Homeಮುಖಪುಟಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

ಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

- Advertisement -
- Advertisement -

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಮಾರ್ಚ್ 31ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ರ್ಯಾಲಿಯನ್ನು ಆಯೋಜಿಸುವುದಾಗಿ ಎಎಪಿ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ.

ಕೇಜ್ರಿವಾಲ್ ಅವರ ಬಂಧನದ ಸಮಯದಲ್ಲಿ ಅವರನ್ನು ಭೇಟಿ ಮಾಡಲು ನಮ್ಮ ಯಾವುದೇ ಸಚಿವರು ಮತ್ತು ಶಾಸಕರಿಗೆ ಅವಕಾಶ ನೀಡಿಲ್ಲ. ನಿನ್ನೆ ಶಹೀದಿ ದಿವಸ, ನಾವು ಭಗತ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬಯಸಿದ್ದೆವು, ಆದರೆ ನಮ್ಮನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಯಿತು ಎಂದು ಗೋಪಾಲ್ ರೈ ಅವರು ದೆಹಲಿಯಲ್ಲಿ INIDA ಮೈತ್ರಿ ನಾಯಕರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನು ಇಡಿ ಕಸ್ಟಡಿಯಲ್ಲಿದ್ದಾಗ ದೆಹಲಿ ಸರ್ಕಾರದ ಜಲ ಇಲಾಖೆಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ. ಕೇಜ್ರಿವಾಲ್‌ ಅವರ ಈ ನಡೆಯನ್ನು ದೆಹಲಿ ಸಚಿವೆ ಅತಿಶಿ  ಶ್ಲಾಘಿಸಿದ್ದಾರೆ. ಅವರು ನನಗೆ ಇಡಿ ಕಸ್ಟಡಿಯಿಂದ ಈ ನಿರ್ದೇಶನಗಳನ್ನು ನೀಡಿದ್ದಾರೆ. ನಾನು ಇದನ್ನು ಸ್ವೀಕರಿಸಿದಾಗ ನನ್ನ ಕಣ್ಣುಗಳು ಕಣ್ಣೀರಿನಿಂದ ಕೂಡಿದೆ. ಈ ಪರಿಸ್ಥಿತಿಯಲ್ಲಿಯೂ ಯಾರು ಹೀಗೆ ಯೋಚಿಸುತ್ತಾರೆ? ಜೈಲಿನಿಂದಲೂ ದೆಹಲಿಯ ಜನರ ಬಗ್ಗೆ ಯೋಚಿಸುವ ವ್ಯಕ್ತಿಯೊಬ್ಬರಿದ್ದರೆ ಅದು ಅರವಿಂದ್‌ ಕೇಜ್ರಿವಾಲ್‌ ಎಂದು ಹೇಳಿದ್ದಾರೆ.

ಎಎಪಿ ಪಕ್ಷದ ವರಿಷ್ಠ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ಬಂಧಿಸಿರುವುದನ್ನು ವಿರೋಧಿಸಿ ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿ ಬಿಜೆಪಿ ಸರ್ಕಾರದ ಪ್ರತಿಕೃತಿ ದಹಿಸಲು ಎಎಪಿ ನಿರ್ಧರಿಸಿದೆ. ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ ಮತ್ತು ಕೇಂದ್ರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಮತ್ತು ಇಡಿ ಕಚೇರಿಗೆ ಹೋಗುವ ರಸ್ತೆಗಳನ್ನು ಮುಚ್ಚಲಾಗಿದೆ.

ದೆಹಲಿಯ ಮಧ್ಯ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕಳೆದ ಗುರುವಾರದಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.  ದೆಹಲಿಯ ಮಧ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್‌ ಕಿಂಗ್‌ಪಿನ್‌ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಹೇಳಿದ್ದು, 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಇಡಿ ಆರೋಪಿಸಿದೆ, ವಿಚಾರಣೆ ಬಳಿಕ ಕೇಜ್ರಿವಾಲ್‌ಗೆ ನ್ಯಾಯಾಲಯ ಮಾ. 28ರವೆರೆಗೆ ಇಡಿ ಕಸ್ಟಡಿಯನ್ನು ನೀಡಿದೆ.

ಇದನ್ನು ಓದಿ: ಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ ‘ಕಿಂಗ್‌ಪಿನ್‌’ ಎಂದು ವಾದಿಸಿದ ಜಾರಿ ನಿರ್ದೇಶನಾಲಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...