Homeಚಳವಳಿಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: SIO ಒತ್ತಾಯ

ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: SIO ಒತ್ತಾಯ

- Advertisement -
- Advertisement -

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸುವಂತೆ ಸರ್ಕಾರವನ್ನು ಎಸ್.ಐ.ಓ ಕರ್ನಾಟಕ ಒತ್ತಾಯಿಸಿದೆ.

ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಭೋದನಾ ತರಗತಿಗಳನ್ನು ತೊರೆದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,690 ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು ವಿದ್ಯಾರ್ಥಿಗಳಿಗೆ ಹೇಗೆ ತಾನೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಎಸ್.ಐ.ಓ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿಯವರು ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಅನೇಕ ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಪಡೆದಿದ್ದು, ಎನ್ಇಟಿ/ಎಸ್ಎಲ್ಇಟಿ ಅಥವಾ ಪಿ.ಎಚ್ ಡಿ ಪಡೆದುಕೊಂಡಿರುವ ಅತಿಥಿ ಉಪನ್ಯಾಸಕರಿಗೆ ರೂ.13,000/- ಹಾಗೂ ಸ್ನಾತಕೋತ್ತರ/ಎಂ.ಫಿಲ್ ಪದವೀಧರ ಅತಿಥಿ ಉಪನ್ಯಾಸಕರಿಗೆ ರೂ.11,000/- ಗಳ ಮಾಸಿಕ ಗೌರವ ಸಂಭಾವನೆಯನ್ನು ನೀಡಲಾಗುತ್ತಿದೆ, ಆದರೆ ಈ ಗೌರವಧನವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ವರ್ಷದ ಎಂಟು ತಿಂಗಳು ಮಾತ್ರ ಕೊಡಲಾಗುತ್ತಿದ್ದು ಈ ಅಲ್ಪವೇತನ ಪಡೆದುಕೊಂಡು ಇಂದಿನ ಹಣದುಬ್ಬರದ ದಿನಮಾನಗಳಲ್ಲಿ ಅತಿಥಿ ಉಪನ್ಯಾಸಕರು ಸಂಸಾರವನ್ನು ನಡೆಸಲು ತೀರಾ ಕಷ್ಟವನ್ನು ಎದುರಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಜೊತೆಗೆ ಉದ್ಯೋಗ ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಉಪನ್ಯಾಸಕರ ಅಳಲಿಗೆ ಸ್ಪಂದಿಸಬೇಕಾಗಿದೆ. ಅರೆಕಾಲಿಕ ಉಪನ್ಯಾಸಕರಾಗಿ ಅಥವಾ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸಿ ಸೇವಾ ಭದ್ರತೆ ಒದಗಿಸಬೇಕು ಮತ್ತು ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ವ್ಯಕ್ತಿಗಳ ಸೇವೆಯನ್ನು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಬೇಕು ಅಥವಾ ಸೇವಾ ಸಕ್ರಮಾತಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಭೋದನಾ ತರಗತಿಗಳನ್ನು ತೊರೆದು ಪ್ರತಿಭಟಿಸುತ್ತಿದ್ದಾರೆ, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಬಹಳಷ್ಟು ನಷ್ಟವಾಗಲಿದೆ, ಪಾಠ-ಕಲಿಕೆಯು ವಿಳಂಭವಾದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪ್ರಭಾವ ಬೀರುವ ಸಂಭವವಿದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಅಧ್ಯಯನಕ್ಕೆ ಅನಾನುಕೂಲವಾಗಲಿದೆ, ಇದಲ್ಲದೆ ರಾಜ್ಯದ ಅನೇಕ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬನೆಯಾಗಿವೆ, ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...