Homeಮುಖಪುಟ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

- Advertisement -
- Advertisement -

ಆರ್‌ಎಸ್‌ಎಸ್‌ ಕುರಿತು ಪ್ರಶ್ನೆಗಳನ್ನು ಸಿದ್ಧಪಡಿಸಿದ ಮೀರತ್ ಕಾಲೇಜಿನ ಹಿರಿಯ ಪ್ರಾಧ್ಯಾಪಕರೊಬ್ಬರನ್ನು, ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ತನ್ನ ಎಲ್ಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಕೆಲಸಗಳಿಂದ ಜೀವಮಾನದವರೆಗೆ ನಿಷೇಧಿಸಿದೆ. ಸಂಘಪರಿವಾರದ ಒತ್ತಡದ ಮೇರೆಗೆ ಪ್ರಾಧ್ಯಾಪಕರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದ ನಂತರ ಸರ್ಕಾರಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ಸೀಮಾ ಪನ್ವರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆದ ಎರಡು ದಿನಗಳ ನಂತರ ಶುಕ್ರವಾರ ಎಬಿವಿಪಿ ಪ್ರತಿಭಟಿಸಿದೆ.

ಏಪ್ರಿಲ್ 2ರಂದು ನಡೆದ ಎರಡನೇ ಸೆಮಿಸ್ಟರ್ ರಾಜ್ಯಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ “ಧಾರ್ಮಿಕ ಮತ್ತು ಜಾತಿ ಆಧಾರಿತ ರಾಜಕೀಯದ ಬೆಳವಣಿಗೆಗೆ ಆರೆಸ್ಸೆಸ್ ಕೊಡುಗೆ” ಕುರಿತು ಪ್ರಶ್ನಿಸಲಾಗಿತ್ತು. ನಕ್ಸಲಿಯರು ಮತ್ತು ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್‌ನಂತಹ ಸಂಘಟನೆಗಳ ಜೊತೆಗೆ ಆರೆಸ್ಸೆಸ್ ಅನ್ನು ಅದೇ ಪ್ರಶ್ನೆಯಲ್ಲಿ ಉಲ್ಲೇಖಿಸಲಾಗಿತ್ತು. ಇದು ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ ಎಂದು ವರದಿಗಳು ಹೇಳಿವೆ.

ಪ್ರೊಫೆಸರ್ ಸೀಮಾ ಪನ್ವರ್ ಅವರನ್ನು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಕೆಲಸಗಳಿಂದ ಜೀವನಪರ್ಯಂತ ನಿಷೇಧಿಸಲಾಗಿದೆ ಎಂದು ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಧೀರೇಂದ್ರ ಕುಮಾರ್ ವರ್ಮಾ ಹೇಳಿದ್ದಾರೆ. ವಿವಾದದ ಬಗ್ಗೆ, ಸೀಮಾ ಪನ್ವಾರ್ ಅವರು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. “ಯಾರನ್ನೂ ನೋಯಿಸುವ ಉದ್ದೇಶದಿಂದ ತಾನು ಇದನ್ನು ಮಾಡಿಲ್ಲ” ಎಂದು ಅವರು ಲಿಖಿತವಾಗಿ ಹೇಳಿದ್ದಾರೆ ಎಂದು ವರ್ಮಾ ತಿಳಿಸಿದ್ದಾರೆ.

ನಕ್ಸಲಿಯರು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್‌ನಂತಹ ಸಂಘಟನೆಗಳ ಜೊತೆಗೆ ಆರ್‌ಎಸ್‌ಎಸ್ ಹೆಸರನ್ನು ಸೇರಿಸಿದ್ದಕ್ಕಾಗಿ ಪ್ರೊಫೆಸರ್ ಸೀಮಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಬಿವಿಪಿ ಸದಸ್ಯರು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿ ರಿಜಿಸ್ಟ್ರಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...