Homeಸಿನಿಮಾಕ್ರೀಡೆತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಚಾನು..

- Advertisement -
- Advertisement -

ಇಂದು ಭಾರತದ ಪಾಲಿಗೆ ಹೆಮ್ಮೆಯ ದಿನ. ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾಳೆ. ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಮಣಿಪುರದ ಮೀರಾಬಾಯಿ ಚಾನು ಕುರಿತು ವಿವರ ಇಲ್ಲಿದೆ.

2016ರ ರಿಯೋ ಒಲಂಪಿಕ್ಸ್‌ನಲ್ಲಿಯೇ ಮೀರಾಬಾಯಿ ಇತಿಹಾಸ ಸೃಷ್ಟಿಸಬೇಕಿತ್ತು. ಆದರೆ ಗಾಯಗೊಂಡ ಅವರು ಪದಕ ಗೆಲ್ಲವಲ್ಲಿ ವಿಫಲರಾದರು. ಆದರೆ ಛಲಬಿಡದ ಅವರು ಕೊನೆಗೂ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಪಿಂಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿಯವರು ಕಂಚಿನ ಪದಕ ಗಳಿಸಿದ್ದೇ ಕೊನೆಯಾಗಿತ್ತು.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಕ್ರೀಡಾಪಟುವಾಗಲು ನಿರ್ಧರಿಸಿದ್ದಳು. ತನ್ನ ಮನೆಯ ಹುಡುಗರು ಮತ್ತು ಸಂಬಂಧಿಕರು ಪುಟ್ಬಾಲ್ ಆಡುತ್ತಿದ್ದರಿಂದ ಪ್ರತಿದಿನ ಬಟ್ಟೆಯೆಲ್ಲ ಗಲೀಜು ಮಾಡಿಕೊಂಡು ವಾಪಸ್ ಬರುತ್ತಿದ್ದರು. ಹಾಗಾಗಿ ಈಕೆ ಮಾತ್ರ ಶುಚಿಯಾದ, ನೀಟ್‌ ಆಗಿರುವ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಬಯಸಿದ್ದಳು. ಹಾಗಾಗಿ ಆರ್ಚರ್ ಕ್ರೀಡೆಯು ಅದಕ್ಕೆ ತಕ್ಕುದಾದ ಮತ್ತು ಸ್ಟೈಲ್ ಆದ ಕ್ರೀಡೆಯಾಗಿದ್ದು ಅದನ್ನು ಅಭ್ಯಸಿಸಲು ಬಯಸಿದ್ದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದಳು. ನಂತರ ಅಂತರಾಷ್ಟ್ರೀಯ ವೇಟ್ ಲಿಫ್ಟರ್‌ ಮತ್ತು ಕೋಚ್ ಆಗಿದ್ದ ಅನಿತಾ ಚಾನುರನ್ನು ಭೇಟಿ ಮಾಡಿದ ನಂತರ ಆಕೆಯ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭವಾಯಿತು.

ಮೀರಾಬಾಯಿ ಆರಂಭದಲ್ಲಿಯೇ ಹಲವು ಕಷ್ಟಗಳನ್ನು ಎದುರಿಸಬೇಕಾಯಿತು. ತನ್ನ ಊರಿನಿಂದ 22 ಕಿ.ಮೀ ದೂರದಲ್ಲಿರುವ ತರಬೇತಿ ಕೇಂದ್ರವನ್ನು ಎರಡು ಬಸ್‌ ಬದಲಿಸಿ ಬೆಳಿಗ್ಗೆ 6 ಗಂಟೆಯೊಳಗೆ ತಲುಬೇಕಾಗಿತ್ತು. ಬಹಳ ಶಕ್ತಿಯುತ ಹುಡುಗಿಯಾಗಿದ್ದ ಮೀರಾಬಾಯಿ ಇದೆಲ್ಲವನ್ನು ದಿಟ್ಟವಾಗಿ ಎದುರಿಸಿದಳು. 12ನೇ ವಯಸ್ಸಿನಲ್ಲಿಯೇ ಆಕೆ ತನ್ನ ಸಹೋದರರಿಗಿಂತ ಹೆಚ್ಚಿನ ಭಾರದ ಕಟ್ಟಿಗೆಗಳನ್ನು ಹೊರುತ್ತಿದ್ದಳು.

2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 170ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದ ಅವರು, 2016ರಲ್ಲಿ ನಡೆದ ನ್ಯಾಷನಲ್ ಸ್ಪರ್ಧೆಯಲ್ಲಿ 186 ಕೆಜಿ ಭಾರ ಎತ್ತಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಆದರೆ ಅದೇ ವರ್ಷ ನಡೆದ ರಿಯೋ ಒಲಪಿಂಕ್‌ನಲ್ಲಿ ಗಾಯಗೊಂಡು ನಿರಾಸೆ ಮೂಡಿಸಿದ್ದರು.

2017 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮತ್ತು 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಾನು 2016ರ ಒಲಂಪಿಕ್ಸ್ ನೋವನ್ನು ಮರೆತರು. ಅಲ್ಲಿಂದ ಟೋಕಿಯೋ ಒಲಂಪಿಕ್ಸ್‌ಗಾಗಿ ತಯಾರಿ ನಡೆಸಿದ ಅವರು ಕೊನೆಗೂ ಭರವಸೆ ಹುಸಿಗೊಳಿಸದೆ ಪದಕ ತಂದುಕೊಟ್ಟಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ ಚಾನು ಏಷ್ಯನ್ ಕ್ರೀಡಾಕೂಟದಲ್ಲಿ ವಿಶ್ವದಾಖಲೆ ಗಳಿಸಿದ್ದಾರೆ. ಇಂದಿನ ಒಲಂಪಿಕ್ ಬೆಳ್ಳಿ ಅವರ ಹಿರಿಮೆಗೆ ಮತ್ತೊಂದು ಗರಿಯಾಗಿದೆ. ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಬಾಯಿ ಚಾನುಗೆ ಅಭಿನಂದನೆಗಳು.. ಮತ್ತುಷ್ಟು ಪದಕಗಳು ನಿಮ್ಮಿಂದ ಹೊರಹೊಮ್ಮಲಿ ಎಂದು ಭಾರತ ಎದುರು ನೋಡುತ್ತಿದೆ.


ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...