Homeಚಳವಳಿರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆ

ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆ

ಕರ್ನಾಟಕವು ಕೃಷಿಗೆ ಸಂಬಂಧಿಸಿದ ಎರಡು ವಿಚಾರಗಳಲ್ಲಿ ದೇಶದಲ್ಲೇ ಅತ್ಯಂತ ದುಸ್ಥಿತಿಯಲ್ಲಿದೆ. ದೆಹಲಿಯ ಬಾಲಂಗೋಚಿಗಳೂ, ನಿಷ್ಕ್ರಿಯರೂ ಆದ ಪ್ರಮುಖ ರಾಜಕೀಯ ಪಕ್ಷಗಳಿಗೆ ಇವುಗಳು ಮುಖ್ಯವೇ ಅಲ್ಲ. ನಮಗಾದರೂ ಮುಖ್ಯವಾಗಬೇಕೆಂಬ ಕಾರಣಕ್ಕೆ ಈ ಚರ್ಚೆಯನ್ನು ಏರ್ಪಡಿಸಲಾಗಿದೆ - ಜಾಗೃತ ಕರ್ನಾಟಕ

- Advertisement -
- Advertisement -

‘ರೈತ ವಿರೋಧಿ ಕಾಯ್ದೆಗಳು ಮತ್ತು ಕರ್ನಾಟಕಕ್ಕಾಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?’ ಎಂಬ ವಿಷಯದ ಕುರಿತು ರಾಜ್ಯದ ಹಾಗೂ ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆಯನ್ನು ‘ಜಾಗೃತ ಕರ್ನಾಟಕ’ ಸಂಘಟನೆ ಆಯೋಜಿಸಿದೆ. ಸಭೆಯು ಜನವರಿ 10 ರ ಭಾನುವಾರ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಗಾಂಧಿ ಭವನದ ಜೆ.ಸಿ. ಕುಮಾರಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರೈತ ಪ್ರತಿನಿಧಿಗಳು ತಮ್ಮ ತಮ್ಮ ರಾಜ್ಯಗಳ ಪರಿಸ್ಥಿತಿಯ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘಂ ಮುಖಂಡ ಸೆಲ್ವಮುತ್ತು, ಆಂಧ್ರ ಪ್ರದೇಶದ ರೈತು ಸ್ವರಾಜ್ಯ ವೇದಿಕೆ ಮುಖಂಡ ಕಿರಣ್ ಕುಮಾರ್‌ ವಿಸ್ಸಾ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ರಜಾಕ್ ಉಸ್ತಾದ್ ಸೇರಿದಂತೆ ಹಲವರು ಮಾತನಾಡಲಿದ್ದಾರೆ.

ನಂತರ ಪ್ರಾಧ್ಯಾಪಕರು ಮತ್ತು ಅಂಕಣಕಾರರಾದ ಎ.ನಾರಾಯಣ, ವಕೀಲರಾದ ವೀಣಾ ಬಹದ್ದೂರ್ ದೇಸಾಯಿ, ನಾವು ದ್ರಾವಿಡ ಕನ್ನಡಿಗರು ಚಳವಳಿಯ ಅಭಿಗೌಡ, ಚಿಂತಕರಾದ ನಾಗೇಗೌಡ ಕೀಲಾರ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಪ್ರತಿಕ್ರಿಯೆ ನೀಡಲಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರದ ಸಮಸ್ಯೆಗಳು: -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಕರ್ನಾಟಕವು ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ವಿಚಾರಗಳಲ್ಲಿ ದೇಶದಲ್ಲೇ ಅತ್ಯಂತ ದುಸ್ಥಿತಿಯಲ್ಲಿದೆ ಎಂದಿರುವ ಜಾಗೃತ ಕರ್ನಾಟಕ ಸಂಘಟನೆ, ದೆಹಲಿಯ ಬಾಲಂಗೋಚಿಗಳೂ, ನಿಷ್ಕ್ರಿಯರೂ ಆದ ಪ್ರಮುಖ ರಾಜಕೀಯ ಪಕ್ಷಗಳಿಗೆ ಇವುಗಳು ಮುಖ್ಯವೇ ಅಲ್ಲ. ನಮಗಾದರೂ ಮುಖ್ಯವಾಗಬೇಕೆಂಬ ಕಾರಣಕ್ಕೆ ಈ ಚರ್ಚೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಗ್ರಾಮೀಣ ಕರ್ನಾಟಕವು ಕೇಂದ್ರ ಸರ್ಕಾರದಿಂದ ಏನನ್ನಾದರೂ ಪಡೆದುಕೊಂಡಿದೆಯೆ? ಕೊಟ್ಟಿದ್ದೆಷ್ಟು ಕಳೆದುಕೊಂಡಿದ್ದೆಷ್ಟು? ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಒಂದೇ ಪಕ್ಷದಡಿ ಇದ್ದುದರಿಂದ ಲಾಭವಾಗಿದೆಯೇ? ನಷ್ಟವಾಗಿದೆಯೆ? ಈ ಎರಡು ಪ್ರಮುಖ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಮತ್ತು ಒಕ್ಕೂಟ ಸರ್ಕಾರಗಳ ಬಳಿ ಉತ್ತರವಿದೆಯೇ? ಪ್ರತಿಪಕ್ಷಗಳೇಕೆ ಈ ಪ್ರಶ್ನೆಗಳನ್ನೆತ್ತುತ್ತಿಲ್ಲ? ಎಂದು ಜಾಗೃತ ಕರ್ನಾಟಕ ಪ್ರಶ್ನಿಸಿದ್ದು, ಇಂತಹ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಈ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...