Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...