Homeಸಿನಿಮಾಕ್ರೀಡೆತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಚಾನು..

- Advertisement -
- Advertisement -

ಇಂದು ಭಾರತದ ಪಾಲಿಗೆ ಹೆಮ್ಮೆಯ ದಿನ. ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾಳೆ. ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಮಣಿಪುರದ ಮೀರಾಬಾಯಿ ಚಾನು ಕುರಿತು ವಿವರ ಇಲ್ಲಿದೆ.

2016ರ ರಿಯೋ ಒಲಂಪಿಕ್ಸ್‌ನಲ್ಲಿಯೇ ಮೀರಾಬಾಯಿ ಇತಿಹಾಸ ಸೃಷ್ಟಿಸಬೇಕಿತ್ತು. ಆದರೆ ಗಾಯಗೊಂಡ ಅವರು ಪದಕ ಗೆಲ್ಲವಲ್ಲಿ ವಿಫಲರಾದರು. ಆದರೆ ಛಲಬಿಡದ ಅವರು ಕೊನೆಗೂ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಪಿಂಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿಯವರು ಕಂಚಿನ ಪದಕ ಗಳಿಸಿದ್ದೇ ಕೊನೆಯಾಗಿತ್ತು.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಕ್ರೀಡಾಪಟುವಾಗಲು ನಿರ್ಧರಿಸಿದ್ದಳು. ತನ್ನ ಮನೆಯ ಹುಡುಗರು ಮತ್ತು ಸಂಬಂಧಿಕರು ಪುಟ್ಬಾಲ್ ಆಡುತ್ತಿದ್ದರಿಂದ ಪ್ರತಿದಿನ ಬಟ್ಟೆಯೆಲ್ಲ ಗಲೀಜು ಮಾಡಿಕೊಂಡು ವಾಪಸ್ ಬರುತ್ತಿದ್ದರು. ಹಾಗಾಗಿ ಈಕೆ ಮಾತ್ರ ಶುಚಿಯಾದ, ನೀಟ್‌ ಆಗಿರುವ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಬಯಸಿದ್ದಳು. ಹಾಗಾಗಿ ಆರ್ಚರ್ ಕ್ರೀಡೆಯು ಅದಕ್ಕೆ ತಕ್ಕುದಾದ ಮತ್ತು ಸ್ಟೈಲ್ ಆದ ಕ್ರೀಡೆಯಾಗಿದ್ದು ಅದನ್ನು ಅಭ್ಯಸಿಸಲು ಬಯಸಿದ್ದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದಳು. ನಂತರ ಅಂತರಾಷ್ಟ್ರೀಯ ವೇಟ್ ಲಿಫ್ಟರ್‌ ಮತ್ತು ಕೋಚ್ ಆಗಿದ್ದ ಅನಿತಾ ಚಾನುರನ್ನು ಭೇಟಿ ಮಾಡಿದ ನಂತರ ಆಕೆಯ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭವಾಯಿತು.

ಮೀರಾಬಾಯಿ ಆರಂಭದಲ್ಲಿಯೇ ಹಲವು ಕಷ್ಟಗಳನ್ನು ಎದುರಿಸಬೇಕಾಯಿತು. ತನ್ನ ಊರಿನಿಂದ 22 ಕಿ.ಮೀ ದೂರದಲ್ಲಿರುವ ತರಬೇತಿ ಕೇಂದ್ರವನ್ನು ಎರಡು ಬಸ್‌ ಬದಲಿಸಿ ಬೆಳಿಗ್ಗೆ 6 ಗಂಟೆಯೊಳಗೆ ತಲುಬೇಕಾಗಿತ್ತು. ಬಹಳ ಶಕ್ತಿಯುತ ಹುಡುಗಿಯಾಗಿದ್ದ ಮೀರಾಬಾಯಿ ಇದೆಲ್ಲವನ್ನು ದಿಟ್ಟವಾಗಿ ಎದುರಿಸಿದಳು. 12ನೇ ವಯಸ್ಸಿನಲ್ಲಿಯೇ ಆಕೆ ತನ್ನ ಸಹೋದರರಿಗಿಂತ ಹೆಚ್ಚಿನ ಭಾರದ ಕಟ್ಟಿಗೆಗಳನ್ನು ಹೊರುತ್ತಿದ್ದಳು.

2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 170ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದ ಅವರು, 2016ರಲ್ಲಿ ನಡೆದ ನ್ಯಾಷನಲ್ ಸ್ಪರ್ಧೆಯಲ್ಲಿ 186 ಕೆಜಿ ಭಾರ ಎತ್ತಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಆದರೆ ಅದೇ ವರ್ಷ ನಡೆದ ರಿಯೋ ಒಲಪಿಂಕ್‌ನಲ್ಲಿ ಗಾಯಗೊಂಡು ನಿರಾಸೆ ಮೂಡಿಸಿದ್ದರು.

2017 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮತ್ತು 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಾನು 2016ರ ಒಲಂಪಿಕ್ಸ್ ನೋವನ್ನು ಮರೆತರು. ಅಲ್ಲಿಂದ ಟೋಕಿಯೋ ಒಲಂಪಿಕ್ಸ್‌ಗಾಗಿ ತಯಾರಿ ನಡೆಸಿದ ಅವರು ಕೊನೆಗೂ ಭರವಸೆ ಹುಸಿಗೊಳಿಸದೆ ಪದಕ ತಂದುಕೊಟ್ಟಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ ಚಾನು ಏಷ್ಯನ್ ಕ್ರೀಡಾಕೂಟದಲ್ಲಿ ವಿಶ್ವದಾಖಲೆ ಗಳಿಸಿದ್ದಾರೆ. ಇಂದಿನ ಒಲಂಪಿಕ್ ಬೆಳ್ಳಿ ಅವರ ಹಿರಿಮೆಗೆ ಮತ್ತೊಂದು ಗರಿಯಾಗಿದೆ. ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಬಾಯಿ ಚಾನುಗೆ ಅಭಿನಂದನೆಗಳು.. ಮತ್ತುಷ್ಟು ಪದಕಗಳು ನಿಮ್ಮಿಂದ ಹೊರಹೊಮ್ಮಲಿ ಎಂದು ಭಾರತ ಎದುರು ನೋಡುತ್ತಿದೆ.


ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...