Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...