Homeಮುಖಪುಟಮೀರತ್| ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆ ಪ್ರತಿಭಟನೆ

ಮೀರತ್| ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆ ಪ್ರತಿಭಟನೆ

- Advertisement -
- Advertisement -

ಮೀರತ್‌ನಲ್ಲಿ ಕಳವಳಕಾರಿ ಬೆಳವಣಿಗೆ ವರದಿಯಾಗಿದ್ದು, ಬಹುಪಾಲು ಹಿಂದೂಗಳೆ ವಾಸಿಸುವ ಬಡಾವಣೆಯಲ್ಲಿ ಮನೆ ಖರೀದಿಸಿದ ಮುಸ್ಲಿಂ ಕುಟುಂಬದ ವಿರುದ್ಧ ಹಿಂದುತ್ವ ಕಾರ್ಯಕರ್ತರು ಪ್ರತಿಭಡನೆ ನಡೆಸಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಹಿಂದುತ್ವ ಸಿದ್ಧಾಂತಗಳ ನೆರಳಿನಲ್ಲಿ, ದೇಶದ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸವಾಲುಗಳನ್ನು ಎತ್ತಿ ತೋರಿಸುವ ಈ ಘಟನೆಯು ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ದುರ್ಗಾಪುರಂ ಕಾಲೋನಿಯ ಶಿವಶಕ್ತಿ ದೇವಸ್ಥಾನದ ಬಳಿ ಇರುವ ಮನೆಯನ್ನು ಹಿಂದೂ ಕುಟುಂಬವೊಂದು ಮುಸ್ಲಿಂ ವ್ಯಕ್ತಿ ರಿಯಾಜುದ್ದೀನ್‌ಗೆ ಮಾರಾಟ ಮಾಡಿದೆ. ವ್ಯವಹಾರವು ಸಂಪೂರ್ಣವಾಗಿ ಕಾನೂನುಬದ್ಧ ಹಾಗೂ ಒಮ್ಮತದಿಂದ ಕೂಡಿದ್ದರೂ, ಸಚಿನ್ ಸಿರೋಹಿ ನೇತೃತ್ವದ ಸ್ಥಳೀಯ ಹಿಂದೂ ಸಂಘಟನೆಯ ಸದಸ್ಯರು ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಮುಸ್ಲಿಂ ಕುಟುಂಬದ ಉಪಸ್ಥಿತಿಯು ಆ ಪ್ರದೇಶದ ‘ವಾತಾವರಣವನ್ನು ತೊಂದರೆಗೊಳಿಸುತ್ತದೆ’ ಎಂದು ಹಿಂದುತ್ವವಾದಿಗಳು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಲೇಔಟ್‌ಗಳಿಲ್ಲ ಎಂದು ಸಿರೋಹಿ ಹೇಳಿದ್ದಾರೆ. “ಇಲ್ಲಿಗೆ ಮುಸ್ಲಿಂ ಕುಟುಂಬದ ಆಗಮನವು ನಮ್ಮ ಲೇಔಟ್‌ನ ಶಾಂತಿಯುತ ಸ್ವರೂಪವನ್ನು ಹಾಳುಮಾಡುವ ಪ್ರಯತ್ನವಾಗಿದೆ” ಎಂದು ಅವರು ವಾದಿಸಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತರು ಈಗ ಪೊಲೀಸರಿಗೆ ಔಪಚಾರಿಕ ದೂರು ನೀಡಿದ್ದಾರೆ. ಮಾರಾಟವನ್ನು ಹಿಂತೆಗೆದುಕೊಳ್ಳದಿದ್ದರೆ ತಮ್ಮ ಕ್ರಮಗಳನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ. “ಪೊಲೀಸರು ಕ್ರಮ ಕೈಗೊಂಡು ಮುಸ್ಲಿಂ ಖರೀದಿದಾರರಿಂದ ಮನೆಯನ್ನು ಹಿಂದಕ್ಕೆ ಪಡೆಯದಿದ್ದರೆ, ನಾವು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುತ್ತೇವೆ; ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಸಿರೋಹಿ ಘೋಷಿಸಿದರು.

ಇದನ್ನೂ ಓದಿ; ಕರ್ನಾಟಕದ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದ ಉದ್ಧವ್ ಸೇನಾ ಕಾರ್ಯಕರ್ತರು; ಉಭಯ ರಾಜ್ಯಗಳ ನಡುವೆ ಸಂಚಾರ ಸೇವೆಗಳು ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...