Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...