Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...