Homeಮುಖಪುಟಮೀರಾ ರೋಡ್ ಕೋಮುಗಲಭೆ ಪ್ರಕರಣ | 14 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಜಾಮೀನು

ಮೀರಾ ರೋಡ್ ಕೋಮುಗಲಭೆ ಪ್ರಕರಣ | 14 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಜಾಮೀನು

- Advertisement -
- Advertisement -

ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ಅಯೋಧ್ಯೆಯ ರಾಮ ಮಂದಿರ ಕಟ್ಟಡದ ಶಂಕುಸ್ಥಾಪನೆಯ ಮುನ್ನಾದಿನದಂದು ಮಹಾರಾಷ್ಟ್ರದ ಮುಂಬೈಯ ಮೀರಾ ರೋಡ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧಿತರಾಗಿದ್ದ 14 ಮುಸ್ಲಿಮರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.  ಮೀರಾ ರೋಡ್ ಕೋಮುಗಲಭೆ

2024ರ ಜನವರಿಯಲ್ಲಿ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಆಚರಿಸಲು ಹೊರಟ ಜನರ ಮೇಲೆ ಹಲ್ಲೆ ನಡೆಸಲು ಪೂರ್ವಯೋಜಿತ ಪಿತೂರಿ ನಡೆದಿರುವುದನ್ನು ಮೇಲ್ನೋಟಕ್ಕೆ ಊಹಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್ ಜೆ ಜಮಾದಾರ್ ಅವರ ಏಕ ಪೀಠ ಸೋಮವಾರ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ದೂರುದಾರರ ಮೇಲೆ ಅಥವಾ ಬೇರೆಯವರ ಮೇಲೆ ಹಲ್ಲೆ ನಡೆಸಿರುವುದು ಕಾಣುತ್ತಿಲ್ಲ ಎಂದು ಪೀಠವು ಎತ್ತಿ ತೋರಿಸಿದೆ. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳು ಈ ಸಮಾಜದವರೇ ಆಗಿರುವುದರಿಂದ ಕಾನೂನಿನಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ದೂರವಿದೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿಗಳು ಜನವರಿಯಿಂದ ಕಸ್ಟಡಿಯಲ್ಲಿದ್ದಾರೆ ಎಂಬ ಅಂಶವನ್ನು ಪೀಠವು ಗಮನಿಸಿದ್ದು, ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲ. ಆದ್ದರಿಂದ, ಅವರ ಮತ್ತಷ್ಟು ಬಂಧನ ಅನಗತ್ಯವಾಗಿರುತ್ತದೆ ಎಂದು ಹೇಳಿದೆ. ಮೀರಾ ರೋಡ್ ಕೋಮುಗಲಭೆ

ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ದಾಖಲಾದ ಪ್ರಕರಣದಲ್ಲಿ, ಥಾಣೆ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಜಾಮೀನು ನಿರಾಕರಿಸಿದ ನಂತರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆರೋಪಿಗಳು ದೂರುದಾರರನ್ನು ಸುತ್ತುವರೆದಿದ್ದ 50 ರಿಂದ 60 ಜನರ ಗುಂಪಿನ ಭಾಗವಾಗಿದ್ದರು. ಈ ವೇಳೆ ಅಯೋಧ್ಯೆಗೆ ಹೊರಟಿದ್ದ ಇತರರು ಘೋಷಣೆಗಳನ್ನು ಕೂಗಿದ್ದರು, ಆಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಹೈಕೋರ್ಟ್, ತನ್ನ ಆದೇಶದಲ್ಲಿ, ಆರೋಪಿಗಳು ಕಾನೂನುಬಾಹಿರ ಸಭೆ ನಡೆಸಿದ್ದರು ಎಂದು ಪ್ರತಿಪಾದಿಸಲು ಪ್ರಾಥಮಿಕ ವಿಷಯ ಇರಬೇಕು ಎಂದು ಹೇಳಿದೆ. ಆಪಾದಿತ ಘಟನೆ ನಡೆದ ಪ್ರದೇಶಕ್ಕೆ ಅಯೋಧ್ಯೆಗೆ ತೆರಳುವವರು ಪ್ರವೇಶಿಸಿರುವುದು ಆಕಸ್ಮಿಕವಾಗಿದೆ. ಆದ್ದರಿಂದ, ರ್ಯಾಲಿಯ ಸದಸ್ಯರ ಮೇಲೆ ದಾಳಿ ಮಾಡಲು ಪೂರ್ವಯೋಜಿತ ಅಥವಾ ಪೂರ್ವಭಾವಿ ಸಭೆ ನಡೆದಿದೆ ಎಂದು ಊಹಿಸಲು ಸಾಧ್ಯವಿಲ್ಲ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...