Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...