Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...