Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...