಾಹಕಗಳ (ರಿಸೆಪ್ಟರ್‌ಗಳ) ಸಂಶೋಧನೆಗಾಗಿ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೋಷಿಯನ್ ಅವರುಗಳಿಗೆ ನೀಡಲಾಗಿದೆ.

ನಾವು ಶಾಖ, ತಂಪು ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತೇವೆ ಎಂಬುದು ಮನುಷ್ಯಜಗತ್ತಿನ ಅತಿದೊಡ್ಡ ವಿಸ್ಮಯಗಳಲ್ಲೊಂದು ಮತ್ತು ನಮ್ಮ ಉಳಿವಿಗೆ ಹಾಗೂ ನಮ್ಮ ಸುತ್ತಲಿನ ಪ್ರಪಂಚದೊಂದಿಗೆ ನಾವು ಹೇಗೆ ವ್ಯವಹರಿಸುತ್ತೇವೆಂಬುದಕ್ಕೆ ಅತಿಮುಖ್ಯ. ನಮ್ಮ ನಿತ್ಯದ ಬದುಕಿನಲ್ಲಿ ಈ ಅರಿವನ್ನು ನಾವು ಸಹಜವೆಂದು ಭಾವಿಸುತ್ತೇವೆ. ಆದರೆ, ತಾಪಮಾನ ಮತ್ತು ಒತ್ತಡವನ್ನು ಅರಿಯಲು ಸಾಧ್ಯವಾಗುವಂತೆ ನರಪ್ರಚೋದನೆಗಳು (ನರ್ವ್ ಇಂಪಲ್ಸಸ್) ಹೊರಡುವುದು ಹೇಗೆ? ಈ ಪ್ರಶ್ನೆಯನ್ನು ಈ ಬಾರಿಯ ನೊಬೆಲ್ ಪುರಸ್ಕೃತರು ಬಗೆಹರಿಸಿದ್ದಾರೆ.

ಕಣ್ಣುಗಳು ಹೇಗೆ ಬೆಳಕನ್ನು ಗುರುತಿಸುತ್ತವೆ, ಶಬ್ದತರಂಗಗಳು ನಮ್ಮ ಒಳಗಿವಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಹಾಗೂ ಹೇಗೆ ವಿವಿಧ ರಾಸಾಯನಿಕ ಸಂಯೋಜನೆಗಳು ನಮ್ಮ ಮೂಗು ಮತ್ತು ಬಾಯಿಯೊಳಗಿನ ರಿಸೆಪ್ಟರ್‌ಗಳೊಂದಿಗೆ ಪ್ರವರ್ತಿಸಿ ವಾಸನೆ ಹಾಗೂ ರುಚಿಯನ್ನು ಹುಟ್ಟಿಸುತ್ತವೆಂಬ ಪ್ರಶ್ನೆಗಳು ಶತಮಾನಗಳ ಕಾಲ ಮನುಷ್ಯರ ಮನಸ್ಸನ್ನು ದಿಗ್ಭ್ರಮೆಗೊಳಿಸಿವೆ.

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವ, ಗಾಳಿಯ ಬೀಸು ಮತ್ತು ಸೂರ್ಯನ ತಾಪದ ಸಂವೇದನೆಗಳನ್ನು ನಮ್ಮ ದೇಹ ಹೇಗೆ ಗ್ರಹಿಸುತ್ತದೆ; ಈ ಬದಲಾಗುವ ಪ್ರಚೋದಕಗಳು ಹಾಗೂ ತಾಪಮಾನ, ಸ್ಪರ್ಶ ಮತ್ತು ಚಲನೆಯ ಪರಿಣಾಮಗಳಿಗೆ ದೇಹ ಹೊಂದಿಕೊಳ್ಳುತ್ತದೆ ಎಂಬ ಪ್ರಶ್ನೆಗಳು ಕೂಡ.

ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಪೋಷಿಯನ್ ಅವರುಗಳ ಸಂಶೋಧನೆಗಿಂತ ಮೊದಲು, ನರವ್ಯವಸ್ಥೆ ಹೇಗೆ ಸುತ್ತಲಿನ ಪರಿಸರದ ಮತ್ತು ರಾಸಾಯನಿಕ ಪ್ರಚೋದಕಗಳನ್ನು ಗ್ರಹಿಸುತ್ತದೆ ಮತ್ತು ಅರ್ಥೈಸುತ್ತದೆ ಎಂಬುದರ ಕುರಿತ ನಮ್ಮ ತಿಳಿವಳಿಕೆಯಲ್ಲಿ ಒಂದು ಬಗೆಹರಿಯದ ಪ್ರಶ್ನೆ ಇತ್ತು; ತಾಪಮಾನ ಮತ್ತು ಯಾಂತ್ರಿಕ ಪ್ರಚೋದಕಗಳು ವಿದ್ಯುತ್ ಸಂದೇಶಗಳಾಗಿ ನಮ್ಮ ನರವ್ಯವಸ್ಥೆಯಲ್ಲಿ ಹೇಗೆ ಪರಿವರ್ತಿತವಾಗುತ್ತವೆ ಎಂಬುದು ತಿಳಿಯದ ಪ್ರಶ್ನೆಯಾಗಿ ಉಳಿದಿತ್ತು.

1990ರಲ್ಲಿ ಡೇವಿಡ್ ಜ್ಯೂಲಿಯಸ್ ಅವರು, ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕ್ಯಾಲಿಫೊರ್ನಿಯಾ ವಿಶ್ವವಿದ್ಯಾಲಯದಲ್ಲಿ, ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕ ಸಂಯುಕ್ತವು ಉರಿಯುವ ಅನುಭವವನ್ನು ಯಾಕೆ ಉಂಟುಮಾಡುತ್ತದೆಂಬುದರ ಮೇಲೆ ಕೆಲಸ ಮಾಡುತ್ತಿದ್ದರು. ಕ್ಯಾಪ್ಸೈಸಿನ್ ನರಕೋಶಗಳನ್ನು ಸಕ್ರಿಯಗೊಳಿಸುತ್ತದೆಂಬುದು ಗೊತ್ತಿದ್ದ ಸಂಗತಿಯಾಗಿತ್ತು; ಆದರೆ ಆ ಕಾರ್ಯವಿಧಾನವೇನೆಂಬುದು ಒಗಟಾಗಿತ್ತು.

ಜ್ಯೂಲಿಯಸ್ ಮತ್ತು ಅವರ ಜೊತೆಗಾರರು, ನೋವು, ಉಷ್ಣಾಂಶ ಮತ್ತು ಸ್ಪರ್ಶಕ್ಕೆ ಪ್ರತಿಕ್ರಿಯಿಸುವ ನರಕೋಶಗಳನ್ನು ಪ್ರತಿನಿಧಿಸುವ ಡಿಎನ್‌ಎ ತುಣುಕುಗಳ ಒಂದು ಸಂಗ್ರಹವನ್ನು ಸಿದ್ಧಪಡಿಸಿದರು. ಕಠಿಣವಾದ ಸಂಶೋಧನೆಯ ನಂತರ, ಜೀವಕೋಶಗಳನ್ನು ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲಗೊಳಿಸುವ ಒಂದು ವಂಶವಾಹಿಯನ್ನು (ಜೀನ್) ಗುರುತಿಸುವುದು ಸಾಧ್ಯವಾಯಿತು. ಹೀಗೆ, ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲವಾದ ವಂಶವಾಹಿ ದೊರಕಿತು! ಈ ವಂಶವಾಹಿಯ ಪ್ರೊಟೀನ್‌ನ್ನು ಟಿಆರ್‌ಪಿವಿ1 ಎಂದು ಕರೆಯಲಾಯಿತು. ಈ ರಿಸೆಪ್ಟರ್ ಉಷ್ಣಾಂಶವನ್ನು ಗ್ರಹಿಸುವ ರಿಸೆಪ್ಟರ್ ಆಗಿತ್ತು ಮತ್ತು ನೋವುಂಟುಮಾಡಬಲ್ಲವೆಂದು ಹೇಳಬಹುದಾದ ಉಷ್ಣಾಂಶಗಳಲ್ಲಿ ಇದು ಸಕ್ರಿಯಗೊಳ್ಳುತ್ತಿತ್ತು.

