Homeಮುಖಪುಟಮೇಘಾಲಯ ಚುನಾವಣೆ: ತುರಾ ಸ್ಟೇಡಿಯಂನಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನಿರಾಕರಣೆ

ಮೇಘಾಲಯ ಚುನಾವಣೆ: ತುರಾ ಸ್ಟೇಡಿಯಂನಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನಿರಾಕರಣೆ

- Advertisement -
- Advertisement -

ಇದೇ ಫೆಬ್ರವರಿ 27ರಂದು ನಡೆಯಲಿರುವ ಮೇಘಾಲಯ ಚುನಾವಣಾ ಪ್ರಚಾರಕ್ಕೆ ಹೆಲಿಕ್ಯಾಪ್ಟರ್‌ನಲ್ಲಿ ತೆರಳಲು ಸಿದ್ದರಾಗಿದ್ದ ಪ್ರಧಾನಿ ಮೋದಿಯವರ ತುರಾ ಸ್ಟೇಡಿಯಂನ ಕಾರ್ಯಕ್ರಮಕ್ಕೆ ಅಲ್ಲಿನ ಸರ್ಕಾರ ಅನುಮತಿ ನಿರಾಕರಿಸಿದೆ.

ಮೇಘಾಲಯದ ದಕ್ಷಿಣ ತುರಾ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಪ್ರತಿನಿಧಿಸುವ ಕ್ಷೇತ್ರವಾಗಿದೆ. ಆ ಕ್ಷೇತ್ರಕ್ಕೆ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ತೆಗೆದುಕೊಂಡ ಈ ತೀರ್ಮಾನಕ್ಕೆ ಬಿಜೆಪಿ ಕಿಡಿಕಾರಿದೆ.

2018 ರಿಂದ ಎನ್‌ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಸರ್ಕಾರದಲ್ಲಿ ಬಿಜೆಪಿ ಸಹ ಕೈಜೋಡಿಸಿತ್ತು. ಆದರೆ ಸದ್ಯ ಎರಡು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದವು. ಅಂದಿನಿಂದ, ಎನ್‌ಪಿಪಿ ಮತ್ತು ಬಿಜೆಪಿ ನಡುವೆ ತಿಕ್ಕಾಟ ಆರಂಭವಾಗಿದೆ.

127 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಫುಟ್ಭಾಲ್ ಮತ್ತು ಒಳಾಂಗಣ ಕ್ರೀಡಾಂಗಣಕ್ಕೆ ಮಾಜಿ ಮುಖ್ಯಮಂತ್ರಿ ಪಿ ಎ ಸಂಗ್ಮಾ ಹೆಸರಿಡಲಾಗಿದೆ. ಅಂತರಾಷ್ಟ್ರೀಯ ಸೌಲಭ್ಯ ಹೊಂದಿರುವ ದೇಶದ ದೊಡ್ಡ ಫುಟ್ಬಾಲ್ ಕ್ರೀಡಾಂಗಣವನ್ನು 2022ರ ಡಿಸೆಂಬರ್‌ನಲ್ಲಿ ಉದ್ಘಾಟಿಸಲಾಗಿದ್ದು, ಒಳಾಂಗಣ ಕ್ರೀಡಾಂಗಣದ ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

“ಈ ಕ್ರೀಡಾಂಗಣದ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಣ ನೀಡಿದೆ. ದೇಶದ ಪ್ರಧಾನಿಗೆ ಅನುಮತಿ ನಿರಾಕರಿಸುವುದು ದೊಡ್ಡ ಅವಮಾನ” ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ಸಿಎಂ ಕಾನ್ರಾಡ್ ಸಂಗ್ಮಾರವರು ಇದರಲ್ಲಿ ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಚುನಾವಣಾ ರ್ಯಾಲಿಗಳಿಗೆ ಅನುಮತಿ ನೀಡುವುದು ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತಗಳು. ಅದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ನಮ್ಮ ಬಹಳಷ್ಟು ರ್ಯಾಲಿಗಳಿಗೆ ಅನುಮತಿ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ನಮ್ಮ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

ಬಿಜೆಪಿ ಇದನ್ನು ದೊಡ್ಡ ಇಶ್ಯೂ ಮಾಡುತ್ತಿದ್ದಾರೆ. ನಾವು ಮೊದಲೇ ಹೇಳಿದಂತೆ ಸ್ಟೇಡಿಯಂ ಎರಡು ಭಾಗಗಳಾಗಿದ್ದು, ಒಂದು ಫುಟ್ಬಾಲ್ ಸ್ಟೇಡಿಯಂ ಮತ್ತೊಂದು ಒಳಾಂಗಣ ಕ್ರೀಡಾಂಗಣ ಮತ್ತು ಈಜುಕೊಳವಿದೆ. ಅದಿನ್ನೂ ಪೂರ್ಣಗೊಂಡಿಲ್ಲ. ಪ್ರಧಾನಿ ರ್ಯಾಲಿಗೆ ಹೆಚ್ಚು ಜನ ಸೇರಿದರೆ ಕ್ರೀಡಾಂಗಣ ಅಂದ ಮತ್ತು ನೈಸರ್ಗಿಕ ಹುಲ್ಲು ಹಾಳಾಗಬಹುದು. ಅಲ್ಲದೆ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಹ ಇಲ್ಲ. ಈ ಎಲ್ಲಾ ಕಾರಣಗಳಿಂದ ಚುನಾವಣಾ ಆಯೋಗ ಅನುಮತಿ ನಿರಾಕರಿಸಿರಬಹುದು ಎಂದಿದ್ದಾರೆ.

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...