Homeಚಳವಳಿರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆ

ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆ

ಕರ್ನಾಟಕವು ಕೃಷಿಗೆ ಸಂಬಂಧಿಸಿದ ಎರಡು ವಿಚಾರಗಳಲ್ಲಿ ದೇಶದಲ್ಲೇ ಅತ್ಯಂತ ದುಸ್ಥಿತಿಯಲ್ಲಿದೆ. ದೆಹಲಿಯ ಬಾಲಂಗೋಚಿಗಳೂ, ನಿಷ್ಕ್ರಿಯರೂ ಆದ ಪ್ರಮುಖ ರಾಜಕೀಯ ಪಕ್ಷಗಳಿಗೆ ಇವುಗಳು ಮುಖ್ಯವೇ ಅಲ್ಲ. ನಮಗಾದರೂ ಮುಖ್ಯವಾಗಬೇಕೆಂಬ ಕಾರಣಕ್ಕೆ ಈ ಚರ್ಚೆಯನ್ನು ಏರ್ಪಡಿಸಲಾಗಿದೆ - ಜಾಗೃತ ಕರ್ನಾಟಕ

- Advertisement -
- Advertisement -

‘ರೈತ ವಿರೋಧಿ ಕಾಯ್ದೆಗಳು ಮತ್ತು ಕರ್ನಾಟಕಕ್ಕಾಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?’ ಎಂಬ ವಿಷಯದ ಕುರಿತು ರಾಜ್ಯದ ಹಾಗೂ ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆಯನ್ನು ‘ಜಾಗೃತ ಕರ್ನಾಟಕ’ ಸಂಘಟನೆ ಆಯೋಜಿಸಿದೆ. ಸಭೆಯು ಜನವರಿ 10 ರ ಭಾನುವಾರ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಗಾಂಧಿ ಭವನದ ಜೆ.ಸಿ. ಕುಮಾರಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರೈತ ಪ್ರತಿನಿಧಿಗಳು ತಮ್ಮ ತಮ್ಮ ರಾಜ್ಯಗಳ ಪರಿಸ್ಥಿತಿಯ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘಂ ಮುಖಂಡ ಸೆಲ್ವಮುತ್ತು, ಆಂಧ್ರ ಪ್ರದೇಶದ ರೈತು ಸ್ವರಾಜ್ಯ ವೇದಿಕೆ ಮುಖಂಡ ಕಿರಣ್ ಕುಮಾರ್‌ ವಿಸ್ಸಾ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ರಜಾಕ್ ಉಸ್ತಾದ್ ಸೇರಿದಂತೆ ಹಲವರು ಮಾತನಾಡಲಿದ್ದಾರೆ.

ನಂತರ ಪ್ರಾಧ್ಯಾಪಕರು ಮತ್ತು ಅಂಕಣಕಾರರಾದ ಎ.ನಾರಾಯಣ, ವಕೀಲರಾದ ವೀಣಾ ಬಹದ್ದೂರ್ ದೇಸಾಯಿ, ನಾವು ದ್ರಾವಿಡ ಕನ್ನಡಿಗರು ಚಳವಳಿಯ ಅಭಿಗೌಡ, ಚಿಂತಕರಾದ ನಾಗೇಗೌಡ ಕೀಲಾರ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಪ್ರತಿಕ್ರಿಯೆ ನೀಡಲಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರದ ಸಮಸ್ಯೆಗಳು: -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಕರ್ನಾಟಕವು ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ವಿಚಾರಗಳಲ್ಲಿ ದೇಶದಲ್ಲೇ ಅತ್ಯಂತ ದುಸ್ಥಿತಿಯಲ್ಲಿದೆ ಎಂದಿರುವ ಜಾಗೃತ ಕರ್ನಾಟಕ ಸಂಘಟನೆ, ದೆಹಲಿಯ ಬಾಲಂಗೋಚಿಗಳೂ, ನಿಷ್ಕ್ರಿಯರೂ ಆದ ಪ್ರಮುಖ ರಾಜಕೀಯ ಪಕ್ಷಗಳಿಗೆ ಇವುಗಳು ಮುಖ್ಯವೇ ಅಲ್ಲ. ನಮಗಾದರೂ ಮುಖ್ಯವಾಗಬೇಕೆಂಬ ಕಾರಣಕ್ಕೆ ಈ ಚರ್ಚೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಗ್ರಾಮೀಣ ಕರ್ನಾಟಕವು ಕೇಂದ್ರ ಸರ್ಕಾರದಿಂದ ಏನನ್ನಾದರೂ ಪಡೆದುಕೊಂಡಿದೆಯೆ? ಕೊಟ್ಟಿದ್ದೆಷ್ಟು ಕಳೆದುಕೊಂಡಿದ್ದೆಷ್ಟು? ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಒಂದೇ ಪಕ್ಷದಡಿ ಇದ್ದುದರಿಂದ ಲಾಭವಾಗಿದೆಯೇ? ನಷ್ಟವಾಗಿದೆಯೆ? ಈ ಎರಡು ಪ್ರಮುಖ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಮತ್ತು ಒಕ್ಕೂಟ ಸರ್ಕಾರಗಳ ಬಳಿ ಉತ್ತರವಿದೆಯೇ? ಪ್ರತಿಪಕ್ಷಗಳೇಕೆ ಈ ಪ್ರಶ್ನೆಗಳನ್ನೆತ್ತುತ್ತಿಲ್ಲ? ಎಂದು ಜಾಗೃತ ಕರ್ನಾಟಕ ಪ್ರಶ್ನಿಸಿದ್ದು, ಇಂತಹ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಈ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....