Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...