Homeಸಿನಿಮಾಕ್ರೀಡೆತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಚಾನು..

- Advertisement -
- Advertisement -

ಇಂದು ಭಾರತದ ಪಾಲಿಗೆ ಹೆಮ್ಮೆಯ ದಿನ. ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾಳೆ. ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಮಣಿಪುರದ ಮೀರಾಬಾಯಿ ಚಾನು ಕುರಿತು ವಿವರ ಇಲ್ಲಿದೆ.

2016ರ ರಿಯೋ ಒಲಂಪಿಕ್ಸ್‌ನಲ್ಲಿಯೇ ಮೀರಾಬಾಯಿ ಇತಿಹಾಸ ಸೃಷ್ಟಿಸಬೇಕಿತ್ತು. ಆದರೆ ಗಾಯಗೊಂಡ ಅವರು ಪದಕ ಗೆಲ್ಲವಲ್ಲಿ ವಿಫಲರಾದರು. ಆದರೆ ಛಲಬಿಡದ ಅವರು ಕೊನೆಗೂ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಪಿಂಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿಯವರು ಕಂಚಿನ ಪದಕ ಗಳಿಸಿದ್ದೇ ಕೊನೆಯಾಗಿತ್ತು.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಕ್ರೀಡಾಪಟುವಾಗಲು ನಿರ್ಧರಿಸಿದ್ದಳು. ತನ್ನ ಮನೆಯ ಹುಡುಗರು ಮತ್ತು ಸಂಬಂಧಿಕರು ಪುಟ್ಬಾಲ್ ಆಡುತ್ತಿದ್ದರಿಂದ ಪ್ರತಿದಿನ ಬಟ್ಟೆಯೆಲ್ಲ ಗಲೀಜು ಮಾಡಿಕೊಂಡು ವಾಪಸ್ ಬರುತ್ತಿದ್ದರು. ಹಾಗಾಗಿ ಈಕೆ ಮಾತ್ರ ಶುಚಿಯಾದ, ನೀಟ್‌ ಆಗಿರುವ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಬಯಸಿದ್ದಳು. ಹಾಗಾಗಿ ಆರ್ಚರ್ ಕ್ರೀಡೆಯು ಅದಕ್ಕೆ ತಕ್ಕುದಾದ ಮತ್ತು ಸ್ಟೈಲ್ ಆದ ಕ್ರೀಡೆಯಾಗಿದ್ದು ಅದನ್ನು ಅಭ್ಯಸಿಸಲು ಬಯಸಿದ್ದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದಳು. ನಂತರ ಅಂತರಾಷ್ಟ್ರೀಯ ವೇಟ್ ಲಿಫ್ಟರ್‌ ಮತ್ತು ಕೋಚ್ ಆಗಿದ್ದ ಅನಿತಾ ಚಾನುರನ್ನು ಭೇಟಿ ಮಾಡಿದ ನಂತರ ಆಕೆಯ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭವಾಯಿತು.

ಮೀರಾಬಾಯಿ ಆರಂಭದಲ್ಲಿಯೇ ಹಲವು ಕಷ್ಟಗಳನ್ನು ಎದುರಿಸಬೇಕಾಯಿತು. ತನ್ನ ಊರಿನಿಂದ 22 ಕಿ.ಮೀ ದೂರದಲ್ಲಿರುವ ತರಬೇತಿ ಕೇಂದ್ರವನ್ನು ಎರಡು ಬಸ್‌ ಬದಲಿಸಿ ಬೆಳಿಗ್ಗೆ 6 ಗಂಟೆಯೊಳಗೆ ತಲುಬೇಕಾಗಿತ್ತು. ಬಹಳ ಶಕ್ತಿಯುತ ಹುಡುಗಿಯಾಗಿದ್ದ ಮೀರಾಬಾಯಿ ಇದೆಲ್ಲವನ್ನು ದಿಟ್ಟವಾಗಿ ಎದುರಿಸಿದಳು. 12ನೇ ವಯಸ್ಸಿನಲ್ಲಿಯೇ ಆಕೆ ತನ್ನ ಸಹೋದರರಿಗಿಂತ ಹೆಚ್ಚಿನ ಭಾರದ ಕಟ್ಟಿಗೆಗಳನ್ನು ಹೊರುತ್ತಿದ್ದಳು.

2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 170ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದ ಅವರು, 2016ರಲ್ಲಿ ನಡೆದ ನ್ಯಾಷನಲ್ ಸ್ಪರ್ಧೆಯಲ್ಲಿ 186 ಕೆಜಿ ಭಾರ ಎತ್ತಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಆದರೆ ಅದೇ ವರ್ಷ ನಡೆದ ರಿಯೋ ಒಲಪಿಂಕ್‌ನಲ್ಲಿ ಗಾಯಗೊಂಡು ನಿರಾಸೆ ಮೂಡಿಸಿದ್ದರು.

2017 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮತ್ತು 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಾನು 2016ರ ಒಲಂಪಿಕ್ಸ್ ನೋವನ್ನು ಮರೆತರು. ಅಲ್ಲಿಂದ ಟೋಕಿಯೋ ಒಲಂಪಿಕ್ಸ್‌ಗಾಗಿ ತಯಾರಿ ನಡೆಸಿದ ಅವರು ಕೊನೆಗೂ ಭರವಸೆ ಹುಸಿಗೊಳಿಸದೆ ಪದಕ ತಂದುಕೊಟ್ಟಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ ಚಾನು ಏಷ್ಯನ್ ಕ್ರೀಡಾಕೂಟದಲ್ಲಿ ವಿಶ್ವದಾಖಲೆ ಗಳಿಸಿದ್ದಾರೆ. ಇಂದಿನ ಒಲಂಪಿಕ್ ಬೆಳ್ಳಿ ಅವರ ಹಿರಿಮೆಗೆ ಮತ್ತೊಂದು ಗರಿಯಾಗಿದೆ. ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಬಾಯಿ ಚಾನುಗೆ ಅಭಿನಂದನೆಗಳು.. ಮತ್ತುಷ್ಟು ಪದಕಗಳು ನಿಮ್ಮಿಂದ ಹೊರಹೊಮ್ಮಲಿ ಎಂದು ಭಾರತ ಎದುರು ನೋಡುತ್ತಿದೆ.


ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...