Homeಮುಖಪುಟಮೀರಾ ರೋಡ್ ಕೋಮುಗಲಭೆ ಪ್ರಕರಣ | 14 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಜಾಮೀನು

ಮೀರಾ ರೋಡ್ ಕೋಮುಗಲಭೆ ಪ್ರಕರಣ | 14 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಜಾಮೀನು

- Advertisement -
- Advertisement -

ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ಅಯೋಧ್ಯೆಯ ರಾಮ ಮಂದಿರ ಕಟ್ಟಡದ ಶಂಕುಸ್ಥಾಪನೆಯ ಮುನ್ನಾದಿನದಂದು ಮಹಾರಾಷ್ಟ್ರದ ಮುಂಬೈಯ ಮೀರಾ ರೋಡ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧಿತರಾಗಿದ್ದ 14 ಮುಸ್ಲಿಮರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.  ಮೀರಾ ರೋಡ್ ಕೋಮುಗಲಭೆ

2024ರ ಜನವರಿಯಲ್ಲಿ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಆಚರಿಸಲು ಹೊರಟ ಜನರ ಮೇಲೆ ಹಲ್ಲೆ ನಡೆಸಲು ಪೂರ್ವಯೋಜಿತ ಪಿತೂರಿ ನಡೆದಿರುವುದನ್ನು ಮೇಲ್ನೋಟಕ್ಕೆ ಊಹಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್ ಜೆ ಜಮಾದಾರ್ ಅವರ ಏಕ ಪೀಠ ಸೋಮವಾರ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ದೂರುದಾರರ ಮೇಲೆ ಅಥವಾ ಬೇರೆಯವರ ಮೇಲೆ ಹಲ್ಲೆ ನಡೆಸಿರುವುದು ಕಾಣುತ್ತಿಲ್ಲ ಎಂದು ಪೀಠವು ಎತ್ತಿ ತೋರಿಸಿದೆ. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳು ಈ ಸಮಾಜದವರೇ ಆಗಿರುವುದರಿಂದ ಕಾನೂನಿನಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ದೂರವಿದೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿಗಳು ಜನವರಿಯಿಂದ ಕಸ್ಟಡಿಯಲ್ಲಿದ್ದಾರೆ ಎಂಬ ಅಂಶವನ್ನು ಪೀಠವು ಗಮನಿಸಿದ್ದು, ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲ. ಆದ್ದರಿಂದ, ಅವರ ಮತ್ತಷ್ಟು ಬಂಧನ ಅನಗತ್ಯವಾಗಿರುತ್ತದೆ ಎಂದು ಹೇಳಿದೆ. ಮೀರಾ ರೋಡ್ ಕೋಮುಗಲಭೆ

ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ದಾಖಲಾದ ಪ್ರಕರಣದಲ್ಲಿ, ಥಾಣೆ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಜಾಮೀನು ನಿರಾಕರಿಸಿದ ನಂತರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆರೋಪಿಗಳು ದೂರುದಾರರನ್ನು ಸುತ್ತುವರೆದಿದ್ದ 50 ರಿಂದ 60 ಜನರ ಗುಂಪಿನ ಭಾಗವಾಗಿದ್ದರು. ಈ ವೇಳೆ ಅಯೋಧ್ಯೆಗೆ ಹೊರಟಿದ್ದ ಇತರರು ಘೋಷಣೆಗಳನ್ನು ಕೂಗಿದ್ದರು, ಆಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಹೈಕೋರ್ಟ್, ತನ್ನ ಆದೇಶದಲ್ಲಿ, ಆರೋಪಿಗಳು ಕಾನೂನುಬಾಹಿರ ಸಭೆ ನಡೆಸಿದ್ದರು ಎಂದು ಪ್ರತಿಪಾದಿಸಲು ಪ್ರಾಥಮಿಕ ವಿಷಯ ಇರಬೇಕು ಎಂದು ಹೇಳಿದೆ. ಆಪಾದಿತ ಘಟನೆ ನಡೆದ ಪ್ರದೇಶಕ್ಕೆ ಅಯೋಧ್ಯೆಗೆ ತೆರಳುವವರು ಪ್ರವೇಶಿಸಿರುವುದು ಆಕಸ್ಮಿಕವಾಗಿದೆ. ಆದ್ದರಿಂದ, ರ್ಯಾಲಿಯ ಸದಸ್ಯರ ಮೇಲೆ ದಾಳಿ ಮಾಡಲು ಪೂರ್ವಯೋಜಿತ ಅಥವಾ ಪೂರ್ವಭಾವಿ ಸಭೆ ನಡೆದಿದೆ ಎಂದು ಊಹಿಸಲು ಸಾಧ್ಯವಿಲ್ಲ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...