Homeಮುಖಪುಟಸಂಸತ್​​ನಲ್ಲಿ ಹಮಾಸ್ ಕುರಿತ ಪ್ರಶ್ನೋತ್ತರಕ್ಕೆ ನಾನು ಸಹಿ ಹಾಕಿಲ್ಲ: ಸಚಿವೆ ಮೀನಾಕ್ಷಿ ಲೇಖಿ ಸ್ಪಷ್ಟನೆ

ಸಂಸತ್​​ನಲ್ಲಿ ಹಮಾಸ್ ಕುರಿತ ಪ್ರಶ್ನೋತ್ತರಕ್ಕೆ ನಾನು ಸಹಿ ಹಾಕಿಲ್ಲ: ಸಚಿವೆ ಮೀನಾಕ್ಷಿ ಲೇಖಿ ಸ್ಪಷ್ಟನೆ

- Advertisement -
- Advertisement -

‘ಹಮಾಸ್‌’ ಗುಂಪನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕುರಿತ ಪ್ರಶ್ನೆ ಹೊಂದಿರುವ ಯಾವುದೇ ಪೇಪರ್‌ಗೆ ನಾನು ಸಹಿ ಮಾಡಿಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಇಂದು (ಡಿ.9) ಸ್ಪಷ್ಟಪಡಿಸಿದ್ದಾರೆ.

ಹಮಾಸ್ ಅನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕುರಿತು ಸಂಸತ್ತಿನಲ್ಲಿ ಕೇಳಲಾಗಿದೆ ಎನ್ನಲಾದ ಪ್ರಶ್ನೋತ್ತರದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸಚಿವೆ ಮೀನಾಕ್ಷಿ ಲೇಖಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಎಕ್ಸ್‌ ಪೋಸ್ಟ್‌ ಒಂದನ್ನು ರಿ ಟ್ವೀಟ್ ಮಾಡಿರುವ ಮೀನಾಕ್ಷಿ ಲೇಖಿ, “ನಿಮಗೆ ತಪ್ಪು ಮಾಹಿತಿ ನೀಡಲಾಗಿದೆ. ನಾನು ಈ ರೀತಿಯ ಪ್ರಶ್ನೆ ಮತ್ತು ಉತ್ತರ ಹೊಂದಿರುವ ಯಾವುದೇ ಪೇಪರ್‌ಗೆ ಸಹಿ ಹಾಕಿಲ್ಲ” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಸೂಕ್ತ ತನಿಖೆ ತಪ್ಪಿತಸ್ಥರು ಯಾರೆಂದು ತಿಳಿಸಲಿದೆ” ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಇಲಾಖೆಯ ಸಚಿವರಾದ ಎಸ್‌. ಜೈಶಂಕರ್ ಅವರಿಗೆ ಪೋಸ್ಟ್‌ ಟ್ಯಾಗ್ ಮಾಡಿದ್ದಾರೆ.

ಮೀನಾಕ್ಷಿ ಲೇಖಿ ಅವರ ಸೃಷ್ಟೀಕರಣಕ್ಕೆ ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರತಿಕ್ರಿಯಿಸಿದ್ದು, ಲೇಖಿ ಅವರ ಪ್ರತಿಕ್ರಿಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಮೀನಾಕ್ಷಿ ಲೇಖಿ ಜೀ ಅವರು ತಾನು ಸಹಿ ಮಾಡಿರುವುದನ್ನು ನಿರಾಕರಿಸುತ್ತಿದ್ದಾರೆ. ನಾನು ಸಹಿ ಮಾಡಿಲ್ಲ ಎಂದಿದ್ದಾರೆ. ಸಹಿ ಮಾಡಿದವರು ಯಾರೆಂದು ಗೊತ್ತಿಲ್ಲ, ಇದು ನಕಲಿ ಸಹಿ ಎಂದು ಹೇಳುತ್ತಿದ್ದಾರೆ. ಇದು ಹೌದು ಎಂದಾದರೆ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ಲೇಖಿ ಅವರ ಸ್ಪಷ್ಟೀಕರಣಕ್ಕೆ ಕೃತಜ್ಞತೆ ಹೇಳುತ್ತೇನೆ” ಎಂದು ಚತುರ್ವೇದಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಳಲ್ಲಿ ಹರಿದಾಡಿದ ಪ್ರಶ್ನೋತ್ತರ ಪ್ರತಿಯ ಪ್ರಕಾರ, ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಪ್ರಸ್ತಾಪವನ್ನು ಭಾರತ ಸರ್ಕಾರ ಹೊಂದಿದೆಯೇ? ಇಸ್ರೇಲ್ ಸರ್ಕಾರವು ಈ ರೀತಿಯ ಬೇಡಿಕೆ ಇಟ್ಟಿದಿಯೇ? ಎಂಬ ಬಗ್ಗೆ ಉತ್ತರ ಕೋರಿ ಕಾಂಗ್ರೆಸ್ ಸಂಸದ ಕುಂಬಕುಡಿ ಸುಧಾಕರನ್ ಅವರು ಪ್ರಶ್ನೆ ಕೇಳಿದ್ದಾರೆ.

ಭಾರತದ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಅವರು ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಆದರೆ, ಭಾರತ ಸರ್ಕಾರವು ಹಮಾಸ್ ಗುಂಪನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿಲ್ಲ.

ಇದನ್ನೂ ಓದಿ : ಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...