Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ಪ್ರೆಶ್ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ಕೇವಲ ಎರಡು ವರ್ಷಗಳ ಹಿಂದೆ ಒಂದು ರಾಜಕೀಯ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...