Homeಸಿನಿಮಾಕ್ರೀಡೆತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಚಾನು..

- Advertisement -
- Advertisement -

ಇಂದು ಭಾರತದ ಪಾಲಿಗೆ ಹೆಮ್ಮೆಯ ದಿನ. ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾಳೆ. ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಮಣಿಪುರದ ಮೀರಾಬಾಯಿ ಚಾನು ಕುರಿತು ವಿವರ ಇಲ್ಲಿದೆ.

2016ರ ರಿಯೋ ಒಲಂಪಿಕ್ಸ್‌ನಲ್ಲಿಯೇ ಮೀರಾಬಾಯಿ ಇತಿಹಾಸ ಸೃಷ್ಟಿಸಬೇಕಿತ್ತು. ಆದರೆ ಗಾಯಗೊಂಡ ಅವರು ಪದಕ ಗೆಲ್ಲವಲ್ಲಿ ವಿಫಲರಾದರು. ಆದರೆ ಛಲಬಿಡದ ಅವರು ಕೊನೆಗೂ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಪಿಂಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿಯವರು ಕಂಚಿನ ಪದಕ ಗಳಿಸಿದ್ದೇ ಕೊನೆಯಾಗಿತ್ತು.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಕ್ರೀಡಾಪಟುವಾಗಲು ನಿರ್ಧರಿಸಿದ್ದಳು. ತನ್ನ ಮನೆಯ ಹುಡುಗರು ಮತ್ತು ಸಂಬಂಧಿಕರು ಪುಟ್ಬಾಲ್ ಆಡುತ್ತಿದ್ದರಿಂದ ಪ್ರತಿದಿನ ಬಟ್ಟೆಯೆಲ್ಲ ಗಲೀಜು ಮಾಡಿಕೊಂಡು ವಾಪಸ್ ಬರುತ್ತಿದ್ದರು. ಹಾಗಾಗಿ ಈಕೆ ಮಾತ್ರ ಶುಚಿಯಾದ, ನೀಟ್‌ ಆಗಿರುವ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಬಯಸಿದ್ದಳು. ಹಾಗಾಗಿ ಆರ್ಚರ್ ಕ್ರೀಡೆಯು ಅದಕ್ಕೆ ತಕ್ಕುದಾದ ಮತ್ತು ಸ್ಟೈಲ್ ಆದ ಕ್ರೀಡೆಯಾಗಿದ್ದು ಅದನ್ನು ಅಭ್ಯಸಿಸಲು ಬಯಸಿದ್ದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದಳು. ನಂತರ ಅಂತರಾಷ್ಟ್ರೀಯ ವೇಟ್ ಲಿಫ್ಟರ್‌ ಮತ್ತು ಕೋಚ್ ಆಗಿದ್ದ ಅನಿತಾ ಚಾನುರನ್ನು ಭೇಟಿ ಮಾಡಿದ ನಂತರ ಆಕೆಯ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭವಾಯಿತು.

ಮೀರಾಬಾಯಿ ಆರಂಭದಲ್ಲಿಯೇ ಹಲವು ಕಷ್ಟಗಳನ್ನು ಎದುರಿಸಬೇಕಾಯಿತು. ತನ್ನ ಊರಿನಿಂದ 22 ಕಿ.ಮೀ ದೂರದಲ್ಲಿರುವ ತರಬೇತಿ ಕೇಂದ್ರವನ್ನು ಎರಡು ಬಸ್‌ ಬದಲಿಸಿ ಬೆಳಿಗ್ಗೆ 6 ಗಂಟೆಯೊಳಗೆ ತಲುಬೇಕಾಗಿತ್ತು. ಬಹಳ ಶಕ್ತಿಯುತ ಹುಡುಗಿಯಾಗಿದ್ದ ಮೀರಾಬಾಯಿ ಇದೆಲ್ಲವನ್ನು ದಿಟ್ಟವಾಗಿ ಎದುರಿಸಿದಳು. 12ನೇ ವಯಸ್ಸಿನಲ್ಲಿಯೇ ಆಕೆ ತನ್ನ ಸಹೋದರರಿಗಿಂತ ಹೆಚ್ಚಿನ ಭಾರದ ಕಟ್ಟಿಗೆಗಳನ್ನು ಹೊರುತ್ತಿದ್ದಳು.

2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 170ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದ ಅವರು, 2016ರಲ್ಲಿ ನಡೆದ ನ್ಯಾಷನಲ್ ಸ್ಪರ್ಧೆಯಲ್ಲಿ 186 ಕೆಜಿ ಭಾರ ಎತ್ತಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಆದರೆ ಅದೇ ವರ್ಷ ನಡೆದ ರಿಯೋ ಒಲಪಿಂಕ್‌ನಲ್ಲಿ ಗಾಯಗೊಂಡು ನಿರಾಸೆ ಮೂಡಿಸಿದ್ದರು.

2017 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮತ್ತು 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಾನು 2016ರ ಒಲಂಪಿಕ್ಸ್ ನೋವನ್ನು ಮರೆತರು. ಅಲ್ಲಿಂದ ಟೋಕಿಯೋ ಒಲಂಪಿಕ್ಸ್‌ಗಾಗಿ ತಯಾರಿ ನಡೆಸಿದ ಅವರು ಕೊನೆಗೂ ಭರವಸೆ ಹುಸಿಗೊಳಿಸದೆ ಪದಕ ತಂದುಕೊಟ್ಟಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ ಚಾನು ಏಷ್ಯನ್ ಕ್ರೀಡಾಕೂಟದಲ್ಲಿ ವಿಶ್ವದಾಖಲೆ ಗಳಿಸಿದ್ದಾರೆ. ಇಂದಿನ ಒಲಂಪಿಕ್ ಬೆಳ್ಳಿ ಅವರ ಹಿರಿಮೆಗೆ ಮತ್ತೊಂದು ಗರಿಯಾಗಿದೆ. ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಬಾಯಿ ಚಾನುಗೆ ಅಭಿನಂದನೆಗಳು.. ಮತ್ತುಷ್ಟು ಪದಕಗಳು ನಿಮ್ಮಿಂದ ಹೊರಹೊಮ್ಮಲಿ ಎಂದು ಭಾರತ ಎದುರು ನೋಡುತ್ತಿದೆ.


ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...