ಈ ಸಂಶೋಧನೆಯು ಅತಿ ಮಹತ್ವದ್ದಾಗಿತ್ತು. ಇದು, ತಣ್ಣಗಿರುವುದನ್ನು ಗ್ರಹಿಸುವ ಇನ್ನೂ ಅನೇಕ ತಾಪಮಾನದ ರಿಸೆಪ್ಟರ್‌ಗಳ ಶೋಧಕ್ಕೆ ದಾರಿಮಾಡಿಕೊಟ್ಟಿತು. ಅನೇಕ ಪ್ರಯೋಗಾಲಯಗಳು, ಜೀವವೈಜ್ಞಾನಿಕವಾಗಿ ಮಾರ್ಪಡಿಸಲ್ಪಟ್ಟು ಈ ಹೊಸದಾಗಿ ಕಂಡುಹಿಡಿಯಲಾದ ವಂಶವಾಹಿಗಳನ್ನು ಹೊಂದಿಲ್ಲದ ಇಲಿಗಳ ಮೇಲೆ, ಸಂಶೋಧಿಸಲ್ಪಟ್ಟಿದ್ದ ಗ್ರಾಹಕಗಳು ತಾಪಮಾನ ಸಂವೇದನೆಯ ಮೇಲೆ ಬೀರುವ ಪರಿಣಾಮವೇನು ಎಂಬುದರ ಕುರಿತ ಪ್ರಯೋಗಗಳನ್ನು ಆರಂಭಿಸಿದವು. ಡೇವಿಡ್ ಜ್ಯೂಲಿಯಸ್ ಅವರು ಟಿಆರ್‌ಪಿವಿ1ನ್ನು ಕಂಡುಹಿಡಿದ ಸಂಶೋಧನೆಯು, ತಾಪಮಾನದ ವ್ಯತ್ಯಾಸಗಳು ಹೇಗೆ ನರ ವ್ಯವಸ್ಥೆಯಲ್ಲಿ ವಿದ್ಯುತ್ ಸಂದೇಶಗಳನ್ನು ಹುಟ್ಟುಹಾಕಬಲ್ಲವು ಎಂಬ ಕುರಿತು ಪಥಪ್ರವರ್ತಕವಾದುದಾಗಿತ್ತು.

ಅಮೆರಿಕದ ಕ್ಯಾಲಿಫೋರ್ನಿಯಾದ ಲಹೋಯಾದಲ್ಲಿರುವ ಸ್ಕ್ರಿಪ್ಸ್ ರಿಸರ್ಚ್ ಸಂಸ್ಥೆಯಲ್ಲಿದ್ದ ಆರ್ಡೆಮ್ ಪಟಪೋಷಿಯನ್ ಅವರು, ಯಾಂತ್ರಿಕ ಪ್ರಚೋದಕಗಳಿಂದ ಸಕ್ರಿಯಗೊಳ್ಳುವ ಅಸ್ಪಷ್ಟ ರಿಸೆಪ್ಟರ್‌ಗಳನ್ನು ಕಂಡುಹಿಡಿಯಲು ಬಯಸಿದರು.

ಒಂದು ಮೈಕ್ರೋಪಿಪೆಟ್ (ದ್ರವಪದಾರ್ಥಗಳನ್ನು ಅಳೆಯುವುದಕ್ಕೆ ಬಳಸುವ ಒಂದು ಅತಿಸಣ್ಣ ಕೊಳವೆ)ನಿಂದ ತಟ್ಟಿದಾಗ ಅಳೆಯಲು ಸಾಧ್ಯವಿರುವಷ್ಟು ಪ್ರಮಾಣದ ವಿದ್ಯುತ್ ಸಂದೇಶವನ್ನು ಹೊರಡಿಸುವ ಜೀವಕೋಶಗಳ ಸಾಲೊಂದನ್ನು ಪಟಪೋಷಿಯನ್ ಮತ್ತು ಅವರ ಜೊತೆಗಾರರು ಮೊದಲು ಕಂಡುಹಿಡಿದರು. ಕಷ್ಟಕರವಾದ ಹುಡುಕಾಟದ ನಂತರ, ಪಟಪೋಷಿಯನ್ ಮತ್ತು ಅವರ ಜೊತೆಗಾರರಿಗೆ ಮೈಕ್ರೋಪಿಪೆಟ್‌ನ ಒತ್ತುವಿಕೆಯ ಪರಿಣಾಮವನ್ನು ಮೌನವಾಗಿಸುವಂತೆ ಜೀವಕೋಶಗಳನ್ನು ಅಸಂವೇದನಾಶೀಲಗೊಳಿಸುವ ವಂಶವಾಹಿಯನ್ನು ಶೋಧಿಸುವುದು ಸಾಧ್ಯವಾಯಿತು. ಈ ವಂಶವಾಹಿಗಳು ಈ ಹಿಂದೆ ನಮಗೆ ತಿಳಿಯದಿದ್ದ ಯಾಂತ್ರಿಕ ಸಂವೇದನಾಶೀಲ ಅಯಾನ್ ಚಾನಲ್‌ಅನ್ನು ಕೋಡ್ ಮಾಡುವಂಥವಾಗಿದ್ದವು.

