Homeಚಳವಳಿಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

- Advertisement -
- Advertisement -

ಮಂಗಳವಾರ (ಮಾರ್ಚ್ 23) ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ರೈತ ಹೋರಾಟ ನಡೆಯುತ್ತಿರುವ ದೆಹಲಿಯ ಗಡಿಗಳಲ್ಲಿ ಯುವಜನರ ಬೃಹತ್ ಸಮಾವೇಶಗಳು ನಡೆಯಲಿವೆ. ದೇಶದಾದ್ಯಂತದ ಯುವಜನರು ದೆಹಲಿಯ ಪ್ರತಿಭಟನಾ ಸ್ಥಳಗಳನ್ನು ತಲುಪುತ್ತಿದ್ದು, ಬೆಳಿಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಮಾವೇಶಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಪ್ರಸ್ತುತಪಡಿಸಲಾಗುವುದು, ಅಲ್ಲಿ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ ವಿಚಾರಗಳನ್ನು ಪ್ರಸ್ತುತ ಪಡಿಸಲಾಗುವುದು. ಈ ಹುತಾತ್ಮ ದಿನವನ್ನು ರೈತರಿಗೆ ಸಮರ್ಪಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರ ಶೋಷಣೆಯ ಬಗ್ಗೆ ಭಗತ್ ಸಿಂಗ್ ಅವರ ಅಭಿಪ್ರಾಯಗಳನ್ನು ತೋರಿಸಲಾಗುವುದು ಮತ್ತು ಆಂದೋಲನವನ್ನು ಮತ್ತಷ್ಟು ಬಲಪಡಿಸಲಾಗುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಖಟ್ಕಾಡ್ ಕಲನ್, ಹಿಸಾರ್ ಮತ್ತು ಮಥುರಾದಿಂದ ಪಾದ ಯಾತ್ರೆಗಳು ದೆಹಲಿಯ ಗಡಿಯನ್ನು ತಲುಪುತ್ತಿವೆ. ಈ ಯಾತ್ರೆಗಳಿಗೆ ಭಾರಿ ಸಾರ್ವಜನಿಕ ಬೆಂಬಲ ಸಿಗುತ್ತಿದೆ. ಮಾರ್ಚ್ 26 ರ ಸಂಪೂರ್ಣ ಭಾರತ್ ಬಂದ್ ಸಂದೇಶಗಳನ್ನು ಈ ಯಾತ್ರೆಗಳ ಮೂಲಕ ಸಾರ್ವಜನಿಕರಿಗೆ ರವಾನಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ರೈತರ ಮೇಲೆ ಹೇರಲು ಬಯಸುತ್ತಿದೆ. ವಾಸ್ತವವಾಗಿ, ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಬದಲು, ಅನಾನುಕೂಲತೆಯನ್ನು ಸೃಷ್ಟಿಸಿ ರೈತರನ್ನು ದೂಷಿಸುತ್ತಿದ್ದಾರೆ. ಸಂಧಾನ ಮಾತುಕತೆಯನ್ನು ರೈತರು ನಿಗದಿಪಡಿಸಬೇಕು ಎಂದು ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. ರೈತ ಮುಖಂಡರು ಮಾತುಕತೆಗೆ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಆದರೆ, ಸರಿಯಾದ ವಾತಾವರಣದಲ್ಲಿ ಸಂವಾದದ ಪ್ರಸ್ತಾಪವನ್ನು ಸರ್ಕಾರ ಕಳುಹಿಸಬೇಕು ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಕರ್ನಾಟಕದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ರ್‍ಯಾಲಿ ನಡೆದಿದೆ, ಇದರಲ್ಲಿ ಸಮುಕ್ತ ಕಿಸಾನ್ ಮೋರ್ಚಾದ ನಾಯಕರು ಭಾಗವಹಿಸಿದ್ದರು. ರಾಜ್ಯದ ಕೃಷಿ ಸಚಿವರು ರೈತರನ್ನು ಭೇಟಿಯಾಗಿ ಅವರಿಂದ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಸೋಮವಾರ ನಡೆದ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ, ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ  ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....