Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...