ಇವುಗಳನ್ನು ’ಒತ್ತಡ’ ಎಂಬುದರ ಗ್ರೀಕ್ ಪದದ ಮೇಲೆ ಪೈಜ಼ೋ1 ಹಾಗೂ ಪೈಜ಼ೋ2 ಎಂದು ಹೆಸರಿಸಲಾಯಿತು. ಇನ್ನೂ ಮುಂದುವರೆದ ಅಧ್ಯಯನಗಳು, ಪೈಜ಼ೋ1 ಮತ್ತು ಪೈಜ಼ೋ2ಗಳು ಜೀವಕೋಶದ ಕೋಶಪದರದ ಮೇಲೆ ಉಂಟಾಗುವ ಒತ್ತಡದಿಂದ ನೇರವಾಗಿ ಸಕ್ರಿಯಗೊಳ್ಳುವ ಅಯಾನ್ ಚಾನಲ್‌ಗಳೆಂಬುದು ಖಚಿತವಾಯಿತು.

ಟಿಆರ್‌ಪಿವಿ1, ಟಿಆರ್‌ಪಿಎಂ8, ಪೈಜ಼ೋ ಚಾನಲ್‌ಗಳೆಲ್ಲವನ್ನು ಕಂಡುಹಿಡಿದ ವಿನೂತನ ಮತ್ತು ಅದ್ವಿತೀಯ ಸಂಶೋಧನೆಗಳ ಮೂಲಕ ಈ ಬಾರಿಯ ನೊಬೆಲ್ ಪಾರಿತೋಷಕದ ವಿಜೇತರು, ಶಾಖ, ತಂಪು ಮತ್ತು ಯಾಂತ್ರಿಕ ಶಕ್ತಿಗಳು ಉಂಟುಮಾಡುವ ನರ ಸಂವೇದನೆಗಳು ಹೇಗೆ ಸುತ್ತಲಿನ ಪರಿಸರವನ್ನು ಗ್ರಹಿಸಲು ಮತ್ತು ಅದಕ್ಕೆ ಹೊಂದಿಕೊಳ್ಳಲು ನಮಗೆ ನೆರವಾಗುತ್ತವೆಂಬುದನ್ನು ನಾವು ಅರಿಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕನ್ನಡಕ್ಕೆ: ಮಲ್ಲಿಗೆ

ಡಾ. ಸ್ವಾತಿ ಶುಕ್ಲಾ

ಡಾ.ಸ್ವಾತಿ ಶುಕ್ಲಾ
ಜರ್ಮನಿಯಲ್ಲಿ ‘ರೋಗ ನಿರೋಧಕ’ ಶಾಸ್ತ್ರದಲ್ಲಿ ಪಿಎಚ್‌ಡಿಯನ್ನು ಮುಗಿಸಿದ್ದಾರೆ. ಸ್ವೀಡನ್‌ನಲ್ಲಿ ಪೋಸ್ಟ್ ಡಾಕ್ಟೋರಲ್ ಸಂಶೋಧನೆಯನ್ನೂ ಮುಗಿಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಗೌರಿಲಂಕೇಶ್‌ನ್ಯೂಸ್.ಕಾಮ್‌ನ ಸಹ ಸಂಪಾದಕರಾಗಿದ್ದಾರೆ.


ಇದನ್ನೂ ಓದಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...