Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...